ಕಮಲ್ ನಾಥ್ 
ದೇಶ

ಸಿಂಧಿಯಾ ಹೇಳಿದ್ದು ಸರಿ, 2 ಲಕ್ಷದವರೆಗೆ ರೈತರ ಸಾಲಮನ್ನಾ ಮಾಡುತ್ತೇವೆ: ಕಮಲ್ ನಾಥ್

ಎಐಸಿಸಿ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಅವರು ಹೇಳಿಕೆಯನ್ನು ಸ್ವಾಗತಿಸಿರುವ ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರು, ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಎರಡು ಲಕ್ಷ ರೂಪಾಯಿವರೆಗೆ ರೈತರ ಸಾಲಮನ್ನಾ ಮಾಡಲಿದೆ ಎಂದು ಶನಿವಾರ ಹೇಳಿದ್ದಾರೆ.

ಭೋಪಾಲ್: ಎಐಸಿಸಿ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಅವರು ಹೇಳಿಕೆಯನ್ನು ಸ್ವಾಗತಿಸಿರುವ ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರು, ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಎರಡು ಲಕ್ಷ ರೂಪಾಯಿವರೆಗೆ ರೈತರ ಸಾಲಮನ್ನಾ ಮಾಡಲಿದೆ ಎಂದು ಶನಿವಾರ ಹೇಳಿದ್ದಾರೆ.

ಸಿಂದಿಯಾ ಅವರು ಹೇಳಿದ್ದು ಸರಿ ಇದೆ. ಎರಡು ಲಕ್ಷ ರೂಪಾಯಿವರೆಗೆ ರೈತರ ಸಾಲಮನ್ನಾ ಮಾಡುವುದಾಗಿ ನಾವು ಭರವಸೆ ನೀಡಿದ್ದೇವು. ಆದರೆ ಮೊದಲ ಕಂತಿನಲ್ಲಿ 50 ಸಾವಿರ ರೂಪಾಯಿ ಮನ್ನಾ ಮಾಡಲಾಗಿದೆ. ಮುಂದಿನ ದಿನಗಳಲ್ಲಿ 2 ಲಕ್ಷ ರೂಪಾಯಿವರೆಗೆ ಮನ್ನಾ ಮಾಡಲಾಗುವುದು ಎಂದು ಕಮಲ್ ನಾಥ್ ತಿಳಿಸಿದ್ದಾರೆ.

ಸುಧಾರಣೆಗೆ ಸಂಬಂಧಿಸಿದ ಸಲಹೆಗಳನ್ನು ನಾನು ಸ್ವಾಗತಿಸುತ್ತೇನೆ. ಆದರೆ ಯಾರೊಬ್ಬರಿಗೂ ಮೊದಲು ಸತ್ಯ ಮತ್ತು ಅಂಕಿ ಅಂಶಗಳನ್ನು ತಿಳಿದುಕೊಂಡಿರುವುದಿಲ್ಲ ಎಂದರು.

ಮಧ್ಯ ಪ್ರದೇಶ ಸರ್ಕಾರ ರೈತರ ಸಂಪೂರ್ಣ ಸಾಲಮನ್ನಾ ಮಾಡಿಲ್ಲ. ಇದುವರೆಗೆ ಕೇವಲ 50 ಸಾವಿರ ರೂಪಾಯಿ ಮಾತ್ರ ಮನ್ನಾ ಮಾಡಲಾಗಿದೆ. ಆದರೆ ಎರಡು ಲಕ್ಷ ರೂಪಾಯಿ ಮನ್ನಾ ಮಾಡುವುದಾಗಿ ಭರವಸೆ ನೀಡಲಾಗಿತ್ತು ಎಂದು ಈ ಮುಂಚೆ ಸಿಂಧಿಯಾ ಹೇಳಿದ್ದರು. ಅಲ್ಲದೆ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂದು ಒತ್ತಾಯಿಸಿದ್ದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT