ಪ್ರಧಾನಿ ಮೋದಿ ಭೇಟಿ ಬಳಿಕ ಸುದ್ದಿಗೋಷ್ಠಿಯಲ್ಲಿ ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ 
ದೇಶ

ಪ್ರಧಾನಿ ಮೋದಿ ಭೇಟಿ ಬಳಿಕ ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಹೇಳಿದ್ದಿಷ್ಟು

ಅಚ್ಚರಿಯ ಬೆಳವಣಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಅಭಿಜಿತ್ ಬ್ಯಾನರ್ಜಿ ಪ್ರಧಾನಿ ಮೋದಿ ತಮ್ಮಲ್ಲಿ ಏನು ಹೇಳಿದರೆಂಬ ಬಗ್ಗೆ ಮಾಹಿತಿ ನೀಡಿದ್ದಾರೆ. 

ನವದೆಹಲಿ: ಅಚ್ಚರಿಯ ಬೆಳವಣಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಅಭಿಜಿತ್ ಬ್ಯಾನರ್ಜಿ ಪ್ರಧಾನಿ ಮೋದಿ ತಮ್ಮಲ್ಲಿ ಏನು ಹೇಳಿದರೆಂಬ ಬಗ್ಗೆ ಮಾಹಿತಿ ನೀಡಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು ಗೌರವದ ಸಂಗತಿಯಾಗಿತ್ತು. ಪ್ರಧಾನಿ ಮೋದಿ ಅವರು ಭಾರತದ ಕುರಿತು ತಮ್ಮ ಚಿಂತನಾ ಶೈಲಿಯ ಬಗ್ಗೆ ಸುದೀರ್ಘವಾಗಿ ಮಾತನಾಡಿದರು. ಆ ಚಿಂತನಾ ಶೈಲಿ  ವಿಶಿಷ್ಟವಾದದ್ದು ಎಂದು ಅಭಿಜಿತ್ ಬ್ಯಾನರ್ಜಿ ಹೇಳಿದ್ದಾರೆ. ಇದೇ ವೇಳೆ ಲಘು ಹಾಸ್ಯವನ್ನೂ ಮಾಡಿದ ಪ್ರಧಾನಿ "ಮಾಧ್ಯಮಗಳು ನನ್ನನ್ನು ಹೇಗೆ ಮೋದಿ ವಿರೋಧಿ ಹೇಳಿಕೆಗಾಗಿ ಬಲೆಗೆ ಕೆಡವಲು ಯತ್ನಿಸುತ್ತಿವೆ ಎಂಬ ಬಗ್ಗೆಯೂ ತಮಾಷೆ ಮಾಡಿದರು" ಎಂದು ಅಭಿಜಿತ್ ಬ್ಯಾನರ್ಜಿ ಹೇಳಿದ್ದಾರೆ. 

ಮೋದಿ ಟಿವಿ ನೋಡುತ್ತಾರೆ, ನಿಮ್ಮನ್ನು ಮೋದಿ ನೋಡುತ್ತಿದ್ದಾರೆ, ನೀವೇನು ಮಾಡಲು ಯತ್ನಿಸುತ್ತಿದ್ದೀರಿ ಎಂಬುದು ಮೋದಿಗೆ ಗೊತ್ತಿದೆ ಎಂದು ಡಾ.ಬ್ಯಾನರ್ಜಿ ಮಾಧ್ಯಮಗಳ ಕಾಲೆಳೆದಿದ್ದಾರೆ. 

ಮೋದಿ ಜೊತೆಗಿನ ಭೇಟಿಯನ್ನು ಅತ್ಯಂತ ವಿಶಿಷ್ಟ ಎಂದು ಹೇಳಿರುವ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿ ಆಡಳಿತ ಹಾಗೂ ಸರ್ಕಾರಿ ಅಧಿಕಾರಿಗಳ ಬಗ್ಗೆ ಮಾತನಾಡಿದರು. ಪ್ರಮುಖವಾಗಿ ಆಡಳಿತದ ಬಗ್ಗೆ ಮಾತನಾಡಿದ ಮೋದಿ, ಸರ್ಕಾರಿ ಅಧಿಕಾರಿಗಳ ಸುಧಾರಣೆಗೆ ತಮ್ಮ ಯತ್ನವನ್ನು ವಿವರಿಸಿದರು ಎಂದು ಬ್ಯಾನರ್ಜಿ ಹೇಳಿದ್ದಾರೆ.

ಅಧಿಕಾರಿಗಳನ್ನು ಹೆಚ್ಚು ಸ್ಪಂದಿಸುವ ಜನರ ದೃಷ್ಟಿಕೋನವನ್ನು ಪರಿಗಣಿಸುವ ಹಾಗೂ ವಾಸ್ತವತೆಗೆ ತೆರೆದುಕೊಳ್ಳುವಂತೆ ಮಾಡುತ್ತಿರುವ ಯತ್ನಗಳನ್ನು ಮೋದಿ ವಿವರಿಸಿದ್ದಾರೆ. ವಾಸ್ತವತೆಯನ್ನು ಅರಿತು ಕೆಲಸ ಮಾಡುವ ಅಧಿಕಾರಿಗಳ ವರ್ಗ ಭಾರತಕ್ಕೆ ಅತ್ಯಂತ ಅವಶ್ಯಕ, ಅದು ಇಲ್ಲವಾದಲ್ಲಿ ನಮಗೆ ಸರ್ಕಾರವೂ ಸ್ಪಂದಿಸದ ವ್ಯವಸ್ಥೆಯಾಗಿಬಿಡುತ್ತದೆ ಎಂದು ಡಾ.ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT