ಚಿದಂಬರಂ 
ದೇಶ

ಐಎನ್‌ಎಕ್ಸ್‌  ಮೀಡಿಯಾ ಹಗರಣ: ಇಂದು ಚಿದಂಬರಂ ಜಾಮೀನು ತೀರ್ಪು ಪ್ರಕಟ

ಐಎನ್‌ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೊಳಗಾಗಿರುವ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರ ಜಾಮೀನು ಅರ್ಜಿಯ ತೀರ್ಪುನ್ನು ಸುಪ್ರೀಂ ಕೋರ್ಟ್ ಮಂಗಳವಾರ ಪ್ರಕಟಿಸಲಿದೆ.

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೊಳಗಾಗಿರುವ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರ ಜಾಮೀನು ಅರ್ಜಿಯ ತೀರ್ಪುನ್ನು ಸುಪ್ರೀಂ ಕೋರ್ಟ್ ಮಂಗಳವಾರ ಪ್ರಕಟಿಸಲಿದೆ.

ಕಳೆದ ಶುಕ್ರವಾರ ಚಿದಂಬರಂ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದ್ದು, ಇಂದು ಆದೇಶ ಪ್ರಕಟಿಸಲಿದೆ.

ಚಿದಂಬರಂ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಕಾಂಗ್ರೆಸ್ ನಾಯಕ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಶುಕ್ರವಾರ ಸಿಬಿಐ ಚಿದಂಬರಂ, ಅವರ ಪುತ್ರ ಕಾರ್ತಿ ಹಾಗೂ ಅಧಿಕಾರಿಗಳು ಸೇರಿದಂತೆ 15 ಮಂದಿಯ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ. ಹೀಗಾಗಿ ಚಿದಂಬರಂ ಅವರು ಜಾಮೀನು ಪಡೆಯುವ ವಿಶ್ವಾಸದಲ್ಲಿದ್ದಾರೆ.

ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಹಾಗೂ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಚಿದಂಬರಂ ಅವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ.

2007ರ ಅವಧಿಯಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದ ಚಿದಂಬರಂ ಅವರು ವಿದೇಶಿ ಬಂಡವಾಳ ಉತ್ತೇಜನ ಮಂಡಳಿಯಲ್ಲಿ ಕೆಲವು ಅವ್ಯವಹಾರ ಮೂಲಕ ಐಎನ್‌ಎಕ್ಸ್ ಮೀಡಿಯಾ ಹೌಸ್‌ಗೆ "ನೆರವು' ಮಾಡಿಕೊಟ್ಟ ಆರೋಪ ಎದುರಿಸುತ್ತಿದ್ದು, 305 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಸಿಬಿಐ ಅಧಿಕಾರಿಗಳು 2007ರಲ್ಲಿ ಪ್ರಕರಣ ದಾಖಲಿಸಿದ್ದರು. 

ಈ ಸಂಬಂಧ ಚಿದಂಬರಂ ಪುತ್ರ ಕಾರ್ತಿ ವಿರುದ್ಧ ಎರಡು ಪ್ರಕರಣ ದಾಖಲಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT