ಅಮಿತ್ ಶಾ 
ದೇಶ

370ನೇ ವಿಧಿ, ಆದಿವಾಸಿಗಳ ವಿವಾದ : ಕಾಂಗ್ರೆಸ್ ವಿರುದ್ಧ ಅಮಿತ್  ಶಾ ವಾಗ್ದಾಳಿ

370ನೇ ವಿಧಿ ಹಾಗೂ ಆದಿವಾಸಿಗಳ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ಕೇಂದ್ರ ಗೃಹ  ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

ಗಡ್ಚಿರೋಲಿ:  370ನೇ ವಿಧಿ ಹಾಗೂ ಆದಿವಾಸಿಗಳ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ಕೇಂದ್ರ ಗೃಹ  ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

 ಕಾಂಗ್ರೆಸ್ 70 ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ್ದು, ತಮ್ಮ ನಾಲ್ಕು ತಲೆಮಾರುಗಳು ಆದಿವಾಸಿಗಳಿಗಾಗಿ ಏನು ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿರುವ ಅಮಿತ್ ಶಾ, ಮುಂದಿನ ಐದು ವರ್ಷಗಳಲ್ಲಿ ಈ ಭಾಗವನ್ನು ನಕ್ಸಲ್ ಮುಕ್ತ ಪ್ರದೇಶವನ್ನಾಗಿ ಮಾಡಲಾಗುವುದು ಎಂದರು.

ಗಡ್ಚಿರೋಲಿ ಜಿಲ್ಲೆಯ ಅಹೆರಿಯಲ್ಲಿ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಹಾಗೂ ಎನ್ ಸಿಪಿ ಸರ್ಕಾರಗಳಿಗಿಂತ  ಮೋದಿ ಸರ್ಕಾರ ಆದಿವಾಸಿಗಳಿಗಾಗಿ ಹೆಚ್ಚಿನ ರೀತಿಯ ಕೆಲಸಗಳನ್ನು ಮಾಡಿರುವುದಾಗಿ ತಿಳಿಸಿದರು.

ಕಾಂಗ್ರೆಸ್ 370ನೇ ವಿಧಿಯನ್ನು ರದ್ದುಗೊಳಿಸಿಲ್ಲ, ಏಳು ದಶಕಗಳ ಕಾಲ ತನ್ನ  ವೋಟ್ ಬ್ಯಾಂಕಿಗಾಗಿ ಜಮ್ಮು - ಕಾಶ್ಮೀರದಲ್ಲಿ ಭಯೋತ್ಪಾದನೆ ಹರಡಲು ಹಾಗೂ 40 ಜನರು ಹತ್ಯೆಗೀಡಾಗಲು ಕಾಂಗ್ರೆಸ್ ಕಾರಣವಾಗಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರಿಂದಾಗಿ  370ನೇ ವಿಧಿ ರದ್ದುಗೊಂಡಿದೆ ಎಂದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದಾಗಿ ಗಡ್ಚಿರೋಲಿ ಒಂದರಲ್ಲಿಯೇ 1. 30 ಲಕ್ಷ ಶೌಚಾಲಯ, 48 ಸಾವಿರ ಅನಿಲ ಸಿಲಿಂಡರ್ ಪೂರೈಕೆ, 48 ಸಾವಿರ ಆದಿವಾಸಿಗಳಿಗೆ ವಿದ್ಯುತ್ ಪೂರೈಕೆ ಹಾಗೂ ಬುಡಕಟ್ಟು ಸಮುದಾಯದ 8 ಸಾವಿರ ಬಡವರಿಗೆ ಮನೆ ನಿರ್ಮಿಸಿಕೊಡಲಾಗಿದೆ ಎಂದು ಅಮಿತ್ ಶಾ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT