ದೀಪೇಂದರ್ ಸಿಂಗ್ ಹೂಡಾ 
ದೇಶ

ಬಿಜೆಪಿ ಜೊತೆ ಕೈಜೋಡಿಸಿದರೆ ಸ್ವತಂತ್ರ ಶಾಸಕರಿಗೆ ಜನರು ಬೂಟ್ ನಲ್ಲಿ ಹೊಡೆಯುತ್ತಾರೆ: ಹೂಡಾ

ಹರಿಯಾಣದಲ್ಲಿ ಸ್ವತಂತ್ರ ಅಭ್ಯರ್ಥಿಗಳು ಬಿಜೆಪಿ ಜೊತೆಗೆ ಕೈಜೋಡಿಸಿದ್ದೇ ಆದರೆ, ಸಮಯ ಬಂದಾಗ ಜನರು ಬೂಟ್ ನಲ್ಲಿ ಹೊಡೆಯುತ್ತಾರೆಂದು ಕಾಂಗ್ರೆಸ್ ನಾಯಕ ದೀಪೇಂದರ್ ಸಿಂಗ್ ಹೂಡಾ ಶುಕ್ರವಾರ ಹೇಳಿದ್ದಾರೆ. 

ಚಂಡೀಗಢ: ಹರಿಯಾಣದಲ್ಲಿ ಸ್ವತಂತ್ರ ಅಭ್ಯರ್ಥಿಗಳು ಬಿಜೆಪಿ ಜೊತೆಗೆ ಕೈಜೋಡಿಸಿದ್ದೇ ಆದರೆ, ಸಮಯ ಬಂದಾಗ ಜನರು ಬೂಟ್ ನಲ್ಲಿ ಹೊಡೆಯುತ್ತಾರೆಂದು ಕಾಂಗ್ರೆಸ್ ನಾಯಕ ದೀಪೇಂದರ್ ಸಿಂಗ್ ಹೂಡಾ ಶುಕ್ರವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಖಟ್ಟರ್ ಸರ್ಕಾರದ ಭಾಗವಾಗಲು ಹೋಗುವ ಸ್ವತಂತ್ರ ಶಾಸಕರು ತಮ್ಮದೇ ರಾಜಕೀಯ ಸಮಾಧಿಯನ್ನು ತೋಡಿಕೊಳ್ಳುತ್ತಾರೆ. ಜನರ ವಿಶ್ವಾಸವನ್ನು ಮಾರಿದಂತಾಗುತ್ತದೆ. ಇಂತಹ ಕಾರ್ಯಕ್ಕೆ ಕೈಹಾಕುವ ನಾಯಕರನ್ನು ಜನರು ಎಂದಿಗೂ ಮರೆಯುವುದಿಲ್ಲ. ಸಮಯ ಬಂದಾಗ ಬೂಟ್ ನಲ್ಲಿ ಹೊಡೆಯುತ್ತಾರೆಂದು ಹೇಳಿದ್ದಾರೆ. 

ಹರಿಯಾಣ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ 40 ಸ್ಥಾನವನ್ನು ಗೆದ್ದಿದ್ದರೆ, ಕಾಂಗ್ರೆಸ್ 31 ಸ್ಥಾನಗಳನ್ನು ಗೆದ್ದಿದೆ. ಇನ್ನು ದುಶ್ಯಂತ್ ಚೌಟಾಲಾ ಅವರ ಜೆಜೆಪಿ ಪಕ್ಷ 10 ಸ್ಥಾನಗಳನ್ನು ಗೆದ್ದುಕೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT