ಕರ್ತಾರ್ ಪುರ್ 
ದೇಶ

ಕರ್ತಾರ್ ಪುರ್ ಯಾತ್ರಿಕರಿಗೆ ನಿರ್ಬಂಧ, 7 ಕೆಜಿ ಲಗೇಜ್, 11 ಸಾವಿರ ರೂ. ನಗದು ಕೊಂಡೊಯ್ಯಲು ಅನುಮತಿ

ಪಾಕಿಸ್ತಾನದ ಕರ್ತಾರ್ ಪುರ್ ನಲ್ಲಿರುವ ಸಿಖ್ಖರ ಪವಿತ್ರ ಧಾರ್ಮಿಕ ಕೇಂದ್ರ ಗುರುದ್ವಾರಕ್ಕೆ ಭೇಟಿ ನೀಡುವ ಭಾರತೀಯ ಪ್ರವಾಸಿಗರಿಗಾಗಿ ಕೇಂದ್ರ ಗೃಹ ಸಚಿವಾಲಯ ಕೆಲವು ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕೆಂದು ಸುತ್ತೋಲೆ ಹೊರಡಿಸಿದೆ.

ನವದೆಹಲಿ: ಪಾಕಿಸ್ತಾನದ ಕರ್ತಾರ್ ಪುರ್ ನಲ್ಲಿರುವ ಸಿಖ್ಖರ ಪವಿತ್ರ ಧಾರ್ಮಿಕ ಕೇಂದ್ರ ಗುರುದ್ವಾರಕ್ಕೆ ಭೇಟಿ ನೀಡುವ ಭಾರತೀಯ ಪ್ರವಾಸಿಗರಿಗಾಗಿ ಕೇಂದ್ರ ಗೃಹ ಸಚಿವಾಲಯ ಕೆಲವು ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕೆಂದು ಸುತ್ತೋಲೆ ಹೊರಡಿಸಿದೆ.

ಕರ್ತಾರ್ ಪುರದ ಗುರುದ್ವಾರ ದರ್ಬಾರ್ ಸಾಹಿಬ್ ಗೆ ಭೇಟಿ ನೀಡುವ ಸಿಖ್ ಯಾತ್ರಿಕರು ಕೇವಲ 7 ಕೆಜಿ ಲಗೇಜ್ ಹಾಗೂ ಗರಿಷ್ಠ 11 ಸಾವಿರ ರೂಪಾಯಿ ನಗದು ಮಾತ್ರ ಕೊಂಡೊಯ್ಯಲು ಅನುಮತಿ ನೀಡಲಾಗಿದೆ. ಅಲ್ಲದೆ ಬೇರೆ ಯಾವುದೇ ಯಾತ್ರಾ ಸ್ಥಳಕ್ಕೆ ಭೇಟಿ ನೀಡುವಂತಿಲ್ಲ ಎಂಬ ನಿರ್ಬಂಧ ವಿಧಿಸಲಾಗಿದೆ.

ಯಾತ್ರಿಕರು ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬುದಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ನಿಯಮಾವಳಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 13 ವರ್ಷದೊಳಗಿನ ಮಕ್ಕಳು ಮತ್ತು 75 ವರ್ಷ ಮೇಲ್ಪಟ್ಟ ವೃದ್ಧರು ಒಂಟಿಯಾಗಿ ತೆರಳುವಂತಿಲ್ಲ. ಅವರು ತಂಡದಲ್ಲಿ ಪ್ರಯಾಣಿಸಬೇಕು ಮತ್ತು ಬಟ್ಟೆ ಬ್ಯಾಗ್ ಸೇರಿದಂತೆ ಎಲ್ಲವೂ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಬೇಕು ಎಂದು ಸೂಚಿಸಲಾಗಿದೆ.

ಯಾತ್ರಿಗಳು ಕರ್ತಾರ್ ಪುರಕ್ಕೆ ಬೆಳಗ್ಗೆ ಪ್ರಯಾಣ ಬೆಳಸಬೇಕು ಮತ್ತು ಅಂದೇ ಸಂಜೆ ವಾಪಸ್ ಆಗಬೇಕು. ಯಾತ್ರೆಗೆ ತೆರಳಲು ಬಯಸುವವರು ಆನ್ ಲೈನ್ ಮೂಲಕ (prakashpurb550.mha.gov.in)ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ನಂತರ ಯಾತ್ರೆಗೆ ನಾಲ್ಕು ದಿನಗಳ ಮುನ್ನ ಅನುಮತಿ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT