ಎಂಐ-17 
ದೇಶ

ಬದ್ಗಾಮ್ ಎಂಐ-17 ಪತನದಲ್ಲಿ 6 ಯೋಧರ ಸಾವು ಪ್ರಕರಣ: 6 ಅಧಿಕಾರಗಳ ವಿರುದ್ಧ ಕ್ರಮ

ಫೆಬ್ರವರಿ 27ರಂದು ಶ್ರೀನಗರದ ಬದ್ಗಾಮ್ ನಲ್ಲಿ ಎಂಐ-17 ಕಾಪ್ಟರ್ ಪತನಗೊಂಡು ಆರು ಯೋಧರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ವಾಯುಪಡೆಯ ಆರು ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡಿದೆ.

ನವದೆಹಲಿ: ಫೆಬ್ರವರಿ 27ರಂದು ಶ್ರೀನಗರದ ಬದ್ಗಾಮ್ ನಲ್ಲಿ ಎಂಐ-17 ಕಾಪ್ಟರ್ ಪತನಗೊಂಡು ಆರು ಯೋಧರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ವಾಯುಪಡೆಯ ಆರು ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡಿದೆ. 

ಆರು ಅಧಿಕಾರಿಗಳ ಪೈಕಿ ಇಬ್ಬರು ಕೋರ್ಟ್ ಮಾರ್ಷಲ್ ಎದುರಿಸಬೇಕಾಗಿದೆ. ವಿಮಾನ ಪತನ ಪ್ರಕರಣದಲ್ಲಿ ಅಧಿಕಾರಿಗಳ ವಿರುದ್ಧ ಸಾಕ್ಷ್ಯಗಳು ದೊರೆತಿರುವ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲು ಶಿಫಾರಸು ಮಾಡಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. 

ಪುಲ್ವಾಮಾ ಯೋಧರ ನರಮೇದ ನಂತರ ಫೆಬ್ರವರಿ 26ರಂದು ಪ್ರತೀಕಾರವಾಗಿ ಪಾಕ್ ನ ಬಾಲಾಕೋಟ್ ಮೇಲೆ ಭಾರತೀಯ ವಾಯುಪಡೆ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಫೆ.27ರಂದು ಬೆಳಗ್ಗೆ ಪಾಕಿಸ್ತಾನ ಮರುದಾಳಿ ನಡೆಸಲು ಮುಂದಾಗಿತ್ತು. 

ಈ ವೇಳೆ ಭಾರತೀಯ ವಾಯುಪಡೆಗೆ ಸೇರಿದ ಎಂಐ-17 ಕಾಪ್ಟರ್ ಪತನಗೊಂಡಿತ್ತು. ಪತನದ ತನಿಖೆಯಲ್ಲಿ ಪಾಕಿಸ್ತಾನದ ಕಾಪ್ಟರ್ ಎಂದು ತಪ್ಪಾಗಿ ಅಂದಾಜಿಸಿ ಭಾರತೀಯ ವಾಯುಪಡೆಯ ಯೋಧರೇ ಕ್ಷಿಪಣಿ ದಾಳಿ ನಡೆಸಿದ್ದರು ಎಂಬುದು ಬೆಳಕಿಗೆ ಬಂದಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT