ಅಭಿಜಿತ್ ಬ್ಯಾನರ್ಜಿ 
ದೇಶ

ಭಾರತದ ಆರ್ಥಿಕತೆ ಅತ್ಯಂತ ದುರ್ಬಲವಾಗಿದೆ, ಸುಧಾರಿಸುವ ಭರವಸೆಯೂ ಇಲ್ಲ: ನೊಬೆಲ್‌ ಪುರಸ್ಕೃತ ಅಭಿಜಿತ್‌ ಬ್ಯಾನರ್ಜಿ

ಭಾರತದ ಆರ್ಥಿಕತೆ ಅತ್ಯಂತ ದುರ್ಬಲವಾಗಿದ್ದು, ಸುಧಾರಿಸುವ ಯಾವುದೇ ಭರವಸೆಯೂ ಇಲ್ಲ ಎಂದು ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ 2019ನೇ ಸಾಲಿನ ಅರ್ಥಶಾಸ್ತ್ರ ನೊಬೆಲ್‌ ಪ್ರಶಸ್ತಿ ಪುರಸ್ಕೃತ ಭಾರತೀಯ ಮೂಲದ ಅಭಿಜಿತ್‌ ಬ್ಯಾನರ್ಜಿ ಅವರು ಸೋಮವಾರ ಹೇಳಿದ್ದಾರೆ.

ನವದೆಹಲಿ: ಭಾರತದ ಆರ್ಥಿಕತೆ ಅತ್ಯಂತ ದುರ್ಬಲವಾಗಿದ್ದು, ಸುಧಾರಿಸುವ ಯಾವುದೇ ಭರವಸೆಯೂ ಇಲ್ಲ ಎಂದು ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ 2019ನೇ ಸಾಲಿನ ಅರ್ಥಶಾಸ್ತ್ರ ನೊಬೆಲ್‌ ಪ್ರಶಸ್ತಿ ಪುರಸ್ಕೃತ ಭಾರತೀಯ ಮೂಲದ ಅಭಿಜಿತ್‌ ಬ್ಯಾನರ್ಜಿ ಅವರು ಸೋಮವಾರ ಹೇಳಿದ್ದಾರೆ.

ಪ್ರಸ್ತುತ ಅಂಕಿ ಅಂಶಗಳನ್ನು ಗಮನಿಸಿದರೆ, ಭಾರತದ ಆರ್ಥಿಕತೆ ಅಸ್ಥಿರವಾಗಿದ್ದು, ತಕ್ಷಣಕ್ಕೆ ಸುಧಾರಿಸುವ ಯಾವ ಭರವಸೆಯೂ ಇಲ್ಲ ಎಂದು ಭಾರತೀಯ ಮೂಲದ ಅಮೆರಿಕ ಅರ್ಥಶಾಸ್ತ್ರಜ್ಞ ಬ್ಯಾನರ್ಜಿ ಅವರು ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.

ಕಳೆದ ಐದಾರು ವರ್ಷಗಳಲ್ಲಿ ನಾವು ಕನಿಷ್ಠ ಅಭಿವೃದ್ಧಿಯನ್ನಾದರೂ ನೋಡಿದೆವು. ಈಗ ಆ ಭರವಸೆಯೂ ಇಲ್ಲವಾಗಿದೆ ಅಭಿಜಿತ್‌ ಬ್ಯಾನರ್ಜಿಅವರು ಹೇಳಿದ್ದಾರೆ.

ವೃತ್ತಿ ಜೀವನದಲ್ಲಿ ನಾನು ಇಷ್ಟು ಬೇಗ ಪ್ರಶಸ್ತಿ ಪಡೆಯುತ್ತೇನೆ ಎಂದುಕೊಂಡಿರಲಿಲ್ಲ ಎಂದು 58 ವರ್ಷದ ನೊಬೆಲ್‌ ಪ್ರಶಸ್ತಿ ಪುರಸ್ಕೃತ ಅಭಿಜಿತ್‌ ಬ್ಯಾನರ್ಜಿ ಅವರು ತಿಳಿಸಿದ್ದಾರೆ.

ನನ್ನ ಸಂಶೋಧನೆಗಾಗಿ ನಾನು ಭಾರತದ ಪಶ್ಚಿಮ ಬಂಗಾಳ, ದಕ್ಷಿಣ ಆಫ್ರಿಕಾ, ಇಂಡೋನೆಷ್ಯಾ ಮತ್ತು ಚೀನಾದಲ್ಲಿ ಕೆಲಸ ಮಾಡಿದ್ದೇನೆ. ಕಳೆದ 20 ವರ್ಷಗಳಿಂದ ಈ ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಬಡತನ ನಿವಾರಣೆಗೆ ಪರಿಹಾರಗಳನ್ನು ನೀಡಲು ನಾವು ಪ್ರಯತ್ನಿಸಿದ್ದೇವೆ ಎಂದು ಅವರು ತಮ್ಮ ಸಂಶೋಧನೆಯನ್ನು ತೆರೆದಿಟ್ಟಿದ್ದಾರೆ.

ಜಾಗತಿಕ ಬಡತನ ನಿರ್ಮೂಲನೆಗೆ ತೋರಿದ ಪ್ರಯೋಗಾತ್ಮಕ ನಡೆಗಳಿಗಾಗಿ ಅಭಿಜಿತ್‌ ಬ್ಯಾನರ್ಜಿ ಹಾಗೂ ಅವರ ಪತ್ನಿ ಈಸ್ಟರ್‌ ಡುಫ್ಲೋ ಅವರು ಮೈಖಲ್‌ ಕ್ರೆಮರ್‌ ಜೊತೆ ನೊಬೆಲ್‌ ಪ್ರಶಸ್ತಿ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT