ಪಿಎಂಸಿ ಬ್ಯಾಂಕ್ ಹಗರಣ; ಠೇವಣಿ ಇಟ್ಟಿದ್ದ ಮಹಿಳಾ ವೈದ್ಯೆ ಆತ್ಮಹತ್ಯೆ 
ದೇಶ

ಪಿಎಂಸಿ ಬ್ಯಾಂಕ್ ಹಗರಣ: ಠೇವಣಿ ಇಟ್ಟಿದ್ದ ಮಹಿಳಾ ವೈದ್ಯೆ ಆತ್ಮಹತ್ಯೆ

ಪಿಎಂಸಿ ಬ್ಯಾಂಕ್ ಹಗರಣ ಮತ್ತೊಬ್ಬರನ್ನು ಬಲಿಪಡೆದುಕೊಂಡಿದೆ. ತೀವ್ರ ಬಿಕ್ಕಟ್ಟಿಗೆ ಒಳಗಾಗಿರುವ ಪಿಎಂಸಿ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದ ಮುಂಬೈ ಮೂಲದ ಮಹಿಳಾ ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಮುಂಬೈ: ಮಹಾರಾಷ್ಟ್ರ - ಪಂಜಾಬ್ ಸಹಕಾರ (ಪಿಎಂಸಿ) ಬ್ಯಾಂಕ್ ಹಗರಣ ಮತ್ತೊಬ್ಬರನ್ನು ಬಲಿಪಡೆದುಕೊಂಡಿದೆ. ತೀವ್ರ ಬಿಕ್ಕಟ್ಟಿಗೆ ಒಳಗಾಗಿರುವ ಪಿಎಂಸಿ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದ ಮುಂಬೈ ಮೂಲದ ಮಹಿಳಾ ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೀಡಾದ ಸಂತ್ರಸ್ತೆಯನ್ನು ಡಾ. ನಿವೇದಿತಾ ಬಿಜ್ಲಾನಿ (39) ಎಂದು ಗುರುತಿಸಲಾಗಿದೆ.

ಪಿಎಂಸಿ ಠೇವಣಿದಾರ ಸಂಜಯ್ ಗುಲಾಟಿ ಆತ್ಮಹತ್ಯೆ ಮಾಡಿಕೊಂಡ ದಿನವೇ ಈ ಘಟನೆ ಬೆಳಕಿಗೆ ಬಂದಿರುವುದು ಗಮನಾರ್ಹ, ಪೊಲೀಸರ ಮಾಹಿತಿ ಪ್ರಕಾರ, ವೈದ್ಯಕೀಯ ಸ್ನಾತಕೋತ್ತರ ಪಡೆದಿರುವ ಬಿಜ್ಲಾನಿ ಸೋಮವಾರ ಸಂಜೆ  ಸಬ್ ಅರ್ಬನ್  ವರ್ಸೋವಾ ಪ್ರದೇಶದ ನಿವಾಸದಲ್ಲಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಡಾ. ನಿವೇದಿತಾ ಬಿಜ್ಲಾನಿ  ಪಿಎಂಸಿ ಬ್ಯಾಂಕಿನಲ್ಲಿ 1 ಕೋಟಿ ರೂ ಠೇವಣಿ ಇರಿಸಿದ್ದರು ಎಂದು ಆಕೆಯ ತಂದೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT