ಕಮಲೇಶ್ ತಿವಾರಿ 
ದೇಶ

ಗುಜರಾತ್ ನಲ್ಲಿ ಹಿಂದುತ್ವವಾದಿ ಕಮಲೇಶ್ ತಿವಾರಿ ಹಂತಕರ ಬಂಧನ

ಹಿಂದೂ ಮಹಾಸಭಾ ಮಾಜಿ ನಾಯಕ ಕಮಲೇಶ್ ತಿವಾರಿ ಹತ್ಯೆ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿರುವುದಾಗಿ ಗುಜರಾತ್ ಉಗ್ರ ನಿಗ್ರಹ ದಳ ಮಂಗಳವಾರ ತಿಳಿಸಿದೆ.

ಅಹಮದಾಬಾದ್: ಹಿಂದೂ ಮಹಾಸಭಾ ಮಾಜಿ ನಾಯಕ ಕಮಲೇಶ್ ತಿವಾರಿ ಹತ್ಯೆ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿರುವುದಾಗಿ ಗುಜರಾತ್ ಉಗ್ರ ನಿಗ್ರಹ ದಳ ಮಂಗಳವಾರ ತಿಳಿಸಿದೆ.

ಗುಜರಾತ್ ಪೊಲೀಸರ ಪ್ರಕಾರ, ರಾಜಸ್ಥಾನದಿಂದ ರಾಜ್ಯ ಪ್ರವೇಶಿಸುತ್ತಿದ್ದ ಕಮಲೇಶ್ ತಿವಾರಿ ಹತ್ಯೆ ಆರೋಪಿಗಳಾದ ಅಶ್ಫಕ್ ಹುಸೈನ್ ಜಾಕೀರ್ ಹುಸ್ಸೇನ್ ಶೇಖ್ (34) ಮತ್ತು ಮೊಯಿನುದ್ದೀನ್ ಖುರ್ಷಿದ್ ಪಠಾಣ್(27)ರನ್ನು ಗುಜರಾತ್ - ರಾಜಸ್ಥಾನ ಗಡಿಪ್ರದೇಶದ ಶಾಮ್ಲಾಜಿ ಬಂಧಿಸಲಾಗಿದೆ.

ಜಾಕೀರ್ ಹುಸ್ಸೇನ್ ಶೇಖ್ ಮೆಡಿಕಲ್ ರೆಪ್ರೆಸೆಂಟೇಟಿವ್ ಆಗಿ ಹಾಗೂ ಪಠಾಣ್ ಫುಡ್ ಡೆಲಿವೆರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ, ಅಕ್ಟೋಬರ್ 18ರಂದು ಉತ್ತರಪ್ರದೇಶದ ಲಖನೌದಲ್ಲಿ ಕಮಲೇಶ್ ತಿವಾರಿ ಅವರನ್ನು ಹತ್ಯೆ ಮಾಡಿರುವುದಾಗಿ ಈ ಇಬ್ಬರು ಆರೋಪಿಗಳು ತಪ್ಪೊಪಿಕೊಂಡಿದ್ದಾರೆ ಎನ್ನಲಾಗಿದೆ.

ಕಮಲೇಶ್ ತಿವಾರಿ ಅವರು ಪ್ರವಾದಿ ಮಹಮ್ಮದ್ ಅವರ ಕುರಿತಾಗಿ ಕೀಳುಮಟ್ಟದ ಹೇಳಿಕೆ ನೀಡಿದ ಕಾರಣಕ್ಕೆ ಅವರನ್ನು ಹತ್ಯೆ ಮಾಡಿರುವುದಾಗಿ ಆರೋಪಿಗಳಿಬ್ಬರು ತಪ್ಪೊಪ್ಪಿಕೊಂಡಿರುವುದಾಗಿ ಪ್ರಾಥಮಿಕ ತನಿಖೆಗೆಯಿಂದ ತಿಳಿದುಬಂದಿದೆ.

ತಿವಾರಿ ಅವರನ್ನು ಹತ್ಯೆ ಮಾಡಿದ ಬಳಿಕ ಈ ಆರೋಪಿಗಳಿಬ್ಬರೂ ನೇಪಾಳಕ್ಕೆ ಪಲಾಯನ ಮಾಡಿದ್ದರು. ಆದರೆ ತಮ್ಮ ಕೈಯಲ್ಲಿದ್ದ ಹಣ ಖಾಲಿಯಾದ ಕಾರಣ ಅವರು ಮತ್ತೆ ಭಾರತಕ್ಕೆ ವಾಪಾಸು ಬಂದಿದ್ದರು. ಹಣಕ್ಕಾಗಿ ಅವರು ತಮ್ಮ ಗೆಳೆಯರು ಮತ್ತು ಸಂಬಂಧಿಕರಲ್ಲಿ ಕೆಲವರನ್ನು ಸಂಪರ್ಕಿಸುವ ಪ್ರಯತ್ನವನ್ನು ಮಾಡಿದ್ದರು. ಆದರೆ ಇವರೆಲ್ಲರ ಮೇಲೆ ಪೊಲೀಸರು ನಿಗಾ ಇರಿಸಿದ್ದರಿಂದ ಆರೋಪಿಗಳ ಜಾಡುಪತ್ತೆ ಸುಲಭವಾಯಿತು. ಇದೀಗ ಗುಜರಾತ್ ಎಟಿಎಸ್ ಪೊಲೀಸರು ಈ ಆರೋಪಿಗಳಿಬ್ಬರನ್ನು ಉತ್ತರ ಪ್ರದೇಶ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT