ರಾಜನಾಥ್ ಸಿಂಗ್ 
ದೇಶ

ದೇಶದ ಮೇಲೆ ಕೆಂಗಣ್ಣು ಬೀರುವವರಿಗೆ ತಕ್ಕ ಉತ್ತರ ನೀಡಲು ಭಾರತೀಯ ಸೇನೆ ಸಮರ್ಥ: ರಾಜನಾಥ್ ಸಿಂಗ್

ದೇಶದ ಮೇಲೆ ಕೆಂಗಣ್ಣು ಬೀರುವವರಿಗೆ ತಕ್ಕ ಉತ್ತರ ನೀಡಲು ಭಾರತೀಯ ಸೇನಾ ಪಡೆ ಸಮರ್ಥವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಹೇಳಿದ್ದಾರೆ.

ನವದೆಹಲಿ: ದೇಶದ ಮೇಲೆ ಕೆಂಗಣ್ಣು ಬೀರುವವರಿಗೆ ತಕ್ಕ ಉತ್ತರ ನೀಡಲು ಭಾರತೀಯ ಸೇನಾ ಪಡೆ ಸಮರ್ಥವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಹೇಳಿದ್ದಾರೆ.

ಯುದ್ಧ ನಡೆದರೆ, ಅದು ಪರಮಾಣು ಎಂದು ಪಾಕಿಸ್ತಾನ ಸಚಿವ ಶೇಖ್ ರಶೀದ್ ಹೇಳಿಕೆಗೆ ರಾಜನಾಥ್ ಸಿಂಗ್ ಈ ಪ್ರತಿಕ್ರಿಯೆ ನೀಡಿದ್ದಾರೆ.

ಭಾರತ ಯಾವತ್ತೂ ಆಕ್ರಮಣಕಾರಿಯಾಗಿರುವುದಿಲ್ಲ. ಯಾವುದೇ ದೇಶದ ಮೇಲೆ ಮೊದಲು ದಾಳಿ ಮಾಡುವುದಿಲ್ಲ ಎಂದು ರಕ್ಷಣಾ ಸಚಿವರು ಸ್ಪಷ್ಟಪಡಿಸಿದರು.

ಇಲ್ಲಿ ಎರಡು ದಿನಗಳ ನೌಕಾಪಡೆ ಕಮಾಂಡರ್‌ಗಳ ಸಮ್ಮೇಳನವನ್ನು ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜನಾಥ್ ಸಿಂಗ್, ಭಾರತ ಎಂದಿಗೂ ಆಕ್ರಮಣಕಾರಿಯಾಗಿಲ್ಲ ಮತ್ತು ಇದು ಯಾವತ್ತೂ ಯಾವುದೇ ದೇಶದ ಮೇಲೆ ಆಕ್ರಮಣ ಮಾಡಲಿಲ್ಲ ಅಥವಾ ಯಾವುದೇ ಪ್ರದೇಶವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಲಿಲ್ಲ ಎಂಬುದು ಭಾರತದ ಸ್ವಭಾವ. ಆದರೆ ಯಾರಾದರೂ ಭಾರತದ ಮೇಲೆ ಕೆಂಗಣ್ಣು ಬೀರಲು ಪ್ರಯತ್ನಿಸಿದರೆ ಭಾರತೀಯ ಪಡೆಗಳು ಅವರಿಗೆ ತಕ್ಕ ಉತ್ತರವನ್ನು ನೀಡುತ್ತದೆ ಮತ್ತು ಭಾರತೀಯ ಸಶಸ್ತ್ರ ಪಡೆಗಳಿಗೆ ಆ ಸಾಮರ್ಥ್ಯವಿದೆ ಎಂದು ಹೇಳಿದ್ದಾರೆ.

ರಕ್ಷಣಾ ಬಜೆಟ್ ಕಡಿತ ಕುರಿತ ಪ್ರಶ್ನೆಗೆ ಉತ್ತರಿಸಿದ ರಕ್ಷಣಾ ಸಚಿವರು, ಅಗತ್ಯವಿದ್ದರೆ ಬಜೆಟ್ ಖಂಡಿತವಾಗಿಯೂ ಹೆಚ್ಚಾಗುತ್ತದೆ. ನಮ್ಮ ಮೂರು ಪಡೆಗಳು ಆಮದಿನ ಮೇಲಿನ ಅವಲಂಬನೆಯನ್ನು ಕೊನೆಗೊಳಿಸಲು ಪ್ರಯತ್ನಿಸುತ್ತಿವೆ. ದೇಶವು ರಕ್ಷಣಾ ವಸ್ತುಗಳ ರಫ್ತುದಾರ ರಾಷ್ಟ್ರವಾಗಬೇಕು ಎಂದು ನಾವು ಬಯಸುತ್ತೇವೆ ಎಂದರು.

ಗಮನಾರ್ಹ ವಿಷಯವೆಂದರೆ, ಜಲಾಂತರ್ಗಾಮಿ ನೌಕೆಗಳು ಮತ್ತು ಯುದ್ಧ ವಿಮಾನಗಳು ಸೇರಿದಂತೆ ಪ್ರಮುಖ ಉಪಕರಣಗಳ ಖರೀದಿಗಾಗಿ ಹೆಚ್ಚಿನ ಬಜೆಟ್‌ಗಾಗಿ ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ಭಾರತೀಯ ನೌಕಾಪಡೆ ಕಳೆದ ತಿಂಗಳು ಹೇಳಿತ್ತು. ಪ್ರಸ್ತುತ, ರಕ್ಷಣಾ ಬಜೆಟ್‌ನಲ್ಲಿ ಭಾರತೀಯ ನೌಕಾಪಡೆಯ ಪಾಲು ಶೇಕಡಾ 13.66 ರಷ್ಟಿದ್ದು, ಅದನ್ನು ಶೇಕಡಾ 18 ಕ್ಕೆ ಹೆಚ್ಚಿಸಲು ಬಯಸಿದೆ.

ಬಜೆಟ್‌ನಲ್ಲಿ, ಸರ್ಕಾರವು ರಕ್ಷಣಾ ಖರ್ಚು ವೆಚ್ಚಗಳಿಗಾಗಿ 4.31 ಟ್ರಿಲಿಯನ್ ರೂ. (ಮಿಲಿಟರಿ ಪಿಂಚಣಿ 1.12 ಟ್ರಿಲಿಯನ್ ರೂ.ಸೇರಿ) ವ್ಯಯಿಸುತ್ತಿದೆ.

ಸಮುದ್ರ ಮಾರ್ಗದ ಮೂಲಕ 26/11 ದಾಳಿಯಂತಹ ಭಯೋತ್ಪಾದಕ ದಾಳಿ ಪುನರಾವರ್ತನೆಯಾಗುವುದಿಲ್ಲ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ ಸಿಂಗ್, ' ನಮ್ಮ ಸಮುದ್ರ ಮಾರ್ಗಗಳು ಭಾರತೀಯ ನೌಕಾಪಡೆಯ ಕೈಯಲ್ಲಿ ಸುರಕ್ಷಿತವಾಗಿವೆ. 26/11ರ ದಾಳಿಗಳು ಪುನರಾವರ್ತನೆಯಾಗುವುದಿಲ್ಲ ಎಂಬುದು ಭಾರತೀಯ ನೌಕಾಪಡೆಯ ಬದ್ಧತೆಯಾಗಿದೆ ಎಂದು ರಾಜನಾಥ್ ಸಿಂಗ್ ಹೇಳಿದರು.

ಭಾರತೀಯ ನೌಕಾಪಡೆ ದೇಶೀಕರಣದತ್ತ ಸಾಗುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ. ಹಡಗುಗಳ ನಿರ್ಮಾಣದಲ್ಲಿ, ಹೆಚ್ಚಿನ ಶೇಕಡಾವಾರು ದೇಶೀಯ ಉತ್ಪನ್ನಗಳನ್ನು ಬಳಸಲಾಗುತ್ತಿದೆ, ಇದು ಪ್ರಶಂಸನೀಯ ಕೆಲಸವಾಗಿದೆ ಎಂದು ಸಿಂಗ್ ಹೇಳಿದರು.

ಹಿಂದಿನ ವರ್ಷಗಳಿಗೆ ಹೋಲಿಸಿದರೆ ಭಾರತೀಯ ನೌಕಾಪಡೆಯ ಶಕ್ತಿ ಬೆಳೆದಿದೆ ಎಂದು ನಾನು ನಂಬುತ್ತೇನೆ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT