ಸುಪ್ರೀಂಕೋರ್ಟ್ 
ದೇಶ

ಜಮ್ಮು-ಕಾಶ್ಮೀರದಲ್ಲಿ ಇನ್ನೆಷ್ಟು ದಿನ ನಿರ್ಬಂಧ ಮುಂದುವರೆಯಲಿದೆ: ಕೇಂದ್ರಕ್ಕೆ ಸುಪ್ರೀಂಕೋರ್ಟ್

ಜಮ್ಮು ಮತ್ತು ಕಾಶ್ಮೀರದಲ್ಲಿ ಇನ್ನೆಷ್ಟು ದಿನ ನಿರ್ಬಂಧ ಮುಂದುವರೆಯಲಿದೆ. ನಿರ್ಬಂಧ ಮುಂದುವರೆಸಲು ಇನ್ನೆಷ್ಟು ದಿನ ಉದ್ದೇಶ ಹೊಂದಲಾಗಿದೆ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗುರುವಾರ ಪ್ರಶ್ನಿಸಿದೆ. 

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಇನ್ನೆಷ್ಟು ದಿನ ನಿರ್ಬಂಧ ಮುಂದುವರೆಯಲಿದೆ. ನಿರ್ಬಂಧ ಮುಂದುವರೆಸಲು ಇನ್ನೆಷ್ಟು ದಿನ ಉದ್ದೇಶ ಹೊಂದಲಾಗಿದೆ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗುರುವಾರ ಪ್ರಶ್ನಿಸಿದೆ. 

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿಯನ್ನು ಆಗಸ್ಟ್ ತಿಂಗಳಿನಲ್ಲಿ ರದ್ದು ಮಾಡಲಾಗಿತ್ತು. 370 ವಿಧಿ ರದ್ದುಗೊಂಡಾಗಿನಿಂದಲೂ ಜಮ್ಮು ಕಾಶ್ಮೀರದಲ್ಲಿ ನಿರ್ಬಂಧ ಹೇರಲಾಗಿದೆ. ಈ ನಿರ್ಬಂಧ ಇನ್ನೆಷ್ಟು ದಿನ ಇರಲಿದೆ? ನಿರ್ಬಂಧ ಹೇರಿ ಈಗಾಗಲೇ 2 ತಿಂಗಳುಗಳಾಗಿವೆ. ಈ ಬಗ್ಗೆ ಸ್ಪಷ್ಟತೆಗೆ ಬರಬೇಕಿದೆ. ನಿರ್ಬಂಧ ಬಿಟ್ಟು ಬೇರೆ ವಿಧಾನವನ್ನು ಕಂಡುಕೊಳ್ಳಬೇಕಿದೆ ನ್ಯಾಯಮೂರ್ತಿ ಎನ್.ವಿ.ರಮಣ ಅವರಿದ್ದ ತ್ರಿಸದಸ್ಯ ನ್ಯಾಯಪೀಠ ತಿಳಿಸಿದೆ. 

ಜಮ್ಮು ಮತ್ತು ಕಾಶ್ಮೀರದಲ್ಲಿ ನೀವು ನಿರ್ಬಂಧ ಹೇರಬಹುದು. ಆದರೆ, ನಿಮ್ಮ ನಿರ್ಧಾರದ ಬಗ್ಗೆ ನೀವು ಮರುಪರಿಶೀಲಿಸಬೇಕು. ಆಗುತ್ತದೆಯೇ? ಎಂದು ಪ್ರಶ್ನಿಸಿತು. 

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸರ್ಕಾರ, ಜಮ್ಮು ಮತ್ತು ಕಾಶ್ಮೀರದಲ್ಲಿ ಈಗಾಗಲೇ ಶೇ.90ರಷ್ಟು ನಿರ್ಬಂಧವನ್ನು ಸಡಿಲಗೊಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ ಪರಿಸ್ಥಿತಿಯನ್ನು ಪ್ರತಿನಿತಾಯ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದೆ. 

ಬಳಿಕ ಮಾತನಾಡಿರುವ ನ್ಯಾಯಪೀಠ, ಅಂತರ್ಜಾನ ನಿರ್ಬಂಧಗಳ ಬಗ್ಗೆ ಜನರು ಸಂವಹನ ವಿಧಾನವನ್ನು ಹೊಂದಿರಬೇಕೆಂದು ಹೇಳಿದ್ದು, ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT