ಅರವಿಂದ್ ಕೇಜ್ರಿವಾಲ್ 
ದೇಶ

ದೆಹಲಿಯಲ್ಲಿ ಮತ್ತೆ ಸಮ-ಬೆಸ ಸಂಚಾರ: ಮಹಿಳೆಯರಿಗೆ ವಿನಾಯ್ತಿ ಘೋಷಿಸಿದ ಕೇಜ್ರಿವಾಲ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಸಮ-ಬೆಸ ಸಂಚಾರ ನಿಯಮ ಜಾರಿಗೆ ತರಲಾಗುತ್ತಿದ್ದು, ಮಹಿಳೆಯರಿಗೆ ಈ ನಿಯಮದಿಂದ ವಿನಾಯ್ತಿ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಘೋಷಿಸಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಸಮ-ಬೆಸ ಸಂಚಾರ ನಿಯಮ ಜಾರಿಗೆ ತರಲಾಗುತ್ತಿದ್ದು, ಮಹಿಳೆಯರಿಗೆ ಈ ನಿಯಮದಿಂದ ವಿನಾಯ್ತಿ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಘೋಷಿಸಿದ್ದಾರೆ.

ವಾಯುಮಾಲಿನ್ಯ ನಿಯಂತ್ರಣಕ್ಕಾಗಿ ದೆಹಲಿಯಲ್ಲಿ ಮೂರನೇ ಬಾರಿ, ನವೆಂಬರ್ 4 ರಿಂದ 15ರ ವರೆಗೆ ಸಮ - ಬೆಸ ಸಂಖ್ಯೆಯ ವಾಹನ ಸಂಚಾರ ನಿಯಮ ಜಾರಿಗೆ ತರಲಾಗುವುದು. ಈ ಬಾರಿ ಖಾಸಗಿ ಸಿಎನ್ ಜಿ ವಾಹನಗಳಿಗೆ ವಿನಾಯ್ತಿ ನೀಡುವುದಿಲ್ಲ ಎಂದು ಕೇಜ್ರಿವಾಲ್‌ ತಿಳಿಸಿದ್ದಾರೆ.

ಮಹಿಳಾ ಚಾಲಕರು ಇರುವ ಹಾಗೂ ವಾಹನದಲ್ಲಿ ಎಲ್ಲಾ ಮಹಿಳೆಯರು ಮತ್ತು 12 ವರ್ಷದೊಳಗಿನ ಮಕ್ಕಳು ಇರುವ ವಾಹನಕ್ಕೆ ವಿನಾಯ್ತಿ ನೀಡಲಾಗಿದೆ ಎಂದು ದೆಹಲಿ ಸಿಎಂ ತಿಳಿಸಿದ್ದಾರೆ.

ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇನ್ನು ದ್ವಿಚಕ್ರ ವಾಹನಗಳಿಗೆ ಸಮ-ಬೆಸ ಸಂಚಾರ ನಿಯಮದಿಂದ ವಿನಾಯ್ತಿ ನೀಡಬೇಕೆ ಅಥವಾ ಬೇಡವೇ ಎಂಬ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ತಜ್ಞರೊಂದಿಗೆ ಚರ್ಚಿಸಿ ಈ ಕುರಿತು ನಿರ್ಧಾರ ಪ್ರಕಟಿಸುವುದಾಗಿ ಸಿಎಂ ತಿಳಿಸಿದ್ದಾರೆ.

ಚಳಿಗಾಲದಲ್ಲಿ ವಾಯು ಮಾಲಿನ್ಯ ಪ್ರಮಾಣ ಏರಿಕೆಯಾಗುವ ಹಿನ್ನಲೆಯಲ್ಲಿ ನವೆಂಬರ್‌ 4ರಿಂದ 15ರವರೆಗೆ ಅಂದರೆ ಒಟ್ಟು 12 ದಿನಗಳ ಕಾಲ ಸಮ-ಬೆಸ ಸಂಚಾರ ವ್ಯವಸ್ಥೆ ಮಾಡಲಾಗುವುದು ಎಂದು ಕೇಜ್ರಿವಾಲ್‌ ಹೇಳಿದ್ದಾರೆ.

ಇದರ ಪ್ರಕಾರ ನವೆಂಬರ್‌ 4, 6, 8, 10, 12, 14ರಂದು ಸಮ ಸಂಖ್ಯೆ ನೋಂದಣಿಯ  ವಾಹನಗಳು ರಸ್ತೆಗಿಳಿಯಬಹುದು. ಪರ್ಯಾಯ ದಿನಗಳಲ್ಲಿ ಬೆಸ ಸಂಖ್ಯೆ ನೋಂದಣಿ ಹೊಂದಿದ ವಾಹನಗಳಿಗೆ ರಸ್ತೆಗಿಳಿಯಲು ಅವಕಾಶವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT