ಕಿರಣ್ ತಿವಾರಿ 
ದೇಶ

ಹಿಂದು ಸಮಾಜ ಪಕ್ಷದ ನೂತನ ಅಧ್ಯಕ್ಷೆಯಾಗಿ ತಿವಾರಿ ಪತ್ನಿ ಆಯ್ಕೆ

ಹಿಂದು ಸಮಾಜ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಹತ್ಯೆಯಾದ ಕಮಲೇಶ್ ತಿವಾರಿಯವರ ಪತ್ನಿ ಕಿರಣ್ ತಿವಾರಿಯವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. 

ಲಖನೌ: ಹಿಂದು ಸಮಾಜ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಹತ್ಯೆಯಾದ ಕಮಲೇಶ್ ತಿವಾರಿಯವರ ಪತ್ನಿ ಕಿರಣ್ ತಿವಾರಿಯವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. 

ಅ.18ರಂದು ಕಮಲೇಶ್ ತಿವಾರಿಯವರ ಮೇಲೆ ದುಷ್ಕರ್ಮಿಗಳ ಗುಂಪೊಂದು ಗುಂಡಿನ ದಾಳಿ ನಡೆಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ತಿವಾರಿಯವರನ್ನು ಆಸ್ಪತ್ರೆಗೆ ದಾಖಲಿಸಿದೆಯಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಘಟನೆ ಲಖನೌನ್ನು ಬೆಚ್ಚಿಬೀಳಿಸಿದೆ. 

ಹಿಂದು ಸಮಾಜ ಪಕ್ಷದ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಕಿರಣ್ ತಿವಾರಿಯವರು ಶೀಘ್ರದಲ್ಲಿಯೇ ಸುದ್ದಿಗೋಷ್ಟಿ ನಡೆಸಿ ಮಾತನಾಡಲಿದ್ದಾರೆಂದು ಮೂಲಗಳು ತಿಳಿಸಿವೆ. ಸುದ್ದಿಗೋಷ್ಟಿಯಲ್ಲಿ ಪತಿಯ ಹತ್ಯೆ ಪ್ರಕರಣ ಕುರಿತಂತೆ ಕಿರಣ್ ಅವರು ಏನು ಮಾತನಾಡುತ್ತಾರೆಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. 

ಇನ್ನು ಕಮಲೇಶ್ ತಿವಾರಿಯವರ ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು, ಈ ವರೆಗೂ ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT