ಪಿ ಚಿದಂಬರಂ 
ದೇಶ

ಐಎನ್‌ಎಕ್ಸ್ ಮೀಡಿಯಾ: ಚಿದಂಬರಂ ಇಡಿ ಕಸ್ಟಡಿ ಅಕ್ಟೋಬರ್ 30ರವರೆಗೆ ವಿಸ್ತರಣೆ

ಐಎನ್‌ಎಕ್ಸ್ ಮೀಡಿಯಾ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರಿಗೆ ಅಕ್ಟೋಬರ್ 30ವರೆಗೆ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿಗೆ ನೀಡಿದೆ.

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರಿಗೆ ಅಕ್ಟೋಬರ್ 30ವರೆಗೆ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿಗೆ ನೀಡಿದೆ.

ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಚಿದಂಬರಂ ಅವರನ್ನು ಇಡಿ ಪ್ರಶ್ನಿಸಲು ಅವಕಾಶ ನೀಡಿದ್ದು ಯಾವುದೇ ವೈದ್ಯಕೀಯ ತೊಂದರೆಗಳಿದ್ದಲ್ಲಿ ತಕ್ಷಣ ಅವರನ್ನು ಏಮ್ಸ್ ಗೆ ಕರೆದೊಯ್ಯಬೇಕೆಂದು ಆದೇಶಿಸಿದ್ದಾರೆ.

ಅದಲ್ಲದೆ ಇದುವರೆಗಿನಂತೆಯೇ ಮುಂದೆಯೂ ಸಹ ಚಿದಂಬರಂ ಅವರ ಬಂಧನದಲ್ಲಿನ ಷರತ್ತುಗಳು ಹಾಗೆಯೇ ಮುಂದುವರಿಯಲಿದ್ದು ಅವರಿಗೆ ಮನೆಯಿಂದ ಬೇಯಿಸಿದ ಆಹಾರ ನೀಡುವುದು ಸಹ ಸೇರಿದೆ ಎಂದು ನ್ಯಾಯಾಲಯ ಹೇಳಿದೆ.

ಇದಕ್ಕೆ ಮುನ್ನ ತನಿಖಾ ಸಂಸ್ಥೆ ಹಿರಿಯ ಕಾಂಗ್ರೆಸ್ ನಾಯಕನ ವಿಚಾರಣೆಗಾಗಿ ಏಳು ದಿನಗಳ ಕಾಲ ಕಸ್ಟಡಿಗೆ ನೀಡಬೇಕೆಂದು ಕೋರ್ಟ್ ಗೆ ಮನವಿ ಸಲ್ಲಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT