ಸಂಗ್ರಹ ಚಿತ್ರ 
ದೇಶ

ಸಹೋದ್ಯೋಗಿಗಳ ಕಿರುಕುಳ: ಬಿಎಚ್‍ಇಎಲ್ ಮಹಿಳಾ ಉದ್ಯೋಗಿ ನೇಣಿಗೆ ಶರಣು

 ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್ ಇಎಲ್) ಮಹಿಳಾ ಅಧಿಕಾರಿಯೊಬ್ಬರು ಸಹೋದ್ಯೋಗಿಗಳ ಕಿರುಕುಳಕ್ಕೆ ಬೇಸತ್ತು  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಹೈದರಾಬಾದ್: ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್ ಇಎಲ್) ಮಹಿಳಾ ಅಧಿಕಾರಿಯೊಬ್ಬರು ಸಹೋದ್ಯೋಗಿಗಳ ಕಿರುಕುಳಕ್ಕೆ ಬೇಸತ್ತು  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಬಿಎಚ್ ಇಎಲ್ ಸಂಸ್ಥೆಯ 33 ವರ್ಷದ ಅಕೌಂಟ್ಸ್ ಅಧಿಕಾರಿ ಗುರುವಾರ ಮಿಯಾಪುರ ಪ್ರದೇಶದ ತನ್ನ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ಅವರು ಡೆಪ್ಯೂಟಿ ಜನರಲ್ ಮ್ಯಾನೇಜರ್ ಮತ್ತು ಇತರ ಆರು ಸಹೋದ್ಯೋಗಿಗಳಿಂದ ಕಿರುಕುಳ ಅನುಭವಿಸುತ್ತಿದ್ದರೆಂದು  ಪೊಲೀಸರು ತಿಳಿಸಿದ್ದಾರೆ.

ಇದೀಗ ಡೆಪ್ಯೂಟಿ ಜನರಲ್ ಮ್ಯಾನೇಜರ್ ತ್ತು ಆಕೆಯ ಇತರ ಆರು ಸಹೋದ್ಯೋಗಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಮೃತ ಮಹಿಳೆ ಪತಿಯ ದೂರಿನ ಮೇರೆಗೆ ಮಿಯಾಪುರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಪೊಲೀಸ್ ಇನ್ಸ್‌ಪೆಕ್ಟರ್ ವೆಂಕಟೇಶ್ ಶಮಾಲಾ ಪ್ರಕಾರ, ಮಹಿಳೆ ಮನೆಯಲ್ಲಿ ಒಬ್ಬರೇ ಇದ್ದಾಗ ನೇಣು ಹಾಕಿಕೊಂಡಿದ್ದಾರೆ.ಅವರ ಕುಟುಂಬ ಸದಸ್ಯರು ಆಗಮಿಸಿ ಅವರ ಬೆಡ್ ರೂಮಿನ ಬಾಗಿಲು ತೆಗೆದಾಗ ಛಾವಣಿಯಲ್ಲಿ ನೇತಾಡುತ್ತಿರುವ ಮಹಿಳೆಯ ಶವ ಕಾಣಿಸಿದೆ. ಮಹಿಳೆ ಭೋಪಾಲ್ ಮೂಲದವರಾಗಿದ್ದು ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಒಂದನ್ನು ಬರೆದಿಟ್ಟಿದ್ದಾರೆ.ಇದರಲ್ಲಿ ಡಿಜಿಎಂ ಮತ್ತು ಇತರ ಆರು ಭೆಲ್ ಉದ್ಯೋಗಿಗಳು ತನ್ನ ಮೇಲೆ ಬೇಹುಗಾರಿಕೆ ನಡೆಸುವ ಮೂಲಕ ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಅವರು ತಮ್ಮ ಮೊಬೈಲ್ ಫೋನ್ ಅನ್ನು ಹ್ಯಾಕ್ ಮಾಡಿದ್ದಾರೆ ಮತ್ತು ಅವರ ಕರೆಗಳನ್ನು ಟ್ಯಾಪ್ ಮಾಡಿದ್ದಾರೆ ಎಂದೂ ಹೇಳಿದ್ದಾರೆ.ಈ ಹಿಂದೆ ಭೋಪಾಲ್‌ನಲ್ಲಿ ಪೋಸ್ಟ್ ಮಾಡಿದಾಗ ಕೆಲವು ಸಹೋದ್ಯೋಗಿಗಳು ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT