ಸಂಗ್ರಹ ಚಿತ್ರ 
ದೇಶ

ಹರ್ಯಾಣ ಅತಂತ್ರ: ಜೆಜೆಪಿಗೆ ಸಿಎಂ ಗಾದಿ ಆಫರ್ ಮಾಡಿದ ಕಾಂಗ್ರೆಸ್..!: ದುಷ್ಯಂತ್ ಚೌಟಾಲಾ ಹೇಳಿದ್ದೇನು?

ಇಂದು ಪ್ರಕಟವಾದ ಹರ್ಯಾಣ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಯಾವೊಂದು ರಾಜಕೀಯ ಪಕ್ಷವೂ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದ್ದು, ಸರ್ಕಾರ ರಚನೆಯಲ್ಲಿ ಜೆಜೆಪಿ ಪಾತ್ರ ನಿರ್ಣಾಯಕವಾಗಿದೆ.

ಚಂಡೀಘಡ: ಇಂದು ಪ್ರಕಟವಾದ ಹರ್ಯಾಣ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಯಾವೊಂದು ರಾಜಕೀಯ ಪಕ್ಷವೂ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದ್ದು, ಸರ್ಕಾರ ರಚನೆಯಲ್ಲಿ ಜೆಜೆಪಿ ಪಾತ್ರ ನಿರ್ಣಾಯಕವಾಗಿದೆ.

ಈ ಹಿಂದೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಜೆಜೆಪಿ ಮುಖಂಡ ದುಷ್ಯಂತ್ ಚೌಟಾಲಾ ಸಿಎಂ ಗಾದಿ ನೀಡುವವರಿಗೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದ್ದರು. ಆದರೆ ಈಗ ಬರುತ್ತಿರುವ ಸುದ್ದಿಗಳ ಅನ್ವಯ ಕಾಂಗ್ರೆಸ್ ಪಕ್ಷ ಚೌಟಾಲಾ ಅವರಿಗೆ ಸಿಎಂ ಸ್ಥಾನ ನೀಡುವುದಾಗಿ ಹೇಳಿದೆ ಎಂದು ಹೇಳಲಾಗುತ್ತಿದೆ.

ಈ ಸಂಬಂಧ ಮಾಧ್ಯಮಗಳೊಂದಿಗೆ ಮಾಹಿತಿ ನೀಡಿರುವ ಚೌಟಾಲಾ, 'ನಾನು ಈವರೆಗೆ ಯಾವುದೇ ರಾಜಕೀಯ ಪಕ್ಷದ ಜೊತೆಗೆ ಚರ್ಚೆ ನಡೆಸಿಲ್ಲ. ಬಿಜೆಪಿ ಅಥವಾ ಕಾಂಗ್ರೆಸ್ ಪಕ್ಷದ ನಾಯಕರು ನನ್ನೊಂದಿಗೆ ಮಾತನಾಡಿದ್ದಾರೆ ಎನ್ನುವುದು ಸುಳ್ಳು. ಅಂತಿಮ ಮತ್ತು ಸಂಪೂರ್ಣ ಫಲಿತಾಂಶ ಪ್ರಕಟವಾಗುವವರೆಗೂ ನಾನು ಯಾವುದೇ ಪಕ್ಷಗಳೊಂದಿಗೆ ಈ ಬಗ್ಗೆ ಚರ್ಚೆ ನಡೆಸುವುದಿಲ್ಲ. ಸಂಪೂರ್ಣ ಫಲಿತಾಂಶ ಲಭ್ಯವಾದ ಬಳಿಕ ಆ ಬಗ್ಗೆ ಆಲೋಚನೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇನ್ನು ದೆಹಲಿಯಲ್ಲಿ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯನ್ನು ಚೌಟಾಲಾ ನಾಳೆ ಕರೆದಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಹರ್ಯಾಣದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಕಾಂಗ್ರೆಸ್‌ ಪಕ್ಷವು ಈಗಾಗಲೇ ದುಶ್ಯಂತ್‌ ಜೊತೆಗೆ ಮಾತನಾಡಿದೆ ಕೆಲ ಸುದ್ದಿ ವಾಹಿನಿಗಳು ವರದಿ ಮಾಡಿದ್ದವು. ಈ ವರದಿಗಳನ್ನು ದುಶ್ಯಂತ್ ಸಾರಾಸಗಟಾಗಿ ತಳ್ಳಿ ಹಾಕಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT