ಸಂಗ್ರಹ ಚಿತ್ರ 
ದೇಶ

ಹೃದಯ ಶಸ್ತ್ರಚಿಕಿತ್ಸೆಗೆ ಹಣದ ಕೊರತೆ, ಮತ್ತೋರ್ವ ಪಿಎಂಸಿ ಬ್ಯಾಂಕ್ ಠೇವಣಿದಾರನ ಸಾವು

ಭಾರತೀಯ ರಿಸರ್ವ್ ಬ್ಯಾಂಕ್ ನ ಕೆಂಗಣ್ಣಿಗೆ ಗುರಿಯಾಗಿರುವ ಪಂಜಾಬ್ ಮತ್ತು ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್ (ಪಿಎಂಸಿ ಬ್ಯಾಂಕ್) ಹಗರಣದ ತನಿಖೆ ಜಾರಿಯಲ್ಲಿರುವಂತೆಯೇ ಇಲ್ಲಿ ಠೇವಣಿ ಇಟ್ಟಿದ್ದ ಮತ್ತೋರ್ವ ಖಾತೆದಾರ ಸಾವನ್ನಪ್ಪಿದ್ದಾನೆ.

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ನ ಕೆಂಗಣ್ಣಿಗೆ ಗುರಿಯಾಗಿರುವ ಪಂಜಾಬ್ ಮತ್ತು ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್ (ಪಿಎಂಸಿ ಬ್ಯಾಂಕ್) ಹಗರಣದ ತನಿಖೆ ಜಾರಿಯಲ್ಲಿರುವಂತೆಯೇ ಇಲ್ಲಿ ಠೇವಣಿ ಇಟ್ಟಿದ್ದ ಮತ್ತೋರ್ವ ಖಾತೆದಾರ ಸಾವನ್ನಪ್ಪಿದ್ದಾನೆ.

ಹೌದು.. ಸುಮಾರು 83 ವರ್ಷದ ಮುರಳಿ ಧರ್ರ ಎಂಬ ಪಿಎಂಸಿ ಬ್ಯಾಂಕ್ ಖಾತೆದಾರ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಪಿಎಂಸಿ ಬ್ಯಾಂಕ್ ನಲ್ಲಿ ಅವರು ಸುಮಾರು 80 ಲಕ್ಷ ರೂಗಳನ್ನು ಠೇವಣಿ ಇಟ್ಟಿದ್ದರು. ಆದರೆ ಇತ್ತೀಚೆಗೆ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆಗೆ ವೈದ್ಯರು ಸೂಚಿಸಿದ್ದರು. ಆದರೆ ಶಸ್ತ್ರಚಿಕಿತ್ಸೆಗೆ ಹಣ ಕಟ್ಟಲಾಗದೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಮುರಳಿ ಧರ್ರ್ ಅವರು ಪಿಎಂಸಿ ಖಾತೆಯಲ್ಲಿ ಸುಮಾರು 80 ಲಕ್ಷ ಹಣವನ್ನು ಠೇವಣಿ ಇಟ್ಟಿದ್ದರು ಎಂದು ಅವರ ಮಗ ಪ್ರೇಮ್ ಧರ್ರ್ ಮಾಹಿತಿ ನೀಡಿದ್ದಾರೆ. 

ಕಳೆದ ಸೆಪ್ಟೆಂಬರ್ ನಿಂದ ಆರ್ ಬಿಐ ಪಿಎಂಸಿ ಬ್ಯಾಂಕ್ ಮೇಲೆ ನಿರ್ಬಂಧ ಹೇರಿದ್ದು, ಹಣ ಹಿಂತೆಗೆತದ ಮೇಲೂ ನಿರ್ಬಂಧ ಹೇರಿತ್ತು. ಈ ಬೆಳವಣಿಗೆಯಿಂದಾಗಿ ಕಂಗಾಲದ ಖಾತೆದಾರರು ತಮ್ಮ ಹಣ ಹಿಂತೆಗೆದುಕೊಳ್ಳಲು ಮುಂದಾದರು. ಆದರೆ ಈ ಪೈಕಿ ಹಣ ಹಿಂತೆಗೆಯಲಾಗದ ಓರ್ವ ಖಾತೆದಾರರು ಆತ್ಮಹತ್ಯೆ ಮಾಡಿಕೊಂಡರೆ, ಮತ್ತೆ ಇಬ್ಬರು ಖಾತೆದಾರರು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. ಇದೀಗ ಮತ್ತೋರ್ವ ಖಾತೆದಾರ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 4ಕ್ಕೆ ಏರಿದಂತಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

SCROLL FOR NEXT