ಸಂಗ್ರಹ ಚಿತ್ರ 
ದೇಶ

ತ್ರಿವಳಿ ತಲಾಕ್ ಕಾನೂನು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ 

ತ್ವರಿತ ತ್ರಿವಳಿ ತಲಾಕ್ ಅಪರಾಧ ಎಂದು ಹೇಳುವ ಕಾನೂನು ಪ್ರಶ್ನಿಸಿ  ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್ಬಿ) ಸೋಮವಾರ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದೆ.

ನವದೆಹಲಿ: ತ್ವರಿತ ತ್ರಿವಳಿ ತಲಾಕ್ ಅಪರಾಧ ಎಂದು ಹೇಳುವ ಕಾನೂನು ಪ್ರಶ್ನಿಸಿ  ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್ಬಿ) ಸೋಮವಾರ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದೆ.

ಮುಸ್ಲಿಂ ಮಹಿಳಾ (ವಿವಾಹದ ಹಕ್ಕುಗಳ ಸಂರಕ್ಷಣೆ) ಕಾಯ್ದೆ, 2019 ತಲಾಕ್-ಇ-ಬಿಡ್ಡತ್ ಅಥವಾ ಯಾವುದೇ ಬಗೆಯ ತಲಾಕ್ ಅನ್ನು ಕಾನೂನುಬಾಹಿರ ಎಂದು ಘೋಷಿಸುತ್ತದೆ. ಒಂದೇ ಘಳಿಗೆಯಲ್ಲಿ ಮೂರು ಬಾರಿ ಆಡುವ ಅಥವಾ ಬರೆಯುವ ಅಥವಾ  ಎಸ್‌ಎಂಎಸ್ ಅಥವಾ ವಾಟ್ಸಾಪ್ ಅಥವಾ ಇನ್ನಾವುದೇ ಎಲೆಕ್ಟ್ರಾನಿಕ್ ಚಾಟ್‌ನಲ್ಲಿ ಕೊಡಲಾಗುವ ತಲಾಕ್ ಕಾನೂನುಬಾಹಿರವಾಗಿದೆ.

ಯಾವುದೇ ಮುಸ್ಲಿಂ ಪತಿಗೆ ತನ್ನ ಹೆಂಡತಿಗೆ ಕಾನೂನುಬಾಹಿರ ತಲಾಕ್ ನೀಡಿದ್ದಾದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆಗೆ ಗುರಿಯಾಗಬೇಕು ಮತ್ತು ದಂಡಕ್ಕೆ ಹೊಣೆಗಾರನಾಗಿರಬೇಕು ಎಂದು ಕಾನೂನು ಹೇಳಿದೆ. ಆದರೆ ಎಐಎಂಪಿಎಲ್ಬಿ ಹಾಗೂ ಕಮಲ್ ಫಾರೂಕಿ ಅವರ ಮನವಿಯು ಈ ಕಾಯಿದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದೆ, ಇದು ಸ್ಪಷ್ಟವಾಗಿ ಅನಿಯಂತ್ರಿತವಾಗಿದೆ ಮತ್ತು ಸಂವಿಧಾನದ 14, 15, 20 ಮತ್ತು 21 ನೇ ವಿಧಿಗಳನ್ನು ಉಲ್ಲಂಘಿಸಿದೆ ಎಂದದ್ದಲ್ಲದೆ ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ಅನಗತ್ಯ ಹಸ್ತಕ್ಷೇಪಕ್ಕೆ ಕಾರಣವಾಗಲಿದೆ ಎಂದು ಅವರು ವಾದಿಸಿದ್ದಾರೆ.

"ಈ ಕಾನೂನು ವ್ಯಕ್ತಿಯ ಜೀವನ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ದಂಡದ ಪರಿಣಾಮಗಳನ್ನು ಹೇಳಿರುವ ಯಾವುದೇ ಕಾಯ್ದೆಯು ತಪ್ಪನ್ನು ವ್ಯಾಖ್ಯಾನಿಸುವುದು ಅಗತ್ಯ. ಇದು ಕಾನೂನಿನ ಪ್ರಾಥಮಿಕ ತತ್ವವಾಗಿದೆ  ಇದರ ಬಗ್ಗೆ ಮುಸ್ಲಿಂ ಸಮುದಾಯದ ಪುರುಷರಲ್ಲಿ ವ್ಯಾಪಕ ಅಸಮಾಧಾನವಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಅಂದಹಾಗೆ ಈ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಂಬಂಧ ಸುಪ್ರೀಂ ಕೋರ್ಟ್ ಇನ್ನಷ್ಟೇ ತೀರ್ಮಾನಿಸಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT