ಭಾರತದಲ್ಲಿರುವ ಮುಸ್ಲಿಮರು ಅತ್ಯಂತ ಸಂತೋಷದಿಂದಿದ್ದಾರೆ, ಏಕೆಂದರೆ ನಾವು ಹಿಂದೂಗಳು: ಆರ್ ಎಸ್ಎಸ್ ಮುಖ್ಯಸ್ಥ ಭಾಗ್ವತ್ 
ದೇಶ

ಭಾರತದಲ್ಲಿರುವ ಮುಸ್ಲಿಮರು ಅತ್ಯಂತ ಸಂತೋಷದಿಂದಿದ್ದಾರೆ, ಏಕೆಂದರೆ ನಾವು ಹಿಂದೂಗಳು: ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್

ವಿಶ್ವದಲ್ಲಿ ಅತ್ಯಂತ ಸಂತೋಷದಿಂದ ಇರುವ ಮುಸ್ಲಿಮರು ಕಾಣಸಿಗುವುದು ಭಾರತದಲ್ಲಿ ಇದಕ್ಕೆ ಕಾರಣ ಹಿಂದೂ ಸಂಸ್ಕೃತಿ ಎಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. 

ಒಡಿಶಾ: ವಿಶ್ವದಲ್ಲಿ ಅತ್ಯಂತ ಸಂತೋಷದಿಂದ ಇರುವ ಮುಸ್ಲಿಮರು ಕಾಣಸಿಗುವುದು ಭಾರತದಲ್ಲಿ ಇದಕ್ಕೆ ಕಾರಣ ಹಿಂದೂ ಸಂಸ್ಕೃತಿ ಎಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. 

9 ದಿನಗಳ ಕಾಲ ಒಡಿಶಾ ಪ್ರವಾಸದಲ್ಲಿರುವ ಮೋಹನ್ ಭಾಗ್ವತ್ ಅಖಿಲ ಭಾರತೀಯ ಕಾರ್ಯಕಾರಿ ಮಂಡಲದಲ್ಲಿ ಭಾಗಿಯಾಗಿ ಮಾತನಾಡಿದ್ದಾರೆ. ಇದೇ ಮೊದಲ ಬಾರಿಗೆ ಒಡಿಶಾದಲ್ಲಿ ಆರ್ ಎಸ್ಎಸ್ ನ ವಾರ್ಷಿಕ ಸಭೆ ನಡೆಯುತ್ತಿದೆ. 

ಹಿಂದೂ ಎನ್ನುವುದು ಧರ್ಮ ಅಥವಾ ಭಾಷೆಯಲ್ಲ. ಅದು ದೇಶದ ಹೆಸರೂ ಅಲ್ಲ. ಹಿಂದೂ ಎನ್ನುವುದು ಭಾರತದಲ್ಲಿ ಜೀವಿಸುತ್ತಿರುವ ಜನರ, ವಿವಿಧತೆಯನ್ನು ಗೌರವಿಸುವ ಒಪ್ಪಿಕೊಳ್ಳುವ  ಸಂಸ್ಕೃತಿ ಎಂದು ಮೋಹನ್ ಭಾಗ್ವತ್ ಅಭಿಪ್ರಾಯಪಟ್ಟಿದ್ದಾರೆ.

ಸರಿ ದಾರಿಯಿಂದ ಯಾವುದೇ ದೇಶ ಹೊರನಡೆದರೆ ಅದು ಸತ್ಯದ ಶೋಧನೆಗಾಗಿ ನಮ್ಮಲ್ಲಿ ಬರುತ್ತದೆ. ಜ್ಯೂಗಳು ಆಶ್ರಯಕ್ಕಾಗಿ ಎದುರು ನೋಡುತ್ತಿದ್ದಾಗ ಅವರಿಗೆ ಆಶ್ರಯ ನೀಡಿದ ಏಕೈಕ ರಾಷ್ಟ್ರ ಭಾರತವಾಗಿತ್ತು. ಭಾರತದಲ್ಲಿ ಅತ್ಯಂತ ಸಂತೋಷವಾಗಿರುವ ಮುಸ್ಲಿಮರು ಕಾಣಸಿಗುತ್ತಾರೆ. ಏಕೆಂದರೆ ನಾವು ಹಿಂದೂಗಳು, ಆರ್ ಎಸ್ಎಸ್ ಹಾಗೂ ಸಮಾಜ ಒಟ್ಟಿಗೆ ಕಾರ್ಯ ನಿರ್ವಹಿಸಬೇಕು, ಒಂದೇ ಸಂಘಟನೆಯಾಗಿ ಕಾರ್ಯನಿರ್ವಹಿಸಬೇಕೆಂಬುದು ತಮ್ಮ ಆಶಯವಾಗಿದೆ ಎಂದು ಭಾಗ್ವತ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!

ಸಾರಿಗೆ ಸಚಿವ byrati suresh ದಿಢೀರ್ ಸಿಟಿ ರೌಂಡ್ಸ್, ರಾತ್ರೋರಾತ್ರಿ BMTC ಚಾಲಕ, ನಿರ್ವಾಹಕರಿಗೆ ಅಮಾನತು ಶಾಕ್, Video

'ತಪ್ಪು ನಿರ್ಧಾರ ತೆಗೆದುಕೊಂಡಿದ್ದೀರಿ, ಅದರ ಬೆಲೆ ತೆರಬೇಕಾಗುತ್ತದೆ': Hormuz ಬಂದ್ ಮಾಡಿದ ಇರಾನ್, ಅಮೆರಿಕ ಮತ್ತೊಂದು ವೈಮಾನಿಕ ದಾಳಿ

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!