ಸೈಯದ್ ಅಬ್ದುಲ್ ರೆಹ್ಮಾನ್ (ಎಸ್ಎಆರ್) ಗಿಲಾನಿ(ಸಂಗ್ರಹ ಚಿತ್ರ) 
ದೇಶ

ಸಂಸತ್ತು ಮೇಲೆ ದಾಳಿ ಪ್ರಕರಣದಲ್ಲಿ ಬಂಧಿತನಾಗಿದ್ದ ದೆಹಲಿ ವಿ.ವಿ ಮಾಜಿ ಪ್ರೊಫೆಸರ್ ಗಿಲಾನಿ ನಿಧನ 

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ, ಸಂಸತ್ತು ಮೇಲೆ ದಾಳಿ ಕೇಸಿನಲ್ಲಿ ಬಂಧಿತನಾಗಿದ್ದ  ಸೈಯದ್ ಅಬ್ದುಲ್ ರೆಹ್ಮಾನ್ (ಎಸ್ಎಆರ್) ಗಿಲಾನಿ ಹೃದಯಾಘಾತಕ್ಕೀಡಾಗಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ. 

 ನವದೆಹಲಿ; ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ, ಸಂಸತ್ತು ಮೇಲೆ ದಾಳಿ ಕೇಸಿನಲ್ಲಿ ಬಂಧಿತನಾಗಿದ್ದ  ಸೈಯದ್ ಅಬ್ದುಲ್ ರೆಹ್ಮಾನ್ (ಎಸ್ಎಆರ್) ಗಿಲಾನಿ ಹೃದಯಾಘಾತಕ್ಕೀಡಾಗಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ.
ದೆಹಲಿಯ ಫೋರ್ಟಿಸ್ ಆಸ್ಪತ್ರೆಯಲ್ಲಿ ನಿನ್ನೆ ಸಂಜೆ ಗಿಲಾನಿ ನಿಧನ ಹೊಂದಿದ್ದಾನೆ. ಉಸಿರಾಟ ಮತ್ತು ಇತರ ಸಮಸ್ಯೆಗಳಿಂದ ಆತ ಆಸ್ಪತ್ರೆಗೆ ದಾಖಲಾಗಿದ್ದ.


2001ರಲ್ಲಿ ಸಂಸತ್ತು ಮೇಲಿನ ದಾಳಿ ಕೇಸಿಗೆ ಸಂಬಂಧಪಟ್ಟಂತೆ ದೆಹಲಿ ಪೊಲೀಸರು ಗಿಲಾನಿಯನ್ನು ಬಂಧಿಸಿದ್ದರು. ನಂತರ ಸರಿಯಾದ ಸಾಕ್ಷಿ ಕೊರತೆ ಹಿನ್ನಲೆಯಲ್ಲಿ 2003ರಲ್ಲಿ ದೆಹಲಿ ಹೈಕೋರ್ಟ್ ಖುಲಾಸೆಗೊಳಿಸಿತ್ತು. 2005ರಲ್ಲಿ ಸುಪ್ರೀಂ ಕೋರ್ಟ್ ಕೂಡ ಸೂಕ್ತ ಸಾಕ್ಷಿಗಳ ಕೊರತೆಯಿದೆ ಎಂದು ಹೇಳಿತು ಆದರೆ ದಾಳಿಯ ಬಗ್ಗೆ ಸಣ್ಣ ಸಂಶಯವನ್ನು ಗಿಲಾನಿ ಮೇಲೆ ಇಟ್ಟುಕೊಂಡಿತ್ತು.


ಗಿಲಾನಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರಿದ್ದಾರೆ. ದೆಹಲಿ ವಿಶ್ವವಿದ್ಯಾಲಯದ ಜಾಕಿರ್ ಹುಸೇನ್ ಕಾಲೇಜಿನಲ್ಲಿ ಅರೆಬಿಕ್ ಭಾಷೆಯ ಪ್ರಾಧ್ಯಾಪಕನಾಗಿದ್ದ ಗಿಲಾನಿ. 2016ರಲ್ಲಿ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದೇಶ ವಿರೋಧಿ ಘೋಷಣೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿಲಾನಿ ವಿರುದ್ಧ ದೇಶ ವಿರೋಧಿ ಕೇಸು ದಾಖಲಾಗಿ ಬಂಧಿತನಾಗಿದ್ದ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT