ಶರದ್ ಪವಾರ್ 
ದೇಶ

ಸಚಿವರಾಗಿಯೂ ಕೆಲಸ ಮಾಡದಿದ್ದರೆ ಕೈಗೆ ಬಳೆ ತೊಟ್ಟಿಕೊಳ್ಳಿ: ಮಾಜಿ ಸಹೋದ್ಯೋಗಿ ವಿರುದ್ಧ ಪವಾರ್ ಕಿಡಿ

13 ವರ್ಷ ಸಚಿವರಾಗಿದ್ದರೂ ಯಾವುದೇ  ಕೆಲಸ ಮಾಡಿದ್ದರೆ ಕೈಗೆ ಬಳೆ ತೊಟ್ಟಿಕೊಳ್ಳಿ ಎಂದು ಎನ್ ಸಿಪಿಯ ಮಾಜಿ ಮುಖಂಡ ಬಾಬನ್ರಾವ್ ಪಚ್ಪ್ಯೂಟ್ ವಿರುದ್ಧ ಎನ್ ಸಿಪಿಯ ವರಿಷ್ಠ ಶರದ್ ಪವಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಅಹ್ಮದ್ ನಗರ: 13 ವರ್ಷ ಸಚಿವರಾಗಿದ್ದರೂ ಯಾವುದೇ  ಕೆಲಸ ಮಾಡಿದ್ದರೆ ಕೈಗೆ ಬಳೆ ತೊಟ್ಟಿಕೊಳ್ಳಿ ಎಂದು ಎನ್ ಸಿಪಿಯ ಮಾಜಿ ಮುಖಂಡ ಬಾಬನ್ರಾವ್ ಪಚ್ಪ್ಯೂಟ್ ವಿರುದ್ಧ ಎನ್ ಸಿಪಿಯ ವರಿಷ್ಠ ಶರದ್ ಪವಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪಚ್ಪ್ಯೂಟ್ 2014ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಈಗ ಅಹ್ಮದ್ ನಗರ ಜಿಲ್ಲೆಯ ಶ್ರಿಗೊಂಡಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದಾರೆ.

ಅಕ್ಟೋಬರ್ 21 ರಂದು ಮಹಾರಾಷ್ಟ್ರದಲ್ಲಿ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಎನ್ ಸಿಬಿ ಅಭ್ಯರ್ಥಿ ಘಾಣ ಶ್ಯಾಮ್ ಶೆಲಾರ್ ಪರವಾಗಿ ಮತ ಯಾಚಿಸಿದ ಪವಾರ್,  ಕಾಂಗ್ರೆಸ್- ಎನ್ ಸಿಪಿ ಆಡಳಿತಾವಧಿಯಲ್ಲಿ 13 ವರ್ಷಗಳ ಕಾಲ ಸಚಿವರಾಗಿದ್ದರೂ ಸಹಿ ಮಾಡುವ ಅಧಿಕಾರ ಹೊರತುಪಡಿಸಿ ಬೇರೆ ಯಾವುದೇ ಸ್ವಾತಂತ್ರ್ಯ ವಿರಲಿಲ್ಲ ಎಂದು ಪಚ್ಪ್ಯೂಟ್  ಇತ್ತೀಚಿಗೆ ಹೇಳಿಕೆ ನೀಡಿದ್ದಾರೆ. ಆದರೆ.  ಮಂತ್ರಿಯೊಬ್ಬರ  ಸಹಿಯೊಂದಿಗೆ ಕೆಲಸಗಳೂ ಅನುಮೋದನೆ ಪಡೆಯುತ್ತವೆ ಎಂದರು.

ಸಹಿ ಮಾಡುವ ಹಕ್ಕು ಮಾತ್ರ, ಬೇರೆ ಏನನ್ನೂ ಮಾಡಲಿಲ್ಲ ಎನ್ನುವವರಿಗೆ ಏನಂತಾ ಕರೆಯಬೇಕು? ಸಚಿವರಾಗಿದ್ದರೂ ಏನನ್ನು ಮಾಡದಿದ್ದರೆ ಹೋಗಿ ಕೈಗಳಿಗೆ ಬಳೆ ತೊಟ್ಟಿಕೊಳ್ಳಿ ಎಂದು ಪವಾರ್ ಕಿಡಿಕಾರಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT