ಸಂಗ್ರಹ ಚಿತ್ರ 
ದೇಶ

ಅಯೋಧ್ಯೆ ತೀರ್ಪು ಬರೆಯಲು ವಿದೇಶ ಪ್ರವಾಸ ರದ್ದುಗೊಳಿಸಿದ ಸಿಜೆಐ!

ನಿರ್ಣಾಯಕ ಹಂತ ತಲುಪಿರುವ ಅಯೋಧ್ಯೆ ಪ್ರಕರಣದ ತೀರ್ಪು ಬರೆಯಲು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು ತಮ್ಮ ವಿದೇಶ ಪ್ರವಾಸವನ್ನೇ ರದ್ದುಗೊಳಿಸಿದ್ದಾರೆ ಎನ್ನಲಾಗಿದೆ.

ನವದೆಹಲಿ: ನಿರ್ಣಾಯಕ ಹಂತ ತಲುಪಿರುವ ಅಯೋಧ್ಯೆ ಪ್ರಕರಣದ ತೀರ್ಪು ಬರೆಯಲು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು ತಮ್ಮ ವಿದೇಶ ಪ್ರವಾಸವನ್ನೇ ರದ್ದುಗೊಳಿಸಿದ್ದಾರೆ ಎನ್ನಲಾಗಿದೆ.

ಅಯೋಧ್ಯಾ ರಾಮಮಂದಿರ -ಬಾಬ್ರಿ ಕಟ್ಟಡ ಭೂವಿವಾದದ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಿನ್ನೆಯೇ ಅಂತ್ಯಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ. ಸುಪ್ರೀಂಕೋರ್ಟ್​ ಮುಖ್ಯನ್ಯಾಯಮೂರ್ತಿ ರಂಜನ್​ ಗೊಗೊಯ್​ ನವೆಂಬರ್​ 17ಕ್ಕೆ ನಿವೃತ್ತರಾಗಲಿದ್ದು ಅಷ್ಟರೊಳಗೆ ಅಯೋಧ್ಯಾ ತೀರ್ಪು ಹೊರಬೀಳುವುದು ನಿಶ್ಚಿತವಾಗಿದೆ.

ಏತನ್ಮಧ್ಯೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು, ಐತಿಹಾಸಿಕ ತೀರ್ಪು ಬರೆಯುವುದಕ್ಕೋಸ್ಕರ ತಮ್ಮ ವಿದೇಶ ಪ್ರವಾಸವನ್ನು ಮೊಟಕುಗೊಳಿಸಿದ್ದಾರೆ ಎನ್ನಲಾಗಿದೆ. ಸುಪ್ರೀಂ ಕೋರ್ಟ್ ಮೂಲಗಳ ಪ್ರಕಾರ ಸಿಜಿಐ
ರಂಜನ್​ ಗೊಗೊಯ್​ ಅವರು ದಕ್ಷಿಣ ಅಮೆರಿಕ ಸೇರಿ ಕೆಲವು ದೇಶಗಳಿಗೆ ಪ್ರವಾಸ ಹೋಗಬೇಕಿತ್ತು. ಈ ಕುರಿತಂತೆ ವೇಳಾಪಟ್ಟಿ ಕೂಡ ಸಿದ್ಧವಾಗಿತ್ತು. ಆದರೆ ಅಯೋಧ್ಯೆ ತೀರ್ಪು ಪ್ರಕಟ ಹಿನ್ನಲೆಯಲ್ಲಿ ಅವರು ವಿದೇಶ ಪ್ರವಾಸವನ್ನು ರದ್ದು ಮಾಡಿದ್ದಾರೆ. ಗಗೋಯ್ ಅವರು ನವೆಂಬರ್​ 17ಕ್ಕೆ ನಿವೃತ್ತರಾಗುವುದಕ್ಕೂ ಮೊದಲು ಅಯೋಧ್ಯೆಯ ತೀರ್ಪನ್ನು ನೀಡಬೇಕಾದ ಕಾರಣ, ಕೂಲಂಕುಷ ಅಧ್ಯಯನ ಮಾಡಿ ತೀರ್ಪು ಬರೆಯಬೇಕಿದೆ. ಇದೇ ಕಾರಣಕ್ಕೆ ತಮ್ಮ ಪ್ರವಾಸವನ್ನು ರದ್ದುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಲ್ಲದೆ ಅಯೋಧ್ಯೆ ತೀರ್ಪು ಅಂತಿಮವಾಗುವವರೆಗೂ ತಾವೆಲ್ಲೂ ಹೋಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ ಎನ್ನಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT