ಚಿದಂಬರಂ 
ದೇಶ

ಐಎನ್ಎಕ್ಸ್ ಮೀಡಿಯಾ ಪ್ರಕರಣ: ಚಿದಂಬರಂ ವಿಚಾರಣೆ ಮಾಡಿ, ಅಗತ್ಯವಾದರೆ ಬಂಧಿಸಿ-ಇಡಿಗೆ ದೆಹಲಿ ಕೋರ್ಟ್

ಐಎನ್‌ಎಕ್ಸ್ ಮೀಡಿಯಾ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಕೋರ್ಟ್ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ವಿಚಾರಣೆ ನಡೆಸಲು ಇಡಿಗೆ ಅನುಮತಿ ನೀಡಿದೆ.

ಐಎನ್‌ಎಕ್ಸ್ ಮೀಡಿಯಾ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಕೋರ್ಟ್ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ವಿಚಾರಣೆ ನಡೆಸಲು ಇಡಿಗೆ ಅನುಮತಿ ನೀಡಿದೆ.

ಸಿಬಿಐ ಸಲ್ಲಿಸಿದ ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಅಕ್ಟೋಬರ್ 17 ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದ ಚಿದಂಬರಂ ಅವರನ್ನು ಪ್ರಶ್ನಿಸಲು ಅನುಮತಿ ಕೋರಿ ಇಡಿ ಮನವಿಯನ್ನು  ಆಲಿಸಿದ ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ವಿಚಾರಣೆಗೆ ಅನುಮತಿ ನೀಡಿದ್ದಾರೆ.ಯಾಲಯವು ಆದೇಶವನ್ನು ಅಂಗೀಕರಿಸಿದ ನಂತರ, ಇಡಿ ಅವರನ್ನು ರೂಸ್ ಅವೆನ್ಯೂ ನ್ಯಾಯಾಲಯದ ಆವರಣದಲ್ಲಿ ಲಭ್ಯವಿರುವ ಕೆಲವು  ಸ್ಥಳಗಳಲ್ಲಿ ಪ್ರಶ್ನಿಸಲು ಅನುಮತಿ ಕೋರಿದೆ

ಆದಾಗ್ಯೂ, ನ್ಯಾಯಾಲಯವು "ಈ ವ್ಯಕ್ತಿಯ ಘನತೆಗೆ ತಕ್ಕಂತೆ ನೀವು ಅವರನ್ನು ವಿಚಾರಣೆ ಮಾಡಿರಿ." ಎಂದಿದಿದೆ. ಕಾಂಗ್ರೆಸ್ ನಾಯಕ ಚಿದಂಬರಂ ಅವರಿರುವ ತಿಹಾರ್ ಜೈಲಿಗೆ ತೆರಳಲು ನ್ಯಾಯಾಲಯ ಇಡಿಗೆ ಅನುಮತಿ ನೀಡಿತು, ಬುಧವಾರ ಅವರನ್ನು ಪ್ರಶ್ನಿಸಲು, ಮತ್ತು ಅಗತ್ಯವಿದ್ದರೆ ಅವರನ್ನು ಬಂಧಿಸಲು ಸಹ ನ್ಯಾಯಾಲಯ ಒಪ್ಪಿಗೆ ಸೂಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT