ಭಾರತದಲ್ಲಿರುವ ಮುಸ್ಲಿಮರು ಅತ್ಯಂತ ಸಂತೋಷದಿಂದಿದ್ದಾರೆ, ಏಕೆಂದರೆ ನಾವು ಹಿಂದೂಗಳು: ಆರ್ ಎಸ್ಎಸ್ ಮುಖ್ಯಸ್ಥ ಭಾಗ್ವತ್ 
ದೇಶ

ಭಾರತದಲ್ಲಿರುವ ಮುಸ್ಲಿಮರು ಅತ್ಯಂತ ಸಂತೋಷದಿಂದಿದ್ದಾರೆ, ಏಕೆಂದರೆ ನಾವು ಹಿಂದೂಗಳು: ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್

ವಿಶ್ವದಲ್ಲಿ ಅತ್ಯಂತ ಸಂತೋಷದಿಂದ ಇರುವ ಮುಸ್ಲಿಮರು ಕಾಣಸಿಗುವುದು ಭಾರತದಲ್ಲಿ ಇದಕ್ಕೆ ಕಾರಣ ಹಿಂದೂ ಸಂಸ್ಕೃತಿ ಎಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. 

ಒಡಿಶಾ: ವಿಶ್ವದಲ್ಲಿ ಅತ್ಯಂತ ಸಂತೋಷದಿಂದ ಇರುವ ಮುಸ್ಲಿಮರು ಕಾಣಸಿಗುವುದು ಭಾರತದಲ್ಲಿ ಇದಕ್ಕೆ ಕಾರಣ ಹಿಂದೂ ಸಂಸ್ಕೃತಿ ಎಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. 

9 ದಿನಗಳ ಕಾಲ ಒಡಿಶಾ ಪ್ರವಾಸದಲ್ಲಿರುವ ಮೋಹನ್ ಭಾಗ್ವತ್ ಅಖಿಲ ಭಾರತೀಯ ಕಾರ್ಯಕಾರಿ ಮಂಡಲದಲ್ಲಿ ಭಾಗಿಯಾಗಿ ಮಾತನಾಡಿದ್ದಾರೆ. ಇದೇ ಮೊದಲ ಬಾರಿಗೆ ಒಡಿಶಾದಲ್ಲಿ ಆರ್ ಎಸ್ಎಸ್ ನ ವಾರ್ಷಿಕ ಸಭೆ ನಡೆಯುತ್ತಿದೆ. 

ಹಿಂದೂ ಎನ್ನುವುದು ಧರ್ಮ ಅಥವಾ ಭಾಷೆಯಲ್ಲ. ಅದು ದೇಶದ ಹೆಸರೂ ಅಲ್ಲ. ಹಿಂದೂ ಎನ್ನುವುದು ಭಾರತದಲ್ಲಿ ಜೀವಿಸುತ್ತಿರುವ ಜನರ, ವಿವಿಧತೆಯನ್ನು ಗೌರವಿಸುವ ಒಪ್ಪಿಕೊಳ್ಳುವ  ಸಂಸ್ಕೃತಿ ಎಂದು ಮೋಹನ್ ಭಾಗ್ವತ್ ಅಭಿಪ್ರಾಯಪಟ್ಟಿದ್ದಾರೆ.

ಸರಿ ದಾರಿಯಿಂದ ಯಾವುದೇ ದೇಶ ಹೊರನಡೆದರೆ ಅದು ಸತ್ಯದ ಶೋಧನೆಗಾಗಿ ನಮ್ಮಲ್ಲಿ ಬರುತ್ತದೆ. ಜ್ಯೂಗಳು ಆಶ್ರಯಕ್ಕಾಗಿ ಎದುರು ನೋಡುತ್ತಿದ್ದಾಗ ಅವರಿಗೆ ಆಶ್ರಯ ನೀಡಿದ ಏಕೈಕ ರಾಷ್ಟ್ರ ಭಾರತವಾಗಿತ್ತು. ಭಾರತದಲ್ಲಿ ಅತ್ಯಂತ ಸಂತೋಷವಾಗಿರುವ ಮುಸ್ಲಿಮರು ಕಾಣಸಿಗುತ್ತಾರೆ. ಏಕೆಂದರೆ ನಾವು ಹಿಂದೂಗಳು, ಆರ್ ಎಸ್ಎಸ್ ಹಾಗೂ ಸಮಾಜ ಒಟ್ಟಿಗೆ ಕಾರ್ಯ ನಿರ್ವಹಿಸಬೇಕು, ಒಂದೇ ಸಂಘಟನೆಯಾಗಿ ಕಾರ್ಯನಿರ್ವಹಿಸಬೇಕೆಂಬುದು ತಮ್ಮ ಆಶಯವಾಗಿದೆ ಎಂದು ಭಾಗ್ವತ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT