ಬಿಪಿನ್ ರಾವತ್, ಘಫೂರ್ 
ದೇಶ

ಪಿಒಕೆಯಲ್ಲಿ ಉಗ್ರರ ನೆಲೆ ಧ್ವಂಸವನ್ನು ಅಲ್ಲಗಳೆದ ಪಾಕ್ ಸೇನೆ!

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಮೂರು ಉಗ್ರರ ಕ್ಯಾಂಪ್ ಗಳನ್ನು ನಾಶಗೊಳಿಸಲಾಗಿದೆ ಎಂಬ ಭಾರತೀಯ ಸೇನೆಯ ವಾದವನ್ನು ಪಾಕಿಸ್ತಾನ ಸೇನೆ ತಿರಸ್ಕರಿಸಿದೆ

ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಮೂರು ಉಗ್ರರ ಕ್ಯಾಂಪ್ ಗಳನ್ನು ನಾಶಗೊಳಿಸಲಾಗಿದೆ ಎಂಬ ಭಾರತೀಯ ಸೇನೆಯ ವಾದವನ್ನು ಪಾಕಿಸ್ತಾನ ಸೇನೆ ತಿರಸ್ಕರಿಸಿದೆ. ಒಂದು ವೇಳೆ ತಮ್ಮ ವಾದ ನಿಜವಾದಲ್ಲಿ ಯಾವುದೇ ವಿದೇಶಿ ರಾಯಭಾರಿ ಅಥವಾ ಮಾಧ್ಯಮಗಳಿಂದ ಆ ಪ್ರದೇಶದಲ್ಲಿ ಪುರಾವೆಗಳನ್ನು  ಒದಗಿಸುವಂತೆ ಭಾರತವನ್ನು ಆಹ್ವಾನಿಸಿದೆ. 

ಪಾಕಿಸ್ತಾನ ಆಕ್ರಮಿತ ಕಾಶ್ಮೀರ(ಪಿಒಕೆ) ತಂಗ್ಧರ್ ಮತ್ತು ಕೇರಾನ್ ಸೆಕ್ಟರ್ ನಲ್ಲಿ   ಕಾರ್ಯನಿರ್ವಹಿಸುತ್ತಿದ್ದ ಮೂರು ಉಗ್ರರ ಕ್ಯಾಂಪ್ ಗಳನ್ನು ಭಾರತೀಯ ಸೇನೆಯಿಂದ  ಧ್ವಂಸಗೊಳಿಸಲಾಗಿದೆ. ಆರರಿಂದ 10 ಪಾಕಿಸ್ತಾನದ ಸೇನಾ ಸಿಬ್ಬಂದಿಯನ್ನು ಹತ್ಯೆ ಮಾಡಲಾಗಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಭಾನುವಾರ ಹೇಳಿಕೆ ನೀಡಿದ್ದರು.

ರಾವತ್ ಹೇಳಿಕೆಗೆ ತಡರಾತ್ರಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಸೇನೆ ವಕ್ತಾರ ಮೇಜರ್ ಜನರಲ್ ಅಸಿಫ್ ಘಫೂರ್, 3 ಉಗ್ರರ ಶಿಬಿರಗಳನ್ನು ನಾಶಪಡಿಸಿರುವುದಾಗಿ ಭಾರತೀಯ ಸೇನಾ ಮುಖ್ಯಸ್ಥರ ಹೇಳಿಕೆಯು ಹತಾಶೆಯಿಂದ ಕೂಡಿದೆ. ಜವಾಬ್ದಾರಿಯುತ ಹುದ್ದೆಯಲ್ಲಿದ್ದು ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದಿದ್ದಾರೆ.

ಪುಲ್ವಾಮಾ ದಾಳಿಯಾದಾಗಿನಿಂದಲೂ ಈ ಪ್ರದೇಶದಲ್ಲಿ ಶಾಂತಿಗೆ ಭಂಗವಾಗಿದ್ದು, ಉದ್ದೇಶಪೂರ್ವಕವಾಗಿ ಭಾರತೀಯ ಸೇನಾ ಮುಖ್ಯಸ್ಥರು ಸುಳ್ಳಿನ ಹೇಳಿಕೆ ನೀಡುತ್ತಿದ್ದಾರೆ.  ಒಂದು ವೇಳೆ ತಮ್ಮ ವಾದ ಸತ್ಯವಾಗಿದ್ದಲ್ಲಿ ವಿದೇಶಿ ರಾಯಭಾರಿ ಅಥವಾ ಮಾಧ್ಯಮಗಳನ್ನು ಉಗ್ರರ ಕ್ಯಾಂಪ್ ನಾಶಪಡಿಸಿರುವ ಸ್ಥಳಕ್ಕೆ ಕರೆತಂದು ಸಾಕ್ಷ್ಯವನ್ನು ಒದಗಿಸಲಿ ಎಂದು ಪಾಕಿಸ್ತಾನದಲ್ಲಿರುವ ಭಾರತೀಯ ರಾಯಬಾರಿಗಳಿಗೆ ತಿಳಿಸಿದ್ದಾರೆ.

ಇಂತಹ ಸುಳ್ಳಿನ  ಹೇಳಿಕೆಗಳು ಸೇನಾ ವೃತ್ತಿಗೆ ವಿರುದ್ದವಾಗಿವೆ ಎಂದು ಅಸಿಫ್ ಘಫೂರ್ ಟೀಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುದ್ಧ ಕೊನೆಗೊಳಿಸುವ ಗುರಿ: ಒಪ್ಪಂದಕ್ಕೆ ಸನಿಹದಲ್ಲಿ ಇರಾನ್-ಅಮೆರಿಕ!

Cockroach Janta Party ಬೆಳವಣಿಗೆ ಸಾರ್ವಜನಿಕ ಸಂಕಷ್ಟ ತೋರುತ್ತದೆ: ಪ್ರಶಾಂತ್ ಕಿಶೋರ್

ಆನೇಕಲ್‌ನಲ್ಲಿ ನಿರ್ಮಿಸಲಾಗುತ್ತಿರುವ ನೂತನ ಕ್ರಿಕೆಟ್ ಕ್ರೀಡಾಂಗಣದಿಂದ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ: ಸಿಎಂ ಸಿದ್ದರಾಮಯ್ಯ

ನನ್ನನ್ನು ಕ್ರೂರ ಸರ್ವಾಧಿಕಾರಿ ಅನ್ನಿ, ಆದ್ರೆ 'ಗುಗ್ಗು' ಅಂತ ಮಾತ್ರ ಹೇಳಬೇಡಿ: ಡೊನಾಲ್ಡ್ ಟ್ರಂಪ್

ಬಂಗಾಳದಲ್ಲಿ 'ಫುಟ್ಬಾಲ್ ಪಾಲಿಟಿಕ್ಸ್': ಮಮತಾ ವಿನ್ಯಾಸಗೊಳಿಸಿದ್ದ ಪ್ರತಿಮೆ ತೆರವುಗೊಳಿಸಿದ ಬಿಜೆಪಿ ಸರ್ಕಾರ

SCROLL FOR NEXT