ಸಂಗ್ರಹ ಚಿತ್ರ 
ದೇಶ

ಆಂಧ್ರ ಪ್ರದೇಶ ಸಿಎಂ ಜಗನ್ ರೆಡ್ಡಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಕಿಡಿಕಾರಿದ್ದಾರೆ.

ಹೈದರಾಬಾದ್: ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಕಿಡಿಕಾರಿದ್ದಾರೆ.

ಪಕ್ಷದ ಸಭೆಯೊಂದರಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿ ಜಗನ್ ಮಾನಸಿಕ ಅಸ್ವಸ್ಥರಾಗಿದ್ದಾರೆ. ರಾಜ್ಯ ಸರ್ಕಾರವು ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ವೈಎಸ್ಆರ್ಸಿಪಿ ಸರ್ಕಾರ ಜನ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿದೆ. ಇತರ ಪಕ್ಷಗಳ ಮುಖಂಡರ ಮೇಲೆ ಅನಗತ್ಯ ಮತ್ತು ಕಾನೂನು ಬಾಹಿರ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಪೊಲೀಸರು ಅನಗತ್ಯ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ. ನಾನು ಒಳ್ಳೆಯವರಿಗೆ ಒಳ್ಳೆಯವನು. ಆದರೆ ಜಗನ್ ಸೈಕೋನಂತೆ ವರ್ತಿಸುತ್ತಿದ್ದಾರೆ ಎಂದು ನಾಯ್ಡು ಪರೋಕ್ಷ ಆಕ್ರೋಶ ವ್ಯಕ್ತಪಡಿಸಿದರು.

"ವೈಎಸ್ಆರ್ಸಿಪಿ ಪಕ್ಷದ ನಾಯಕರು ರಾಜ್ಯದಲ್ಲಿ 'ಜೆ ಟ್ಯಾಕ್ಸ್' (ಜಗನ್ ತೆರಿಗೆ) ವಸೂಲಿ ಮಾಡುತ್ತಿದ್ದಾರೆ. ನಾನು ಅನೇಕ ಮುಖ್ಯಮಂತ್ರಿಗಳನ್ನು ನೋಡಿದ್ದೇನೆ. ಆದರೆ ಇವರಂತಹ ಸೈಕೋ ಮುಖ್ಯಮಂತ್ರಿಯನ್ನು ನಾನು ನೋಡಿಲ್ಲ. ಕಾನೂನು ಎಲ್ಲರಿಗೂ ಒಂದೇ ಆಗಿರಬೇಕು. ಸರ್ಕಾರ ತನ್ನ ಸೊಕ್ಕಿನ ಮನೋಭಾವವನ್ನು ಬದಲಾಯಿಸಿಕೊಳ್ಳಬೇಕೆಂದು ನಾನು ಎಚ್ಚರಿಸುತ್ತೇನೆ. ಈ ಸರ್ಕಾರ ನಮ್ಮ ಪಕ್ಷದ ಮುಖಂಡರನ್ನು ಗುರಿಯಾಗಿಸಿಕೊಂಡಿದೆ. ಅದು ನ್ಯಾಯ ಸಮ್ಮತವಲ್ಲ 'ಎಂದು ನಾಯ್ಡು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT