ತೆಲಂಗಾಣ ಬಂದ್: ಟಿಎಸ್ಆರ್'ಟಿಸಿ ನೌಕರರು-ಪೊಲೀಸರ ನಡುವೆ ಘರ್ಷಣೆ 
ದೇಶ

ತೆಲಂಗಾಣ ಬಂದ್: ಟಿಎಸ್ಆರ್'ಟಿಸಿ ನೌಕರರು-ಪೊಲೀಸರ ನಡುವೆ ಘರ್ಷಣೆ

ತೆಲಂಗಾಣದಲ್ಲಿ ಬಂದ್ ಆಚರಿಸಲಾಗುತ್ತಿದ್ದು, ಪ್ರತಿಭಟನೆ ವೇಳೆ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮ (ಟಿಎಸ್ಆರ್'ಟಿಸಿ) ನೌಕರರು ಹಾಗೂ ಪೊಲೀಸರು ನಡುವೆ ಘರ್ಷಣೆ ಏರ್ಪಟ್ಟಿದೆ ಎಂದು ಶನಿವಾರ ತಿಳಿದುಬಂದಿದೆ. 

ಪರಕಲ (ತೆಲಂಗಾಣ): ತೆಲಂಗಾಣದಲ್ಲಿ ಬಂದ್ ಆಚರಿಸಲಾಗುತ್ತಿದ್ದು, ಪ್ರತಿಭಟನೆ ವೇಳೆ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮ (ಟಿಎಸ್ಆರ್'ಟಿಸಿ) ನೌಕರರು ಹಾಗೂ ಪೊಲೀಸರು ನಡುವೆ ಘರ್ಷಣೆ ಏರ್ಪಟ್ಟಿದೆ ಎಂದು ಶನಿವಾರ ತಿಳಿದುಬಂದಿದೆ. 

ಟಿಎಸ್ಆರ್'ಟಿಸಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಶನಿವಾರ 15 ದಿನಕ್ಕೆ ಕಾಲಿಟ್ಟಿದ್ದು, ವರಂಗಲ್ ಜಿಲ್ಲೆಯ ಪರಕಲ ಟೌನ್ ನಲ್ಲಿ ಪ್ರತಿಭಟನಾ ನಿರತ ನೌಕರರು ಹಾಗೂ ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟಿದೆ ಎಂದು ವರದಿಗಲು ತಿಳಿಸಿವೆ. 

ಪ್ರತಿಭಟನಾ ನಿರತ ನೌಕರರು ಹಾಗೂ ಇತರೆ ಪಕ್ಷಗಳ ನಾಯಕರು ಪರಕಲ ಬಸ್ ಡಿಪೋ ಬಳಿ ತೆರಳಿದ್ದು, ಈ ವೇಳೆ ರಸ್ತೆಯಲ್ಲಿ ತೆರಳುತ್ತಿದ್ದ ಬಸ್ ಗಳನ್ನು ತಡೆಹಿಡಿಯಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮಧ್ಯ ಪ್ರವೇಶ ಮಾಡಿದ್ದಾರೆ. ಪರಿಣಾಮ ಪೊಲೀಸರೊಂದಿಗೆ ನೌಕರರು ಮಾತಿನ ಚಕಮಕಿ ನಡೆಸಿದ್ದು, ಬಳಿಕ ಇಬ್ಬರ ನಡುವೆ ಘರ್ಷಣೆ ಏರ್ಪಟ್ಟಿದೆ ಎಂದು ತಿಳಿದುಬಂದಿದೆ.
 
ಘರ್ಷಣೆ ವೇಳೆ ಕೆಲ ಪ್ರತಿಭಟನಾನಿರತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತೀವ್ರ ಭದ್ರತೆಯೊಂದಿಗೆ ಬಸ್ ಗಳು ಸಂಚಾರ ನಡೆಸಲು ಪೊಲೀಸರು ಅವಕಾಶ ಮಾಡಿಕೊಟ್ಟಿದ್ದಾರೆ. ನೌಕರರ ಬಂದ್ ಕರೆಗೆ ಹಲವು ವಿರೋಧ ಪಕ್ಷಗಳು ಬೆಂಬಲ ನೀಡಿದ್ದು, ಕೆಲ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT