ಪ್ರಫುಲ್ ಪಟೇಲ್ 
ದೇಶ

ಅಕ್ರಮ ಹಣ ವರ್ಗಾವಣೆ ಕೇಸ್: ಇಡಿಯಿಂದ ಪ್ರಫುಲ್‌ ಪಟೇಲ್ ವಿಚಾರಣೆ

ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಬಂಟ ಇಕ್ಬಾಲ್‌ ಮಿರ್ಚಿ ಜತೆ ಅಕ್ರಮ ಹಣ ವಹಿವಾಟು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಹಾಗೂ ಎನ್ ಸಿಪಿ ಮುಖಂಡ ಪ್ರಫುಲ್‌ ಪಟೇಲ್‌ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ತೀವ್ರ ವಿಚಾರಣೆಗೆ ಒಳಪಡಿಸಿದೆ.

ಮುಂಬೈ: ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಬಂಟ ಇಕ್ಬಾಲ್‌ ಮಿರ್ಚಿ ಜತೆ ಅಕ್ರಮ ಹಣ ವಹಿವಾಟು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಹಾಗೂ ಎನ್ ಸಿಪಿ ಮುಖಂಡ ಪ್ರಫುಲ್‌ ಪಟೇಲ್‌ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ತೀವ್ರ ವಿಚಾರಣೆಗೆ ಒಳಪಡಿಸಿದೆ.

ಇಂದು ಬೆಳಗ್ಗೆ 10.30ಕ್ಕೆ ದಕ್ಷಿಣ ಮುಂಬೈನಲ್ಲಿರುವ ಇಡಿ ಕಚೇರಿಗೆ ಆಗಮಿಸಿದ ಪ್ರಫುಲ್ ಪಟೇಲ್ ಅವರನ್ನು ಬೆಳಗ್ಗೆ 11 ಗಂಟೆಯಿಂದ ಅಧಿಕಾರಿಗಳ ತಂಡ ವಿಚಾರಣೆ ನಡೆಸುತ್ತಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಪ್ರಫುಲ್ ಪಟೇಲ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಭೂಗತ ಜಗತ್ತು-ರಾಜಕೀಯದ ಪ್ರಕರಣ ಸದ್ದು ಮಾಡಿದ್ದು, ಎನ್‌ಸಿಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಪ್ರಫುಲ್‌ ಪಟೇಲ್‌ ಕುಟುಂಬದ ಮಾಲೀಕತ್ವದ ಮಿಲೇನಿಯಂ ಡೆವಲಪರ್ಸ್ ಮತ್ತು ಹತ ಇಕ್ಬಾಲ್‌ ಮಿರ್ಚಿ ನಡುವೆ ಈ ಹಿಂದೆ ನಡೆದ ಭೂಮಿ ಖರೀದಿ ವಹಿವಾಟಿನಲ್ಲಿಅಕ್ರಮ ನಡೆದಿದೆ ಎನ್ನಲಾಗಿದೆ. ಮುಂಬೈನ ಅತಿ ದುಬಾರಿ ಪ್ರದೇಶ ಎನಿಸಿರುವ ವರ್ಲಿಯ ನೆಹರೂ ತಾರಾಲಯದ ಮುಂಭಾಗ ಇಕ್ಬಾಲ್‌ ಪತ್ನಿ ಹಜಾರಾ ಮೆಮೊನ್‌ಗೆ ಸೇರಿರುವ ನಿವೇಶನವನ್ನು ಮಿಲೇನಿಯಂ ಡೆವಲಪರ್ಸ್ ಕಂಪನಿಗೆ ಹಸ್ತಾಂತರಿಸಲಾಗಿತ್ತು. ಹೀಗೆ ಹಸ್ತಾಂತರಗೊಂಡ ನಿವೇಶನದಲ್ಲಿಕಂಪನಿಯು 15 ಅಂತಸ್ತುಗಳ ವಾಣಿಜ್ಯ ಮತ್ತು ಗೃಹ ಬಳಕೆಯ 'ಸೀಜೆ ಹೌಸ್‌' ಹೆಸರಿನ ಕಟ್ಟಡವನ್ನು 2006-07ನೇ ಸಾಲಿನಲ್ಲಿನಿರ್ಮಿಸಿದೆ. 

2007ರಲ್ಲಿ ಮಿಲೇನಿಯಂ ಡೆವಲಪರ್ಸ್ ಕಂಪನಿಯು ಈ ಕಟ್ಟಡದಲ್ಲಿನ ಸರಿಸುಮಾರು 200 ಕೋಟಿ ರೂ. ಮಾರುಕಟ್ಟೆ ಮೌಲ್ಯದ 14,000 ಚದರ ಅಡಿಯ ಎರಡು ಫ್ಲ್ಯಾಟ್‌ಗಳನ್ನು ಇಕ್ಬಾಲ್‌ ಮೆಮೊನ್‌ ಕುಟುಂಬಕ್ಕೆ ನೀಡಿತ್ತು. ಈ ಕೊಡುಕೊಳ್ಳುವಿಕೆಯಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂಬ ಆಪಾದನೆಗಳು ಕೇಳಿಬಂದಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT