ದೇಶ

ಐಎನ್ಎಕ್ಸ್ ಮೀಡಿಯಾ ಹಗರಣ: ವಿಚಾರಣೆ ಬಳಿಕ ಚಿದಂಬರಂ ಬಂಧನ

Manjula VN

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣ ಸಂಬಂಧ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ತಿಹಾರ್ ಜೈಲಿನಲ್ಲಿ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. 

ನಿನ್ನೆಯಷ್ಟೇ ಚಿದಂಬರಂ ಅವರನ್ನು ಬಂಧನಕ್ಕೊಳಪಡಿಸಲು ದೆಹಲಿ ನ್ಯಾಯಾಲಯದ ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿತ್ತು. ಅಲ್ಲದೆ, 30 ನಿಮಿಷಗಳು ಮಾತ್ರ ಪ್ರಕರಣ ಸಂಬಂಧ ವಿಚಾರಣೆ ನಡೆಸುವಂತೆ ಸೂಚನೆ ನೀಡಿತ್ತು. 

ನ್ಯಾಯಾಲಯ ಸೂಚನೆ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಚಿದಂಬರಂ, ಅವರ ಪತ್ನಿ ನಳಿನಿ ಚಿದಂಬಂರಂ ಹಾಗೂ ಪುತ್ರ ಕಾರ್ತಿ ಚಿದಂಬರಂ ತಿಹಾರ್ ಜೈಲಿಗೆ ಹಾಜರಾಗಿದ್ದರು. ಇದರಂತೆ ವಿಚಾರಣೆ ನಡೆಸಿದ ಅಧಿಕಾರಿಗಳು ಇದೀಗ ಚಿದಂಬರಂ ಅವರನ್ನು ಬಂಧನಕ್ಕೊಳಪಡಿಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಮಹೇಶ್ ಗುಪ್ತಾ, ಸಂದೀಪ್ ಥಪ್ಲಿಯಾಳ್ ಹಾಗೂ ದೈನಿಕ್ ಜೈನ್ ಅವರಿದ್ದ ಮೂರು ಸದಸ್ಯರ ತಂಡ ಚಿದಂಬರಂ ಅವರನ್ನು ವಿಚಾರಣೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ. 

SCROLL FOR NEXT