ಪ್ರಚಾರ ಭಾಷಣದಲ್ಲಿ ಪಿಎಂ ಮೋದಿ 
ದೇಶ

ಸಂವಿಧಾನದ 370ನೇ ವಿಧಿ ರದ್ದನ್ನು ಅಣಕಿಸಿದವರು ಇತಿಹಾಸದಲ್ಲಿ ದಾಖಲಾಗುತ್ತಾರೆ: ಪ್ರಧಾನಿ ಮೋದಿ ವಾಗ್ದಾಳಿ 

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಬೀಡ್ ಜಿಲ್ಲೆಯ ಪಾರ್ಲಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ತಮ್ಮ ಎಂದಿನ ಶೈಲಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಬೀಡ್:ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಬೀಡ್ ಜಿಲ್ಲೆಯ ಪಾರ್ಲಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ತಮ್ಮ ಎಂದಿನ ಶೈಲಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.


ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಸಂವಿಧಾನ ವಿಧಿ 370ನ್ನು ರದ್ದುಪಡಿಸಿರುವುದನ್ನು ಅಪಹಾಸ್ಯ ಮಾಡಿದವರ ಬಗ್ಗೆ ಇತಿಹಾಸದಲ್ಲಿ ದಾಖಲಾಗುತ್ತದೆ. ಇಂತವರಿಗೆ ಮಹಾರಾಷ್ಟ್ರದ ಜನತೆ ಶಿಕ್ಷೆ ನೀಡುವ ಸುಸಂದರ್ಭ ಬಂದಿದೆ ಎಂದರು.


ಕಾಶ್ಮೀರದಲ್ಲಿ ಹಿಂದೂ ಜನರು ಇದ್ದಿದ್ದರೆ ಎನ್ ಡಿಎ ಸರ್ಕಾರ ಈ ನಿರ್ಧಾರ ತೆಗೆದುಕೊಳ್ಳುತ್ತಿರಲಿಲ್ಲ ಎಂದು ಕೆಲ ಕಾಂಗ್ರೆಸ್ ನಾಯಕರು ಹೇಳಿದರು. ರಾಷ್ಟ್ರದ ಐಕ್ಯತೆ ವಿಷಯ ಬಂದಾಗ ಹಿಂದೂ-ಮುಸ್ಲಿಮರೆಂದು ಯೋಚಿಸುವ ಸಂಕುಚಿತ ಮನೋಭಾವ ಸರಿಯೇ ಎಂದು ಕೇಳಿದರು.


ಸಂವಿಧಾನ ವಿಧಿ 370 ರದ್ದುಪಡಿಸಿದ್ದು ಯಾರನ್ನೊ ಕೊಲೆ ಮಾಡಿದ ಹಾಗೆ, ಇದರಿಂದ ದೇಶ ದುಸ್ಥಿತಿಗೆ ಹೋಗುತ್ತದೆ, ಕಾಶ್ಮೀರ ನಾಶವಾಗಿ ಹೋಯಿತು, ಭಾರತ-ಪಾಕಿಸ್ತಾನ ವಿವಾದ ಆಂತರಿಕ ವಿಚಾರ ಅಲ್ಲ, ಹೀಗೆ ಮನಬಂದಂತೆ ಕೆಲ ಕಾಂಗ್ರೆಸ್ ನಾಯಕರು ಮಾತನಾಡಿದರು. ಅವರು ಆಡಿದ ಮಾತುಗಳನ್ನೆಲ್ಲಾ ಹೇಳಬೇಕೆಂದರೆ ನಾನು ಇಲ್ಲಿ ಅಕ್ಟೋಬರ್ 21ರ ಚುನಾವಣೆ ದಿನದವರೆಗೂ ಉಳಿಯಬೇಕು, ಅಷ್ಟು ಮಾತುಗಳಿವೆ. ಹೀಗೆ ಹೇಳಿದವರಿಗೆ ಜನರು ತಕ್ಕ ಶಿಕ್ಷೆ ನೀಡುವ ಸಂದರ್ಭ ಬಂದಿದೆ. ಮತದಾರರೇ ನನಗೆ ನಿಮ್ಮ ದೇಶಭಕ್ತಿ ಮೇಲೆ ನನಗೆ ನಂಬಿಕೆಯಿದೆ ಎಂದರು. 

ದೇಶದ ಹಿತಾಸಕ್ತಿ ವಿರುದ್ಧ ಮಾತನಾಡಿದವರಿಗೆ ಮತದಾರರು ತಕ್ಕ ಪಾಠ ಕಲಿಸಬೇಕು. ಸಂವಿಧಾನ ವಿಧಿ 370ನ್ನು ರದ್ದುಪಡಿಸಿದ್ದಕ್ಕೆ ಅಪಹಾಸ್ಯ ಮಾಡಿದವರು ಇತಿಹಾಸದಲ್ಲಿ ದಾಖಲಾಗಲಿದ್ದಾರೆ. ದೇಶ ವಿರೋಧಿ ಶಕ್ತಿಗಳಿಗೆ ಕಾಂಗ್ರೆಸ್ ನಾಯಕರು ಆಕ್ಸಿಜನ್ ಒದಗಿಸುವ ದುಷ್ಕೃತ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.


ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಹಿಂದಿನ ದಾಖಲೆಗಳನ್ನೆಲ್ಲಾ ಮುರಿದು ಬಿಜೆಪಿ ನೇತೃತ್ವದ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರಲಿದೆ. ಈ ಚುನಾವಣೆ ಬಿಜೆಪಿಯ ಕಾರ್ಯಶಕ್ತಿ ಮತ್ತು ವಿರೋಧ ಪಕ್ಷಗಳ ಸ್ವಾರ್ಥಶಕ್ತಿಯ ನಡುವಿನ ಸೆಣಸಾಟವಾಗಿದೆ ಎಂದು ಮೋದಿ ವ್ಯಾಖ್ಯಾನಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ