ಅಮಿತ್ ಶಾ 
ದೇಶ

370ನೇ ವಿಧಿ, ಆದಿವಾಸಿಗಳ ವಿವಾದ : ಕಾಂಗ್ರೆಸ್ ವಿರುದ್ಧ ಅಮಿತ್  ಶಾ ವಾಗ್ದಾಳಿ

370ನೇ ವಿಧಿ ಹಾಗೂ ಆದಿವಾಸಿಗಳ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ಕೇಂದ್ರ ಗೃಹ  ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

ಗಡ್ಚಿರೋಲಿ:  370ನೇ ವಿಧಿ ಹಾಗೂ ಆದಿವಾಸಿಗಳ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ಕೇಂದ್ರ ಗೃಹ  ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

 ಕಾಂಗ್ರೆಸ್ 70 ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ್ದು, ತಮ್ಮ ನಾಲ್ಕು ತಲೆಮಾರುಗಳು ಆದಿವಾಸಿಗಳಿಗಾಗಿ ಏನು ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿರುವ ಅಮಿತ್ ಶಾ, ಮುಂದಿನ ಐದು ವರ್ಷಗಳಲ್ಲಿ ಈ ಭಾಗವನ್ನು ನಕ್ಸಲ್ ಮುಕ್ತ ಪ್ರದೇಶವನ್ನಾಗಿ ಮಾಡಲಾಗುವುದು ಎಂದರು.

ಗಡ್ಚಿರೋಲಿ ಜಿಲ್ಲೆಯ ಅಹೆರಿಯಲ್ಲಿ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಹಾಗೂ ಎನ್ ಸಿಪಿ ಸರ್ಕಾರಗಳಿಗಿಂತ  ಮೋದಿ ಸರ್ಕಾರ ಆದಿವಾಸಿಗಳಿಗಾಗಿ ಹೆಚ್ಚಿನ ರೀತಿಯ ಕೆಲಸಗಳನ್ನು ಮಾಡಿರುವುದಾಗಿ ತಿಳಿಸಿದರು.

ಕಾಂಗ್ರೆಸ್ 370ನೇ ವಿಧಿಯನ್ನು ರದ್ದುಗೊಳಿಸಿಲ್ಲ, ಏಳು ದಶಕಗಳ ಕಾಲ ತನ್ನ  ವೋಟ್ ಬ್ಯಾಂಕಿಗಾಗಿ ಜಮ್ಮು - ಕಾಶ್ಮೀರದಲ್ಲಿ ಭಯೋತ್ಪಾದನೆ ಹರಡಲು ಹಾಗೂ 40 ಜನರು ಹತ್ಯೆಗೀಡಾಗಲು ಕಾಂಗ್ರೆಸ್ ಕಾರಣವಾಗಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರಿಂದಾಗಿ  370ನೇ ವಿಧಿ ರದ್ದುಗೊಂಡಿದೆ ಎಂದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದಾಗಿ ಗಡ್ಚಿರೋಲಿ ಒಂದರಲ್ಲಿಯೇ 1. 30 ಲಕ್ಷ ಶೌಚಾಲಯ, 48 ಸಾವಿರ ಅನಿಲ ಸಿಲಿಂಡರ್ ಪೂರೈಕೆ, 48 ಸಾವಿರ ಆದಿವಾಸಿಗಳಿಗೆ ವಿದ್ಯುತ್ ಪೂರೈಕೆ ಹಾಗೂ ಬುಡಕಟ್ಟು ಸಮುದಾಯದ 8 ಸಾವಿರ ಬಡವರಿಗೆ ಮನೆ ನಿರ್ಮಿಸಿಕೊಡಲಾಗಿದೆ ಎಂದು ಅಮಿತ್ ಶಾ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ರಾಮ ಮಂದಿರ ದೇಣಿಗೆ ಕಳ್ಳತನ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಉತ್ತರಪ್ರದೇಶ SIT ಕ್ಲೀನ್ ಚಿಟ್!

PM CARES ನಿಧಿ ವಿವರ ಬಹಿರಂಗ; ದೇಣಿಗೆಗಳಲ್ಲಿ ತೀವ್ರ ಕುಸಿತ ವಿದೇಶಿ ದೇಣಿಗಗಳ ಬಗ್ಗೆ ಕೇಂದ್ರ ಹೇಳಿದ್ದೇನು?

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಗದ್ದಲ, 2ನೇ ದಿನವೂ ವಿಧಾನಸಭೆಯ ಕಲಾಪ ಬಲಿ!

India vs Sri Lanka: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್; ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್!