ಪ್ರಧಾನಿ ಮೋದಿ ಅಣ್ಣನ ಮಗಳ ಪರ್ಸ್ ಕದ್ದ ಕಳ್ಳನನ್ನು ಗುರ್ತಿಸಿದ ಪೊಲೀಸರು 
ದೇಶ

ಪ್ರಧಾನಿ ಮೋದಿ ಅಣ್ಣನ ಮಗಳ ಪರ್ಸ್ ಕದ್ದ ಕಳ್ಳರನ್ನು ಗುರ್ತಿಸಿದ ಪೊಲೀಸರು

ರಾಜಧಾನಿ ದೆಹಲಿಯಲ್ಲಿ ಕಳ್ಳರಿಬ್ಬರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಣ್ಣನ ಮಗಳ ಪರ್ಸ್ ಕದ್ದು ಪರಾರಿಯಾಗಿದ್ದ ಕಳ್ಳರನ್ನು ಪೊಲೀಸರು ಗುರ್ತಿಸಿದ್ದಾರೆ. 

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಕಳ್ಳರಿಬ್ಬರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಣ್ಣನ ಮಗಳ ಪರ್ಸ್ ಕದ್ದು ಪರಾರಿಯಾಗಿದ್ದ ಕಳ್ಳರನ್ನು ಪೊಲೀಸರು ಗುರ್ತಿಸಿದ್ದಾರೆ. 

ಪ್ರಧಾನಿ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿಯವರ ಮಗಳಾದ ದಮಯಂತಿ ಬೆನ್ ಮೋದಿ ನಿನ್ನೆ ಪರ್ಸ್ ಕಳೆದುಕೊಂಡಿದ್ದರು. ಅಹ್ಮದಾಬಾದ್'ನಿಂದ ದೆಹಲಿಗೆ ಬಂದಿದ್ದ ದಮಯಂತಿ ಅವರು ಇಲ್ಲಿನ ಗುಜರಾತಿ ಭವನ ಮುಂಭಾಗ ತೆರಳುತ್ತಿದ್ದ ವೇಳೆ ಬೈಕ್ ನಲ್ಲಿ ಬಂದಿರುವ ಕಳ್ಳರಿಬ್ಬರು ಪರ್ಸ್ ಎಗರಿಸಿ ಪರಾರಿಯಾಗಿದ್ದರು. 

ಪರ್ಸ್ ನಲ್ಲಿ ರೂ.56 ಸಾವಿರ, ಎರಡು ಮೊಬೈಲ್ ಫೋನ್, ಮಹತ್ವದ ದಾಖಲೆಗಳು ಇದ್ದವು ಎಂದು ದಮಯಂತಿ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಕಳ್ಳರ ಪತ್ತೆಗೆ ತೀವ್ರ ಹುಡುಕಾಟ ಆರಂಭಿಸಿದ್ದರು. ಇದೀಗ ಸಿಸಿಟಿವಿಯಲ್ಲಿ ದೊರೆತ ದೃಶ್ಯಾವಳಿಗಳ ಮೂಲಕ ಕಳ್ಳರನ್ನು ಪತ್ತೆ ಹಚ್ಚಿದ್ದಾರೆಂದು ವರದಿಗಳು ತಿಳಿಸಿವೆ. 

ಇಬ್ಬರು ಆರೋಪಿಗಳ ಪೈಕಿ ಓರ್ವ ಅಪ್ರಾಪ್ತ ಬಾಲಕನಿರುವುದು ಕಂಡು ಬಂದಿದೆ. ಶೀಘ್ರದಲ್ಲಿಯೇ ಇಬ್ಬರನ್ನೂ ಬಂಧನಕ್ಕೊಳಪಡಿಸಲಾಗುತ್ತದೆ ಎಂದು ದೆಹಲಿ ಪೊಲೀಸ್ ವಕ್ತಾರ ಸಹಾಯಕ ಪೊಲೀಸ್ ಆಯುಕ್ತ ಅನಿಲ್ ಮಿಟ್ಟಲ್ ಅವರು ಹೇಳಿದ್ದಾರೆ. 

ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗಿದ್ದು, ಆರೋಪಿಗಳ ಬಂಧನಕ್ಕೆ ಸಾಕಷ್ಟು ತಂಡಗಳನ್ನು ರಚನೆ ಮಾಡಲಾಗಿದೆ. ಈ ತಂಡಗಳ ಪೈಕಿ ಒಂದು ತಂಡ ಆರೋಪಿಗಳನ್ನು ಗೂರ್ತಿಸಿದ್ದು, ಆರೋಪಿಗಳು ದೆಹಲಿ ಮೂಲದವರೆಂದು ತಿಳಿಸಿದ್ದಾರೆಂದು ಮಾಹಿತಿ ನೀಡಿದ್ದಾರೆ. 

ಶಂಕಿತ ಆರೋಪಿಗಳನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆರೋಪಿಗಳ ಕುರಿತು ಅಧಿಕಾರಿಗಳು ಈವರೆಗೂ ಯಾವೂದೇ ಮಾಹಿತಿಗಳನ್ನು ಬಹಿರಂಗಪಡಿಸಿಲ್ಲ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!