ದೀಪೇಂದರ್ ಸಿಂಗ್ ಹೂಡಾ 
ದೇಶ

ಬಿಜೆಪಿ ಜೊತೆ ಕೈಜೋಡಿಸಿದರೆ ಸ್ವತಂತ್ರ ಶಾಸಕರಿಗೆ ಜನರು ಬೂಟ್ ನಲ್ಲಿ ಹೊಡೆಯುತ್ತಾರೆ: ಹೂಡಾ

ಹರಿಯಾಣದಲ್ಲಿ ಸ್ವತಂತ್ರ ಅಭ್ಯರ್ಥಿಗಳು ಬಿಜೆಪಿ ಜೊತೆಗೆ ಕೈಜೋಡಿಸಿದ್ದೇ ಆದರೆ, ಸಮಯ ಬಂದಾಗ ಜನರು ಬೂಟ್ ನಲ್ಲಿ ಹೊಡೆಯುತ್ತಾರೆಂದು ಕಾಂಗ್ರೆಸ್ ನಾಯಕ ದೀಪೇಂದರ್ ಸಿಂಗ್ ಹೂಡಾ ಶುಕ್ರವಾರ ಹೇಳಿದ್ದಾರೆ. 

ಚಂಡೀಗಢ: ಹರಿಯಾಣದಲ್ಲಿ ಸ್ವತಂತ್ರ ಅಭ್ಯರ್ಥಿಗಳು ಬಿಜೆಪಿ ಜೊತೆಗೆ ಕೈಜೋಡಿಸಿದ್ದೇ ಆದರೆ, ಸಮಯ ಬಂದಾಗ ಜನರು ಬೂಟ್ ನಲ್ಲಿ ಹೊಡೆಯುತ್ತಾರೆಂದು ಕಾಂಗ್ರೆಸ್ ನಾಯಕ ದೀಪೇಂದರ್ ಸಿಂಗ್ ಹೂಡಾ ಶುಕ್ರವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಖಟ್ಟರ್ ಸರ್ಕಾರದ ಭಾಗವಾಗಲು ಹೋಗುವ ಸ್ವತಂತ್ರ ಶಾಸಕರು ತಮ್ಮದೇ ರಾಜಕೀಯ ಸಮಾಧಿಯನ್ನು ತೋಡಿಕೊಳ್ಳುತ್ತಾರೆ. ಜನರ ವಿಶ್ವಾಸವನ್ನು ಮಾರಿದಂತಾಗುತ್ತದೆ. ಇಂತಹ ಕಾರ್ಯಕ್ಕೆ ಕೈಹಾಕುವ ನಾಯಕರನ್ನು ಜನರು ಎಂದಿಗೂ ಮರೆಯುವುದಿಲ್ಲ. ಸಮಯ ಬಂದಾಗ ಬೂಟ್ ನಲ್ಲಿ ಹೊಡೆಯುತ್ತಾರೆಂದು ಹೇಳಿದ್ದಾರೆ. 

ಹರಿಯಾಣ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ 40 ಸ್ಥಾನವನ್ನು ಗೆದ್ದಿದ್ದರೆ, ಕಾಂಗ್ರೆಸ್ 31 ಸ್ಥಾನಗಳನ್ನು ಗೆದ್ದಿದೆ. ಇನ್ನು ದುಶ್ಯಂತ್ ಚೌಟಾಲಾ ಅವರ ಜೆಜೆಪಿ ಪಕ್ಷ 10 ಸ್ಥಾನಗಳನ್ನು ಗೆದ್ದುಕೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT