ಕರ್ತಾರ್‌ಪುರ್ ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿದ್ದು ದೇಶ ವಿಭಜನೆಯ ವೇಳೆ ನೆಡೆದ ಪ್ರಮಾದ; ಪ್ರಧಾನಿ ಮೋದಿ 
ದೇಶ

ಕರ್ತಾರ್‌ಪುರ್ ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿದ್ದು ದೇಶ ವಿಭಜನೆಯ ವೇಳೆ ನಡೆದ ಪ್ರಮಾದ; ಪ್ರಧಾನಿ ಮೋದಿ

ಅಂತರರಾಷ್ಟ್ರೀಯ ಗಡಿಯಿಂದ ಕೇವಲ ನಾಲ್ಕು ಕಿಲೋಮೀಟರ್ ದೂರದಲ್ಲಿರುವ ಪವಿತ್ರ ಕರ್ತಾರ್‌ಪುರ್ ಸಾಹಿಬ್ ಗುರುದ್ವಾರವನ್ನು ನೆರೆಯ ದೇಶಕ್ಕೆ ಬಿಟ್ಟುಕೊಟ್ಟಿದ್ದು ದೇಶ ವಿಭಜನೆಯ ವೇಳೆ ಮಾಡಿದ ಮಹಾ ಪ್ರಮಾದ ಎಂದು ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿರ್ಸಾ: ಏಳು ದಶಕಗಳಿಂದ ಪಾಕಿಸ್ತಾನದ ಕರ್ತಾರ್‌ಪುರ್ ಸಾಹಿಬ್ ಗುರುದ್ವಾರದೊಂದಿಗೆ ಭಾರತವನ್ನು ಸಂಪರ್ಕಿಸುವ ಕಾರಿಡಾರ್ ನಿರ್ಮಿಸಲು ಯಾವುದೇ ಪ್ರಯತ್ನವನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರಗಳು ನಡೆಸಲಿಲ್ಲ ಎಂದು ದೂಷಿಸಿರುವ ಪ್ರಧಾನಿ ನರೇಂದ್ರ ಮೋದಿ, ಅಂತರರಾಷ್ಟ್ರೀಯ ಗಡಿಯಿಂದ ಕೇವಲ ನಾಲ್ಕು ಕಿಲೋಮೀಟರ್ ದೂರದಲ್ಲಿರುವ ಪವಿತ್ರ ಕರ್ತಾರ್‌ಪುರ್ ಸಾಹಿಬ್ ಗುರುದ್ವಾರವನ್ನು ನೆರೆಯ ದೇಶಕ್ಕೆ ಬಿಟ್ಟುಕೊಟ್ಟಿದ್ದು ದೇಶ ವಿಭಜನೆಯ ವೇಳೆ ಮಾಡಿದ ಮಹಾ ಪ್ರಮಾದ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹರಿಯಾಣದ ಸಿರ್ಸಾ ಜಿಲ್ಲೆಯ ಎಲ್ಲೆನಾಬಾದ್‌ನಲ್ಲಿ ಶನಿವಾರ ಚುನಾವಣಾ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 70 ವರ್ಷಗಳಿಂದ ನಿರ್ಮಿಸಲು ಸಾಧ್ಯವಾಗದಿದ್ದ ಈ ಕಾರಿಡಾರ್ ಮುಂದಿನ ತಿಂಗಳು ಉದ್ಘಾಟನೆಗೊಳ್ಳುತ್ತಿದೆ. ಇದರಿಂದ ಪವಿತ್ರ ಕರ್ತಾರ್‌ಪುರ್ ಸಾಹಿಬ್ ಗುರುದ್ವಾರದ ಯಾತ್ರೆ ಕೈಗೊಳ್ಳುವ ಸಿಖ್ ಭಕ್ತಾದಿಗಳಿಗೆ ಅನುಕೂಲವಾಗಲಿದೆ ಎಂದರು.
ಕಳೆದ ಏಳು ದಶಕಗಳಿಂದ ಬೈನಾಕ್ಯುಲರ್ ಮೂಲಕ ಪವಿತ್ರ ಕರ್ತಾರ್ ಪುರ್ ಗುರುದ್ವಾರ ಸಾಹಿಬ್ ನೋಡುವುದಕ್ಕಿಂತ ದುರದೃಷ್ಟಕರ ಜಗತ್ತಿನಲ್ಲಿ ಇನ್ಯಾವುದಿದೆ ಎಂದು ಮೋದಿ ಪ್ರಶ್ನಿಸಿದರು.

1947ರಲ್ಲಿ ದೇಶ ವಿಭಜನೆಯ ವೇಳೆ ಗಡಿ ನಿಗಧಿಪಡಿಸಿದರವರು ಇದಕ್ಕೆ ಕಾರಣ. ಗುರುಗಳು ಹಾಗೂ ಭಕ್ತರನ್ನು ಕೇವಲ ನಾಲ್ಕು ಕಿಲೋಮೀಟರ್ ದೂರದಲ್ಲಿ ಬೇರೆ ಬೇರೆ ಮಾಡುತ್ತಿದ್ದೇವೆ ಎಂಬ ಆಲೋಚನೆ ಅವರಿಗೆ ಬರಲು ಸಾಧ್ಯವಾಗಲಿಲ್ಲ. ನಂತರ ಎಪ್ಪತ್ತು ವರ್ಷಗಳಿಂದ ಕಾಂಗ್ರೆಸ್ ಈ ಆಲೋಚನೆಯನ್ನೇ ಮಾಡಲಿಲ್ಲ ಎಂದು ಮೋದಿ ಟೀಕಿಸಿದರು. ಕರ್ತಾರ್‌ಪುರ ಕಾರಿಡಾರ್ ಉದ್ಘಾಟನಾ ಸಮಾರಂಭ ವಿಶ್ವದಾದ್ಯಂತ ಆಚರಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದ್ದು, ಒಂದು ರಾಷ್ಟ್ರೀಯ ಹೆದ್ದಾರಿಗೆ ಗುರುನಾನಕ್ ದೇವ್ ಅವರ ಹೆಸರಿಸಲಾಗುವುದು ಎಂದು ಪ್ರಧಾನಿ ಘೋಷಿಸಿದರು.

ಕಾಂಗ್ರೆಸ್ ಮತ್ತು ಅದರ ಮಿತ್ರ ರಾಷ್ಟ್ರಗಳಿಗೆ ಭಾರತೀಯ ಸಂಪ್ರದಾಯದ ಬಗ್ಗೆ ಗೌರವವಿಲ್ಲ ಎಂದು ಮೋದಿ ಆರೋಪಿಸಿದರು.
ಕಾಂಗ್ರೆಸ್ ದೇಶದ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಎಂದೂ ಗೌರವಿಸಲಿಲ್ಲ. ಪೂಜಾ ಸ್ಥಳಗಳ ವಿಷಯದಲ್ಲಿ ಅನುಸರಿಸಿದ ಧೋರಣೆಯನ್ನೇ ಜಮ್ಮು ಮತ್ತು ಕಾಶ್ಮೀರದಲ್ಲಿ ಅನುಸರಿಸಿ, ಕಾಶ್ಮೀರ ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸಿತೆ ವಿನಃ ಯಾವುದೇ ಪರಿಹಾರ ರೂಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಿಲ್ಲ ಪ್ರಧಾನಿ ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT