ಹತ್ಯೆಯಾದ ಸ್ಥಳದ ಸಿಸಿಟಿವಿ ದೃಶ್ಯಾವಳಿ 
ದೇಶ

ಹಿಂದು ಹೋರಾಟಗಾರ ಕಮಲೇಶ್ ತಿವಾರಿ ಹತ್ಯೆ ಪ್ರಕರಣ: 2 ಮೌಲ್ವಿ ಸೇರಿ ಐವರು ವಶಕ್ಕೆ

ಹಿಂದೂ ಮಹಾಸಭಾದ ಮಾಜಿ ನಾಯಕ ಕಮಲೇಶ್ ತಿವಾರಿ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮೌಲ್ವಿಗಳು ಸೇರಿದಂತೆ 5 ಮಂದಿಯನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ. 

ಲಖನೌ: ಹಿಂದೂ ಮಹಾಸಭಾದ ಮಾಜಿ ನಾಯಕ ಕಮಲೇಶ್ ತಿವಾರಿ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮೌಲ್ವಿಗಳು ಸೇರಿದಂತೆ 5 ಮಂದಿಯನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ. 

ಮೊಹಮ್ಮದ್ ಮುಫ್ತಿ ನಯೀಮ್ ಕಜ್ಮಿ ಮತ್ತು ಇಮಾಮ್ ಮೌಲಾನಾ ಅನ್ವಾರುಲ್ ಹಕ್ ಎಂಬ ಇಬ್ಬರು ಮೌಲ್ವಿಗಳ ಹೆಸರುಗಳನ್ನು ಎಫ್ಐಆರ್'ನಲ್ಲಿ ದಾಖಲಿಸಲಾಗಿದೆ ಎಂದು ಡಿಜಿಪಿ ಒಪಿ ಸಿಂಗ್ ಅವರು ಹೇಳಿದ್ದಾರೆ. 

ಪ್ರಕರಣ ಸಂಬಂಧ ಇನ್ನೂ ಮೂವರನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ವಶಕ್ಕೆ ಪಡೆದ ಆರೋಪಿಗಳನ್ನು ಮೊಹ್ಸಿನ್ ಶೇಕ್, ಫೈಜಾನ್ ಮತ್ತು ರಶಿದ್ ಅಹ್ಮದ್ ಎಂದು ಗುರ್ತಿಸಲಾಗಿದೆ. ಪ್ರಕರಣ ಸಂಬಂಧ ಭಯೋತ್ಪಾದನಾ ಸಂಘಟನೆಗಳ ನಂಟು ಇರುವುದಾಗಿ ಈ ವರೆಗೂ ಯಾವುದೇ ಸಾಕ್ಷ್ಯಗಳು ಲಭ್ಯವಾಗಿಲ್ಲ. ಪ್ರಕರಣ ಕುರಿತು ಉತ್ತರ ಪ್ರದೇಶ ಪೊಲೀಸರು ಹಾಗೂ ಗುಜರಾತ್ ಪೊಲೀಸರು ಜಂಟಿಯಾಗಿ ತನಿಖೆ ನಡೆಸುತ್ತಿದ್ದಾರೆಂದು ತಿಳಿಸಿದ್ದಾರೆ. 

ಹಿಂದು ಸಭಾ ನಾಯಕರಾಗಿದ್ದ ತಿವಾರಿ (45)ಯವರನ್ನು ಖುರ್ಷೆದ್ ಬಾಘ್ ನಲ್ಲಿರುವ ಅವರ ನಿವಾಸದ ಎದುರು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. 

2015ರಲ್ಲಿ ತಿವಾರಿಯವರು ವಿವಾದಾತ್ಮಕ ಹೇಳಿಕೆಯೊಂದರನ್ನು ನೀಡಿದ್ದು, ಈ ಕಾರಣದಿಂದಲೇ ಅವರನ್ನು ಹತ್ಯೆ ಮಾಡಿರುವ ಶಂಕೆಗಳು ವ್ಯಕ್ತವಾಗಿವೆ ಎಂದು ಡಿಜಿಪಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT