ಸಂಗ್ರಹ ಚಿತ್ರ 
ದೇಶ

ಫೇಸ್ಪುಕ್, ವಾಟ್ಸಪ್ ನಿಯಂತ್ರಣ ಅಗತ್ಯ: ಸುಪ್ರೀಂ'ಗೆ ಕೇಂದ್ರ

ಪ್ರಜಾಪ್ರಭುತ್ವ ರಾಜಕೀಯಕ್ಕೆ ಅಂತರ್ಜಾಲ ಊಹಿಸಲೂ ಆಗದಷ್ಟು ಹಾನಿಯುಂಟು ಮಾಡುತ್ತಿದ್ದು, ಫೇಸ್'ಬುಕ್, ವಾಟ್ಸಪ್, ಟ್ವಿಟರ್ ಅಂತಹ ಮಧ್ಯವರ್ತಿಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್'ಗೆ ತಿಳಿಸಿದೆ.

ನವದೆಹಲಿ: ಪ್ರಜಾಪ್ರಭುತ್ವ ರಾಜಕೀಯಕ್ಕೆ ಅಂತರ್ಜಾಲ ಊಹಿಸಲೂ ಆಗದಷ್ಟು ಹಾನಿಯುಂಟು ಮಾಡುತ್ತಿದ್ದು, ಫೇಸ್'ಬುಕ್, ವಾಟ್ಸಪ್, ಟ್ವಿಟರ್ ಅಂತಹ ಮಧ್ಯವರ್ತಿಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್'ಗೆ ತಿಳಿಸಿದೆ. 

ಸಾಮಾಜಿಕ ಮಾಧ್ಯಮಗಳಾದ ಫೇಸ್'ಬುಕ್, ಟ್ವಿಟರ್, ವಾಟ್ಸಪ್ ಮತ್ತು ಯೂಟ್ಯೂಬ್ ಹಾಗೂ ಅನ್ಯ ಮಧ್ಯವರ್ತಿಗಳ ಹೊಣೆಗಾರಿಕೆ ಮರು ಹಂಚಿಕೆ ಮಾಡಲು ಸರ್ಕಾರ ಒತ್ತು ನೀಡಿದೆ. 

ಈ ಸಂಬಂಧ 2011ರಲ್ಲಿ ರೂಪಿಸಿರುೋವ ನಿಯಮಗಳನ್ನು ಬದಲಾವಣೆ ಮಾಡುವ ಅಗತ್ಯವಿದೆ. ಅಂತರ್ಜಾಲದಲ್ಲಿ ಪ್ರಕಟವಾಗುವ ವಿಷಯಗಳಿಗೆ ವೇದಿಕೆ ಒದಗಿಸಿದ ಮಧ್ಯವರ್ತಿಗಳನ್ನೇ ಹೊಣೆಗಾರರನ್ನಾಗಿ  ಮಾಡಲು ಸರ್ಕಾರ ಬಯಸಿದೆ. 

 ಒಂದೆಡೆ ತಂತ್ರಜ್ಞಾನದ ಬಳಕೆ ಆರ್ಥಿಕ ಮತ್ತು ಸಾಮಾಜಿಕ ಏಳಿಗೆಗೆ ಕಾರಣವಾದರೆ, ಮತ್ತೊಂದೆಡೆ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಸುಳ್ಳು ಸುದ್ದಿ ಹಬ್ಬಿಸುವಿಕೆ, ದ್ವೇಷದ ಹೇಳಿಕೆ, ರಾಷ್ಟ್ರ ವಿರೋಧಿ ಚಟುವಟಿಕೆಗಳು ಹೆಚ್ಚಾಗುತ್ತಿವೆ ಎಂಬ ಕಾರಣಕ್ಕೆ ಸರ್ಕಾರ ಸಾಮಾಜಿಕ ಮಾಧ್ಯಮಗಳ ನಿಯಂತ್ರಣಕ್ಕೆ ಮುಂದಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT