ಸುಬ್ರಮಣಿಯನ್ ಸ್ವಾಮಿ 
ದೇಶ

ಚಕ್ರವರ್ತಿಯ 'ನಗ್ನ'ತೆಯ ಅರಿವಿಲ್ಲದವರು: ಮೋದಿ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಸುಬ್ರಹ್ಮಣ್ಯನ್‌ ಸ್ವಾಮಿ ವಾಗ್ದಾಳಿ

ನರೇಂದ್ರ ಮೋದಿ ನೇತೃತ್ವದ ಆರ್ಥಿಕ ನೀತಿಗಳ ನಿರಂತವಾಗಿ ವಾಗ್ದಾಳಿ ಮಾಡುತ್ತಿರುವ ಸ್ವಪಕ್ಷಿಯರೇ ಆದ ಬಿಜೆಪಿ ಹಿರಿಯ ಮುಖಂಡ ಡಾ. ಸುಬ್ರಹ್ಮಣ್ಯನ್‌ ಸ್ವಾಮಿ ಆರ್ಥಿಕ ಕುಸಿತ ಇಲ್ಲ ಎಂದು ನಿರಾಕರಿಸುತ್ತಿರುವ ಸಚಿವರಿಗೆ ವಿವೇಚನೆಯೂ ಇಲ್ಲ ದೂರದೃಷ್ಟಿಯೂ ಇಲ್ಲ ಎಂದು ಬಲವಾಗಿ ಟೀಕಿಸಿದ್ದಾರೆ.

ನವದೆಹಲಿ : ನರೇಂದ್ರ ಮೋದಿ ನೇತೃತ್ವದ ಆರ್ಥಿಕ ನೀತಿಗಳ ನಿರಂತವಾಗಿ ವಾಗ್ದಾಳಿ ಮಾಡುತ್ತಿರುವ ಸ್ವಪಕ್ಷಿಯರೇ ಆದ ಬಿಜೆಪಿ ಹಿರಿಯ ಮುಖಂಡ ಡಾ. ಸುಬ್ರಹ್ಮಣ್ಯನ್‌ ಸ್ವಾಮಿ ಆರ್ಥಿಕ ಕುಸಿತ ಇಲ್ಲ ಎಂದು ನಿರಾಕರಿಸುತ್ತಿರುವ ಸಚಿವರಿಗೆ ವಿವೇಚನೆಯೂ ಇಲ್ಲ ದೂರದೃಷ್ಟಿಯೂ ಇಲ್ಲ ಎಂದು ಬಲವಾಗಿ ಟೀಕಿಸಿದ್ದಾರೆ.

" ಬಟ್ಟೆ ಧರಿಸದಿರುವುದು [ನಗ್ನತೆ] ಯಾರಿಗೆ ಕಾಣಿಸುತ್ತಿಲ್ಲವೋ ಅಂತಹವರ ಹೇಳಿಕೆ ಕೂಡಾ ಅನಗತ್ಯ ಮತ್ತು ಅಪ್ರಸ್ತುತವಾಗುತ್ತದೆ " ಎಂದು ಅವರು ಟ್ವೀಟರ್ ನಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

ದೇಶದ ಆರ್ಥಿಕ ಸಂಕಷ್ಟ ಹೆಚ್ಚಾಗುತ್ತಿದ್ದು ಗ್ರಾಹಕ ಬೇಡಿಕೆ ಗಣನೀಯವಾಗಿ ಕುಸಿದಿದೆ ಎಂದು ಅರ್‌ಬಿಐ ಅಂಕಿ ಅಂಶಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ವರದಿ ಮಾಡಿದ ಬೆನ್ನಲ್ಲೆ ಸ್ವಾಮಿ ಅವರು ಹೇಳಿಕೆ ಹೊರಬಿದ್ದಿದೆ . ದೇಶದಲ್ಲಿ ಆರ್ಥಿಕ ಹಿಂಜರಿತ ಇಲ್ಲ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅಲ್ಲಗಳೆದ ಕೆಲವೇ ಗಂಟೆಗಳ ಅವಧಿಯಲ್ಲಿ ಸ್ವಾಮಿ ಅವರು ಮೋದಿ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ಮಾಡಿದ್ದಾರೆ.

ಇದಕ್ಕೆ ಹಿಂದೆ ಸೆ. ೨೭ಕ್ಕೆ ಹೊರಬಂದ ಪಾಕ್ಷಿಕದಲ್ಲಿ ಸಹ ಬ್ಯಾಂಕ್ ಸಾಲದ ಪ್ರಗತಿ ಶೇ. ೮.೮ಕ್ಕೆ ಕುಸಿದಿದೆ ಎಂದು ಹೇಳುವ ವರದಿಯಲ್ಲಿ ಸಹ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕೆ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!