ಸಂಗ್ರಹ ಚಿತ್ರ 
ದೇಶ

ಹೃದಯ ಶಸ್ತ್ರಚಿಕಿತ್ಸೆಗೆ ಹಣದ ಕೊರತೆ, ಮತ್ತೋರ್ವ ಪಿಎಂಸಿ ಬ್ಯಾಂಕ್ ಠೇವಣಿದಾರನ ಸಾವು

ಭಾರತೀಯ ರಿಸರ್ವ್ ಬ್ಯಾಂಕ್ ನ ಕೆಂಗಣ್ಣಿಗೆ ಗುರಿಯಾಗಿರುವ ಪಂಜಾಬ್ ಮತ್ತು ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್ (ಪಿಎಂಸಿ ಬ್ಯಾಂಕ್) ಹಗರಣದ ತನಿಖೆ ಜಾರಿಯಲ್ಲಿರುವಂತೆಯೇ ಇಲ್ಲಿ ಠೇವಣಿ ಇಟ್ಟಿದ್ದ ಮತ್ತೋರ್ವ ಖಾತೆದಾರ ಸಾವನ್ನಪ್ಪಿದ್ದಾನೆ.

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ನ ಕೆಂಗಣ್ಣಿಗೆ ಗುರಿಯಾಗಿರುವ ಪಂಜಾಬ್ ಮತ್ತು ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್ (ಪಿಎಂಸಿ ಬ್ಯಾಂಕ್) ಹಗರಣದ ತನಿಖೆ ಜಾರಿಯಲ್ಲಿರುವಂತೆಯೇ ಇಲ್ಲಿ ಠೇವಣಿ ಇಟ್ಟಿದ್ದ ಮತ್ತೋರ್ವ ಖಾತೆದಾರ ಸಾವನ್ನಪ್ಪಿದ್ದಾನೆ.

ಹೌದು.. ಸುಮಾರು 83 ವರ್ಷದ ಮುರಳಿ ಧರ್ರ ಎಂಬ ಪಿಎಂಸಿ ಬ್ಯಾಂಕ್ ಖಾತೆದಾರ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಪಿಎಂಸಿ ಬ್ಯಾಂಕ್ ನಲ್ಲಿ ಅವರು ಸುಮಾರು 80 ಲಕ್ಷ ರೂಗಳನ್ನು ಠೇವಣಿ ಇಟ್ಟಿದ್ದರು. ಆದರೆ ಇತ್ತೀಚೆಗೆ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆಗೆ ವೈದ್ಯರು ಸೂಚಿಸಿದ್ದರು. ಆದರೆ ಶಸ್ತ್ರಚಿಕಿತ್ಸೆಗೆ ಹಣ ಕಟ್ಟಲಾಗದೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಮುರಳಿ ಧರ್ರ್ ಅವರು ಪಿಎಂಸಿ ಖಾತೆಯಲ್ಲಿ ಸುಮಾರು 80 ಲಕ್ಷ ಹಣವನ್ನು ಠೇವಣಿ ಇಟ್ಟಿದ್ದರು ಎಂದು ಅವರ ಮಗ ಪ್ರೇಮ್ ಧರ್ರ್ ಮಾಹಿತಿ ನೀಡಿದ್ದಾರೆ. 

ಕಳೆದ ಸೆಪ್ಟೆಂಬರ್ ನಿಂದ ಆರ್ ಬಿಐ ಪಿಎಂಸಿ ಬ್ಯಾಂಕ್ ಮೇಲೆ ನಿರ್ಬಂಧ ಹೇರಿದ್ದು, ಹಣ ಹಿಂತೆಗೆತದ ಮೇಲೂ ನಿರ್ಬಂಧ ಹೇರಿತ್ತು. ಈ ಬೆಳವಣಿಗೆಯಿಂದಾಗಿ ಕಂಗಾಲದ ಖಾತೆದಾರರು ತಮ್ಮ ಹಣ ಹಿಂತೆಗೆದುಕೊಳ್ಳಲು ಮುಂದಾದರು. ಆದರೆ ಈ ಪೈಕಿ ಹಣ ಹಿಂತೆಗೆಯಲಾಗದ ಓರ್ವ ಖಾತೆದಾರರು ಆತ್ಮಹತ್ಯೆ ಮಾಡಿಕೊಂಡರೆ, ಮತ್ತೆ ಇಬ್ಬರು ಖಾತೆದಾರರು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. ಇದೀಗ ಮತ್ತೋರ್ವ ಖಾತೆದಾರ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 4ಕ್ಕೆ ಏರಿದಂತಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT