ಸಾಂದರ್ಭಿಕ ಚಿತ್ರ 
ದೇಶ

ಬೆಂಗಳೂರು ಸೇರಿದಂತೆ ದಕ್ಷಿಣ ಭಾರತದಲ್ಲಿ ಬಾಂಗ್ಲಾ ಉಗ್ರ ಸಂಘಟನೆಯ ಜಾಡು ಪತ್ತೆ, ಆರ್‌ಎಸ್‌ಎಸ್ ನಾಯಕರೇ ಟಾರ್ಗೆಟ್

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ದಕ್ಷಿಣ ಭಾರತದ ಹಲವು ನಗರಗಳಲ್ಲಿ ಬಾಂಗ್ಲಾದೇಶದ ನಿಷೇಧಿತ ಜಮಾತ್ ಉಲ್ ಮುಜಾಹಿದೀನ್ ಬಾಂಗ್ಲಾದೇಶ್(ಜೆಎಂಬಿ) ಉಗ್ರ ಸಂಘಟನೆಯ ಜಾಡು ಪತ್ತೆಯಾಗಿದ್ದು...

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ದಕ್ಷಿಣ ಭಾರತದ ಹಲವು ನಗರಗಳಲ್ಲಿ ಬಾಂಗ್ಲಾದೇಶದ ನಿಷೇಧಿತ ಜಮಾತ್ ಉಲ್ ಮುಜಾಹಿದೀನ್ ಬಾಂಗ್ಲಾದೇಶ್(ಜೆಎಂಬಿ) ಉಗ್ರ ಸಂಘಟನೆಯ ಜಾಡು ಪತ್ತೆಯಾಗಿದ್ದು, 125ಕ್ಕೂ ಹೆಚ್ಚು ಶಂಕಿತ ಉಗ್ರರು ವಿವಿಧ ರಾಜ್ಯಗಳಲ್ಲಿ ಬೀಡುಬಿಟ್ಟಿದ್ದಾರೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಯ ಮುಖ್ಯಸ್ಥ ವೈಸಿ ಮೋದಿ ಅವರು ತಿಳಿಸಿದ್ದಾರೆ.

ಇಂದು ದೆಹಲಿಯಲ್ಲಿ ಭಯೋತ್ಪಾದನೆ ನಿಗ್ರಹ ದಳ(ಎಟಿಎಸ್)ಗಳ ಮುಖ್ಯಸ್ಥರ ಸಮಾವೇಶ ಉದ್ದೇಶಿಸಿ ಮಾತನಾಡಿದ ಮೋದಿ, ಕರ್ನಾಟಕ, ಕೇರಳ, ಜಾರ್ಖಂಡ್, ಮಹಾರಾಷ್ಟ್ರ ಹಾಗೂ ಬಿಹಾರದಲ್ಲಿ ಜೆಎಂಬಿ ಚಟುವಟಿಕೆಗಳನ್ನು ಗುರುತಿಸಲಾಗಿದೆ. ಈ ರಾಜ್ಯಗಳ್ಲಿ ಬೀಡು ಬಿಟ್ಟಿರುವ 125 ಶಂಕಿತ ಉಗ್ರರು ಜೆಎಂಬಿ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದರು.

ಬೆಂಗಳೂರಿನಲ್ಲಿ ಐಸಿಸ್ ಹಾಗೂ ಜೆಎಂಬಿ ಉಗ್ರರು ಬೀಡು ಬಿಟ್ಟಿದ್ದಾರೆ. ಕರ್ನಾಟಕ, ಕೇರಳದಲ್ಲಿ ಜೆಎಂಬಿ ಉಗ್ರರು ಸಕ್ರಿಯರಾಗಿದ್ದು,  ಆರ್‌ಎಸ್‌ಎಸ್ ನಾಯಕರನ್ನು ಟಾರ್ಗೆಟ್ ಮಾಡುತ್ತಿದ್ದಿದ್ದಾರೆ ಎಂದು ಎನ್‍ಐಎ ಮೂಲಗಳಿಂದ ತಿಳಿದು ಬಂದಿದೆ.

ರಾಜ್ಯ ರಾಜಧಾನಿಯಲ್ಲೇ ಉಗ್ರರ ಬಗ್ಗೆ ಮಾಹಿತಿ ಪತ್ತೆಯಾಗಿದ್ದು, 125 ಶಂಕಿತ ಉಗ್ರರ ಬಗ್ಗೆ ಎನ್‍ಐಎ ಮಾಹಿತಿ ಸಂಗ್ರಹಿಸಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರಗಳಿಗೆ ರಾಷ್ಟ್ರೀಯ ತನಿಖಾ ದಳ ಹೈಅಲರ್ಟ್ ನೀಡಿದ್ದು, ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್) ಮುಖ್ಯಸ್ಥರ ಸಭೆಯಲ್ಲಿ ಎನ್‍ಐಎ ಮುಖ್ಯಸ್ಥ ಅಲೋಕ್ ಮಿತ್ತಲ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT