ಸಂಗ್ರಹ ಚಿತ್ರ 
ದೇಶ

ತ್ರಿವಳಿ ತಲಾಕ್ ಕಾನೂನು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ 

ತ್ವರಿತ ತ್ರಿವಳಿ ತಲಾಕ್ ಅಪರಾಧ ಎಂದು ಹೇಳುವ ಕಾನೂನು ಪ್ರಶ್ನಿಸಿ  ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್ಬಿ) ಸೋಮವಾರ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದೆ.

ನವದೆಹಲಿ: ತ್ವರಿತ ತ್ರಿವಳಿ ತಲಾಕ್ ಅಪರಾಧ ಎಂದು ಹೇಳುವ ಕಾನೂನು ಪ್ರಶ್ನಿಸಿ  ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್ಬಿ) ಸೋಮವಾರ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದೆ.

ಮುಸ್ಲಿಂ ಮಹಿಳಾ (ವಿವಾಹದ ಹಕ್ಕುಗಳ ಸಂರಕ್ಷಣೆ) ಕಾಯ್ದೆ, 2019 ತಲಾಕ್-ಇ-ಬಿಡ್ಡತ್ ಅಥವಾ ಯಾವುದೇ ಬಗೆಯ ತಲಾಕ್ ಅನ್ನು ಕಾನೂನುಬಾಹಿರ ಎಂದು ಘೋಷಿಸುತ್ತದೆ. ಒಂದೇ ಘಳಿಗೆಯಲ್ಲಿ ಮೂರು ಬಾರಿ ಆಡುವ ಅಥವಾ ಬರೆಯುವ ಅಥವಾ  ಎಸ್‌ಎಂಎಸ್ ಅಥವಾ ವಾಟ್ಸಾಪ್ ಅಥವಾ ಇನ್ನಾವುದೇ ಎಲೆಕ್ಟ್ರಾನಿಕ್ ಚಾಟ್‌ನಲ್ಲಿ ಕೊಡಲಾಗುವ ತಲಾಕ್ ಕಾನೂನುಬಾಹಿರವಾಗಿದೆ.

ಯಾವುದೇ ಮುಸ್ಲಿಂ ಪತಿಗೆ ತನ್ನ ಹೆಂಡತಿಗೆ ಕಾನೂನುಬಾಹಿರ ತಲಾಕ್ ನೀಡಿದ್ದಾದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆಗೆ ಗುರಿಯಾಗಬೇಕು ಮತ್ತು ದಂಡಕ್ಕೆ ಹೊಣೆಗಾರನಾಗಿರಬೇಕು ಎಂದು ಕಾನೂನು ಹೇಳಿದೆ. ಆದರೆ ಎಐಎಂಪಿಎಲ್ಬಿ ಹಾಗೂ ಕಮಲ್ ಫಾರೂಕಿ ಅವರ ಮನವಿಯು ಈ ಕಾಯಿದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದೆ, ಇದು ಸ್ಪಷ್ಟವಾಗಿ ಅನಿಯಂತ್ರಿತವಾಗಿದೆ ಮತ್ತು ಸಂವಿಧಾನದ 14, 15, 20 ಮತ್ತು 21 ನೇ ವಿಧಿಗಳನ್ನು ಉಲ್ಲಂಘಿಸಿದೆ ಎಂದದ್ದಲ್ಲದೆ ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ಅನಗತ್ಯ ಹಸ್ತಕ್ಷೇಪಕ್ಕೆ ಕಾರಣವಾಗಲಿದೆ ಎಂದು ಅವರು ವಾದಿಸಿದ್ದಾರೆ.

"ಈ ಕಾನೂನು ವ್ಯಕ್ತಿಯ ಜೀವನ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ದಂಡದ ಪರಿಣಾಮಗಳನ್ನು ಹೇಳಿರುವ ಯಾವುದೇ ಕಾಯ್ದೆಯು ತಪ್ಪನ್ನು ವ್ಯಾಖ್ಯಾನಿಸುವುದು ಅಗತ್ಯ. ಇದು ಕಾನೂನಿನ ಪ್ರಾಥಮಿಕ ತತ್ವವಾಗಿದೆ  ಇದರ ಬಗ್ಗೆ ಮುಸ್ಲಿಂ ಸಮುದಾಯದ ಪುರುಷರಲ್ಲಿ ವ್ಯಾಪಕ ಅಸಮಾಧಾನವಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಅಂದಹಾಗೆ ಈ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಂಬಂಧ ಸುಪ್ರೀಂ ಕೋರ್ಟ್ ಇನ್ನಷ್ಟೇ ತೀರ್ಮಾನಿಸಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT