ಶಿವಸೇನೆ ಮುಖ್ಯಸ್ಥ ಉದ್ದವ್ ಠಾಕ್ರೆ ಅವರೊಂದಿಗೆ ಗುರ್ಮೀತ್ ಸಿಂಗ್ ಅಲಿಯಾಸ್ ಷಿರಾ 
ದೇಶ

ಸಲ್ಮಾನ್‌ ಖಾನ್ ಆಪ್ತ ಸಹವರ್ತಿ ಶಿವಸೇನೆ ಪಕ್ಷಕ್ಕೆ ಸೇರ್ಪಡೆ 

ಮುಂದಿನ ಎರಡು ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಮಹಾರಾಷ್ಟ್ರದಲ್ಲಿ ಆಸಕ್ತಿದಾಯಕ ಬೆಳವಣಿಗೆಗಳು ಘಟಿಸುತ್ತಿವೆ.

ಮುಂಬೈ: ಮುಂದಿನ ಎರಡು ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಮಹಾರಾಷ್ಟ್ರದಲ್ಲಿ ಆಸಕ್ತಿದಾಯಕ ಬೆಳವಣಿಗೆಗಳು ಘಟಿಸುತ್ತಿವೆ. ಶನಿವಾರ ಸಂಜೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯಗೊಳ್ಳಲಿದ್ದು, ಇದರಿಂದಾಗಿ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ಕೊನೆಗಳಿಗೆ ಆಸ್ತ್ರಗಳನ್ನು ಪ್ರಯೋಗಿಸಲು ಮುಂದಾಗಿವೆ.


 ಈ ನಿಟ್ಟಿನಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರೊಂದಿಗೆ ದೀರ್ಘಕಾಲ ಕಾರ್ಯನಿರ್ವಹಿಸಿದ್ದ ಅಂಗರಕ್ಷಕ ಹಾಗೂ ಪ್ರಮುಖ ಸಹವರ್ತಿ ಗುರ್ಮೀತ್ ಸಿಂಗ್ ಅಲಿಯಾಸ್ ಷಿರಾ ಶುಕ್ರವಾರ ಶಿವಸೇನೆ ಸೇರಿದರು.

ಗುರ್ಮೀತ್ ಸಿಂಗ್ ಅವರಿಗೆ ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಮಾರಂಭದಲ್ಲಿ ಪಕ್ಷದ ಯುವ ಘಟಕದ ಅಧ್ಯಕ್ಷ ಆದಿತ್ಯ ಠಾಕ್ರೆ ಕೂಡ ಉಪಸ್ಥಿತರಿದ್ದರು. 

ಚುನಾವಣಾ ಮತದಾನಕ್ಕೆ ಕೆಲವೇ ಗಂಟೆಗಳಿಗೆ ಮುನ್ನ ಸಲ್ಮಾನ್ ಖಾನ್ ಅವರ ಸಹಚರ ಶಿವಸೇನೆ ಸೇರಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಗುರ್ಮಿತ್ ಸಿಂಗ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಉದ್ಧವ್ ಠಾಕ್ರೆ ಮತ್ತು ಆದಿತ್ಯ ಠಾಕ್ರೆ ಇಬ್ಬರೂ ಭಾಗಿಯಾಗಿರುವುದು ಅನುಮಾನಗಳನ್ನು ಮತ್ತಷ್ಟು ಬಲಗೊಳಿಸಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸೋಮವಾರ (ಅಕ್ಟೋಬರ್ 21) ನಡೆಯಲಿದೆ. ಅಕ್ಟೋಬರ್ 24 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT