ಪಿಎಂಸಿ ಬ್ಯಾಂಕ್ ಹಗರಣ; ಠೇವಣಿ ಇಟ್ಟಿದ್ದ ಮಹಿಳಾ ವೈದ್ಯೆ ಆತ್ಮಹತ್ಯೆ 
ದೇಶ

ಪಿಎಂಸಿ ಬ್ಯಾಂಕ್ ಹಗರಣ: ಠೇವಣಿ ಇಟ್ಟಿದ್ದ ಮಹಿಳಾ ವೈದ್ಯೆ ಆತ್ಮಹತ್ಯೆ

ಪಿಎಂಸಿ ಬ್ಯಾಂಕ್ ಹಗರಣ ಮತ್ತೊಬ್ಬರನ್ನು ಬಲಿಪಡೆದುಕೊಂಡಿದೆ. ತೀವ್ರ ಬಿಕ್ಕಟ್ಟಿಗೆ ಒಳಗಾಗಿರುವ ಪಿಎಂಸಿ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದ ಮುಂಬೈ ಮೂಲದ ಮಹಿಳಾ ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಮುಂಬೈ: ಮಹಾರಾಷ್ಟ್ರ - ಪಂಜಾಬ್ ಸಹಕಾರ (ಪಿಎಂಸಿ) ಬ್ಯಾಂಕ್ ಹಗರಣ ಮತ್ತೊಬ್ಬರನ್ನು ಬಲಿಪಡೆದುಕೊಂಡಿದೆ. ತೀವ್ರ ಬಿಕ್ಕಟ್ಟಿಗೆ ಒಳಗಾಗಿರುವ ಪಿಎಂಸಿ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದ ಮುಂಬೈ ಮೂಲದ ಮಹಿಳಾ ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೀಡಾದ ಸಂತ್ರಸ್ತೆಯನ್ನು ಡಾ. ನಿವೇದಿತಾ ಬಿಜ್ಲಾನಿ (39) ಎಂದು ಗುರುತಿಸಲಾಗಿದೆ.

ಪಿಎಂಸಿ ಠೇವಣಿದಾರ ಸಂಜಯ್ ಗುಲಾಟಿ ಆತ್ಮಹತ್ಯೆ ಮಾಡಿಕೊಂಡ ದಿನವೇ ಈ ಘಟನೆ ಬೆಳಕಿಗೆ ಬಂದಿರುವುದು ಗಮನಾರ್ಹ, ಪೊಲೀಸರ ಮಾಹಿತಿ ಪ್ರಕಾರ, ವೈದ್ಯಕೀಯ ಸ್ನಾತಕೋತ್ತರ ಪಡೆದಿರುವ ಬಿಜ್ಲಾನಿ ಸೋಮವಾರ ಸಂಜೆ  ಸಬ್ ಅರ್ಬನ್  ವರ್ಸೋವಾ ಪ್ರದೇಶದ ನಿವಾಸದಲ್ಲಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಡಾ. ನಿವೇದಿತಾ ಬಿಜ್ಲಾನಿ  ಪಿಎಂಸಿ ಬ್ಯಾಂಕಿನಲ್ಲಿ 1 ಕೋಟಿ ರೂ ಠೇವಣಿ ಇರಿಸಿದ್ದರು ಎಂದು ಆಕೆಯ ತಂದೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ರಷ್ಟು ಬೆಳವಣಿಗೆ: ಪ್ರಧಾನಿ ಮೋದಿ ಮೆಚ್ಚುಗೆ!

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ರೂಪಿಕಾ; 'ಚೆಲುವಿನ ಚಿಲಿಪಿಲಿ' ಮನಗೆದ್ದ ಹುಡುಗ ಯಾರು?

ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಇರಾನ್ ಅಧ್ಯಕ್ಷ-ಮೋದಿ ಮಹತ್ವದ ಭೇಟಿ

ಪಾಕ್ ನಲ್ಲಿ ಮತ್ತೆ 'ಧುರಂದರ್' ಸ್ಟೈಲ್ ಕಿಲ್ಲಿಂಗ್? ಜೈಶ್ ಉಗ್ರ Lakhvi ಸಂಬಂಧಿ ತಲೆಗೆ ಗುಂಡಿಕ್ಕಿದ ‘ಅನಾಮಿಕ ಗನ್‌ಮ್ಯಾನ್‌’! Video

T20 ಕ್ರಿಕೆಟ್‌ನಲ್ಲಿ ವಿಶ್ವದಾಖಲೆ ಬರೆದ ದೀಪ್ತಿ ಶರ್ಮಾ: ಈ ದಾಖಲೆ ಬರೆದ ಮೊದಲ ಆಟಗಾರ್ತಿ!