ಸಂಗ್ರಹ ಚಿತ್ರ 
ದೇಶ

ಭಾರತ, ಆಫ್ಘನ್ ಮೇಲೆ ದಾಳಿಗಾಗಿ ಬಾಲಾಕೋಟ್ ನಲ್ಲಿ 50 ಉಗ್ರರಿಗೆ ತರಬೇತಿ!

ಭಾರತ ಮತ್ತು ಆಫ್ಘಾನಿಸ್ತಾನಗಳ ಮೇಲೆ ದಾಳಿ ಮಾಡುವ ಸಲುವಾಗಿ ಬಾಲಾಕೋಟ್ ಉಗ್ರ ಕ್ಯಾಂಪ್ ನಲ್ಲಿ ಸುಮಾರು 50 ಯುವಕರಿಗೆ ಜೈಶ್ ಇ ಮೊಹಮದ್ ಉಗ್ರ ಸಂಘಟನೆ ತರಬೇತಿ ನೀಡುತ್ತಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ನವದೆಹಲಿ: ಭಾರತ ಮತ್ತು ಆಫ್ಘಾನಿಸ್ತಾನಗಳ ಮೇಲೆ ದಾಳಿ ಮಾಡುವ ಸಲುವಾಗಿ ಬಾಲಾಕೋಟ್ ಉಗ್ರ ಕ್ಯಾಂಪ್ ನಲ್ಲಿ ಸುಮಾರು 50 ಯುವಕರಿಗೆ ಜೈಶ್ ಇ ಮೊಹಮದ್ ಉಗ್ರ ಸಂಘಟನೆ ತರಬೇತಿ ನೀಡುತ್ತಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ಇದೇ ಪಾಕಿಸ್ತಾನದ ಬಾಲಾಕೋಟ್‌ ನಲ್ಲಿ ಜೈಷ್‌–ಎ–ಮೊಹಮ್ಮದ್‌ ಉಗ್ರರ ತರಬೇತಿ ಶಿಬಿರದ ಮೇಲೆ ಭಾರತದ ವಾಯು ಪಡೆ(ಐಎಎಫ್‌) ಎಂಟು ತಿಂಗಳ ಹಿಂದೆ ದಾಳಿ ಮಾಡಿತ್ತು. ಇದೀಗ ಅದೇ ಸ್ಥಳದಲ್ಲಿ 45–50 ಮಂದಿ ಉಗ್ರರು ಹಾಗೂ ಆತ್ಮಾಹುತಿ ದಾಳಿಕೋರರು ತರಬೇತಿ ಪಡೆಯುತ್ತಿದ್ದಾರೆ.  ಉಗ್ರರ ಶಿಬಿರದಲ್ಲಿ ಸುಮಾರು 45–50 ಮಂದಿ ಆತ್ಮಾಹುತಿ ಬಾಂಬ್ ದಾಳಿಗೆ ತರಬೇತಿ ಪಡೆಯುವುದರಲ್ಲಿ ನಿರತರಾಗಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಅಂತೆಯೇ ವರದಿಯಲ್ಲಿ ಭಾರತದ ಗುಪ್ತಚರ ಸಂಸ್ಥೆಗಳು ಉಗ್ರರ ಶಿಬಿರದ ಮೇಲೆ ನಿರಂತರ ನಿಗಾವಹಿಸಿದ್ದು, ತಾಂತ್ರಿಕ ಕಣ್ಗಾವಲಿನ ಮೂಲಕ ಪ್ರತಿ ಚಟುವಟಿಕೆಗಳನ್ನು ಗಮನಿಸಲಾಗುತ್ತಿದೆ. ಬಾಲಾಕೋಟ್‌ ಶಿಬಿರದಲ್ಲಿ ತರಬೇತಿ ಪಡೆದಿರುವ ಉಗ್ರರ ಪೈಕಿ ಕೆಲವರನ್ನು ಕಾಶ್ಮೀರಕ್ಕೂ ಕಳುಹಿಸಲಾಗಿದ್ದು, ಅಲ್ಲಿ ಭಾರತೀಯ ಭದ್ರತಾ ನೆಲೆಗಳ ಮೇಲೆ ದಾಳಿ ನಡೆಸಲು ಪ್ರೇರೇಪಿಸಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. 

ಈ ಹಿಂದೆ ಫೆಬ್ರುವರಿ 14ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ಆತ್ಮಾಹುತಿ ಬಾಂಬ್‌ ದಾಳಿಯಿಂದ 40 ಮಂದಿ ಸಿಆರ್‌ಪಿಎಫ್‌ ಸಿಬ್ಬಂದಿ ಹುತಾತ್ಮರಾಗಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತೀಯ ವಾಯುಪಡೆ ಫೆಬ್ರುವರಿ 26ರಂದು ಪಾಕಿಸ್ತಾನ ವಾಯು ಪ್ರದೇಶದ ಒಳಗೆ ಸಾಗಿ ಬಾಲಾಕೋಟ್‌ನ ಉಗ್ರರ ಶಿಬಿರದ ಮೇಲೆ ದಾಳಿ ನಡೆಸಿತ್ತು. ಈ ದಾಳಿ ಬಳಿಕ ಸುಮಾರು ಆರು ತಿಂಗಳ ವರೆಗೂ ಆ ಶಿಬಿರ ಸ್ಥಗಿತಗೊಂಡಿತ್ತು. 

ಇದೀಗ ಮತ್ತೆ ಉಗ್ರ ಕ್ಯಾಂಪ್ ಗಳು ಪುನಾರಂಭಗೊಂಡಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT