ಸಾಂದರ್ಭಿಕ ಚಿತ್ರ 
ದೇಶ

ಜಾರ್ಖಂಡ್: ನಾಲ್ವರು ಕಾಂಗ್ರೆಸ್, ಜೆಎಂಎಂ ಶಾಸಕರು ಬಿಜೆಪಿ ಸೇರಲು ಸಿದ್ಧತೆ

ಜಾರ್ಖಂಡ್ ವಿಧಾನಸಭೆ ಚುನಾವಣೆ ಘೋಷಣೆಗೆ ದಿನಗಣನೇ ಆರಂಭವಾಗಿರುವ ಬೆನ್ನಲ್ಲೇ ರಾಜಕೀಯ ನಾಯಕರ ಪಕ್ಷಾಂತರ ಪರ್ವ ಆರಂಭವಾಗಿದ್ದು, ನಾಲ್ವರು ಕಾಂಗ್ರೆಸ್ ಹಾಗೂ ಜೆಎಂಎಂ ಶಾಸಕರು ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದಾರೆ.

ರಾಂಚಿ: ಜಾರ್ಖಂಡ್ ವಿಧಾನಸಭೆ ಚುನಾವಣೆ ಘೋಷಣೆಗೆ ದಿನಗಣನೇ ಆರಂಭವಾಗಿರುವ ಬೆನ್ನಲ್ಲೇ ರಾಜಕೀಯ ನಾಯಕರ ಪಕ್ಷಾಂತರ ಪರ್ವ ಆರಂಭವಾಗಿದ್ದು, ನಾಲ್ವರು ಕಾಂಗ್ರೆಸ್ ಹಾಗೂ ಜೆಎಂಎಂ ಶಾಸಕರು ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದಾರೆ.

ಬಿಜೆಪಿ ಈಗಾಗಲೇ ವಿಧಾನಸಭೆ ಚುನಾವಣೆ ಪ್ರಚಾರ ಆರಂಭಿಸಿದ್ದು, ಮುಖ್ಯಮಂತ್ರಿ ರಘುಬರ್ ದಾಸ್ ಅವರು ಜನ ಆರ್ಶೀವಾದ ಯಾತ್ರೆ ಕೈಗೊಂಡಿದ್ದಾರೆ.

ಈ ಮಧ್ಯೆ, ಪ್ರತಿಪಕ್ಷಗಳ ಶಾಸಕರನ್ನು ಸೆಳೆಯಲು ಬಿಜೆಪಿ ತಂತ್ರ ರೂಪಿಸಿದ್ದು, ರಾಜ್ಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಶಾಸಕ ಸುಖದೇವ್ ಭಗತ್ ಮತ್ತು ಕಾಂಗ್ರೆಸ್ ಶಾಸಕ ಮನೋಜ್ ಯಾದವ್ ಅವರ ಸಂಪರ್ಕದಲ್ಲಿದೆ. ಅಲ್ಲದೆ ಕುನಲ್ ಸಾರಂಗಿ ಮತ್ತು ದೀಪಕ್ ಬಿರುವ ಸೇರಿದಂತೆ ಜೆಎಂಎಂನ ಮೂರು-ನಾಲ್ಕು ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದು, ಕೇಸರಿ ಪಕ್ಷ ಸೇರಲು ಸಿದ್ಧತೆ ನಡೆಸಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಿದ್ದ ಜೆಎಂಎಂ ಉಚ್ಛಾಟಿತ ಶಾಸಕ ಜೆಪಿ ಪಟೇಲ್ ಅವರು ಸಹ ಬಿಜೆಪಿ ಸೇರುವ ಸಾಧ್ಯತೆ ಇದೆ.

ಬಿಜೆಪಿ ಮೂಲಗಳ ಪ್ರಕಾರ, ಪ್ರತಿಪಕ್ಷಗಳ ಕೆಲವು ನಾಯಕರು ಅಕ್ಟೋಬರ್ 23ರಂದು ಅಧಿಕೃತವಾಗಿ ಕೇಸರಿ ಪಕ್ಷ ಸೇರಲಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ; ಹೊಸ ದೂರು ದಾಖಲು!

News headlines 28-08-2025 | ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DK Shivakumar; ಪ್ರಮೋದಾ ದೇವಿ ಒಡೆಯರ್ ಪ್ರತಿಕ್ರಿಯೆ ಏನು..?; ಬೀದರ್‌: ಭಾರಿ ಮಳೆ, ಹಲವು ಸೇತುವೆ ಬಂದ್; ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ ED ಕಸ್ಟಡಿಗೆ

SCROLL FOR NEXT