ಚಿದಂಬರಂ 
ದೇಶ

ಐಎನ್ಎಕ್ಸ್ ಮೀಡಿಯಾ ಹಗರಣ: ವಿಚಾರಣೆ ಬಳಿಕ ಚಿದಂಬರಂ ಬಂಧನ

ಐಎನ್ಎಕ್ಸ್ ಮೀಡಿಯಾ ಹಗರಣ ಸಂಬಂಧ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ತಿಹಾರ್ ಜೈಲಿನಲ್ಲಿ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. 

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣ ಸಂಬಂಧ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ತಿಹಾರ್ ಜೈಲಿನಲ್ಲಿ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. 

ನಿನ್ನೆಯಷ್ಟೇ ಚಿದಂಬರಂ ಅವರನ್ನು ಬಂಧನಕ್ಕೊಳಪಡಿಸಲು ದೆಹಲಿ ನ್ಯಾಯಾಲಯದ ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿತ್ತು. ಅಲ್ಲದೆ, 30 ನಿಮಿಷಗಳು ಮಾತ್ರ ಪ್ರಕರಣ ಸಂಬಂಧ ವಿಚಾರಣೆ ನಡೆಸುವಂತೆ ಸೂಚನೆ ನೀಡಿತ್ತು. 

ನ್ಯಾಯಾಲಯ ಸೂಚನೆ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಚಿದಂಬರಂ, ಅವರ ಪತ್ನಿ ನಳಿನಿ ಚಿದಂಬಂರಂ ಹಾಗೂ ಪುತ್ರ ಕಾರ್ತಿ ಚಿದಂಬರಂ ತಿಹಾರ್ ಜೈಲಿಗೆ ಹಾಜರಾಗಿದ್ದರು. ಇದರಂತೆ ವಿಚಾರಣೆ ನಡೆಸಿದ ಅಧಿಕಾರಿಗಳು ಇದೀಗ ಚಿದಂಬರಂ ಅವರನ್ನು ಬಂಧನಕ್ಕೊಳಪಡಿಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಮಹೇಶ್ ಗುಪ್ತಾ, ಸಂದೀಪ್ ಥಪ್ಲಿಯಾಳ್ ಹಾಗೂ ದೈನಿಕ್ ಜೈನ್ ಅವರಿದ್ದ ಮೂರು ಸದಸ್ಯರ ತಂಡ ಚಿದಂಬರಂ ಅವರನ್ನು ವಿಚಾರಣೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT