ಹಣೆಯ ಬರಹ ರೇಪ್ ಇದ್ದಂತೆ, ತಡೆಯಲಾಗದಿದ್ದರೆ ಎಂಜಾಯ್ ಮಾಡಲು ಟ್ರೈ ಮಾಡಿ: ಕೇರಳ ಸಂಸದನ ಪತ್ನಿ! 
ದೇಶ

ಹಣೆಯ ಬರಹ ರೇಪ್ ಇದ್ದಂತೆ, ತಡೆಯಲಾಗದಿದ್ದರೆ ಎಂಜಾಯ್ ಮಾಡಲು ಟ್ರೈ ಮಾಡಿ: ಕೇರಳ ಸಂಸದನ ಪತ್ನಿ! 

ಕೇರಳದ ಕೊಚ್ಚಿ ನಗರದ ಭಾಗಗಳು ಜಲಾವೃತಗೊಂಡಿದ್ದು, ಸಮಸ್ಯೆ ಪರಿಹರಿಸಲು ವಿಫಲವಾಗಿರುವ ಕೊಚ್ಚಿ ಕಾರ್ಪೊರೇಷನ್ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇರಳ ಕೇರಳದ ಸಂಸದ ಹಿಬಿ ಈಡನ್ ಅವರ ಪತ್ನಿ ಫೇಸ್ ಬುಕ್ ಪೋಸ್ಟ್ ಒಂದರಿಂದ ಭಾರಿ ವಿವಾದಕ್ಕೆ ಗುರಿಯಾಗಿದ್ದಾರೆ. 

ಕೇರಳದ ಕೊಚ್ಚಿ ನಗರದ ಭಾಗಗಳು ಜಲಾವೃತಗೊಂಡಿದ್ದು, ಸಮಸ್ಯೆ ಪರಿಹರಿಸಲು ವಿಫಲವಾಗಿರುವ ಕೊಚ್ಚಿ ಕಾರ್ಪೊರೇಷನ್ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇರಳ ಕೇರಳದ ಸಂಸದ ಹಿಬಿ ಈಡನ್ ಅವರ ಪತ್ನಿ ಫೇಸ್ ಬುಕ್ ಪೋಸ್ಟ್ ಒಂದರಿಂದ ಭಾರಿ ವಿವಾದಕ್ಕೆ ಗುರಿಯಾಗಿದ್ದಾರೆ. 

ಕೇರಳದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಜಲಾವೃತಗೊಂಡಿರುವ ಮನೆಯಿಂದ ತಮ್ಮ ಮಗುವನ್ನು ರಕ್ಷಿಸಿರುವ ವಿಡಿಯೋ ಹಾಗೂ ತಮ್ಮ ಪತಿ ಸಿಜ್ಲರ್ ಊಟ ಸೇವಿಸುತ್ತಿರುವ ಎರಡು ಪ್ರತ್ಯೇಕ ವಿಡಿಯೋಗಳನ್ನು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಹಿಬಿ ಈಡನ್ ಅವರ ಪತ್ನಿ ಆ್ಯನಾ ಲಿಂಡಾ ಈಡನ್ ವಿಧಿ ಎನ್ನುವುದು ಅತ್ಯಾಚಾರವಿದ್ದಂತೆ, ಏನೂ ಮಾಡಲು ಸಾಧ್ಯವಿಲ್ಲದಾಗ ಅದನ್ನು ಎಂಜಾಯ್ ಮಾಡಲು ಟ್ರೈ ಮಾಡಿ ಎಂದು ಹೇಳಿದ್ದಾರೆ. 

ಸಂಸದರ ಪತ್ನಿಯ ಸಂವೇದನಾ ರಹಿತ ಫೇಸ್ ಬುಕ್ ಪೋಸ್ಟ್ ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿದೆ. ಆದರೆ ತಮ್ಮ ಪೋಸ್ಟ್ ಬಗ್ಗೆ ಸ್ಪಷ್ಟನೆ ನೀಡಿರುವ ಆ್ಯನಾ ಲಿಂಡಾ ಈಡನ್ ನನ್ನ ಪೋಸ್ಟ್ ಮೂಲಕ ಯಾರಿಗೂ ನೋವುಂಟುಮಾಡುವ ಉದ್ದೇಶ ಇರಲಿಲ್ಲ. ಮಹಿಳೆಯರ ಕಷ್ಟವನ್ನು ನಿಂದಿಸುವ ಉದ್ದೇಶ ಹೊಂದಿರಲಿಲ್ಲ. ಸಾರ್ವಜನಿಕ ಜೀವನದಲ್ಲಿರುವವರ ಪತ್ನಿಯಾಗಿ ಜನತೆಯ ಸಂಕಷ್ಟವನ್ನು ಅರಿತು ಅವರೊಟ್ಟಿಗೆ ನಿಲ್ಲಲು ಯತ್ನಿಸಿದ್ದೇನೆ, ನನ್ನ ಫೇಸ್ ಬುಕ್ ಪೋಸ್ಟ್ ನಿಂದ ತಪ್ಪು ಸಂದೇಶ ರವಾನೆಯಾಗಿದೆಯಾದ್ದರಿಂದ ಬೇಷರತ್ ಕ್ಷಮೆ ಯಾಚಿಸುತ್ತಿದ್ದೇನೆ ಎಂದು ಹೇಳಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT