50:50 ಸೂತ್ರ ಜಾರಿ ಬಗ್ಗೆ ಲಿಖಿತ ಭರವಸೆ ಕೊಡಿ: ಬಿಜೆಪಿಗೆ ಶಿವಸೇನೆ! 
ದೇಶ

ಅಧಿಕಾರ ಹಂಚಿಕೆಗಾಗಿ 50:50 ಸೂತ್ರ: ಬಿಜೆಪಿಯಿಂದ ಲಿಖಿತ ಭರವಸೆಗೆ ಶಿವಸೇನೆ ಪಟ್ಟು! 

ಶಿವಸೇನೆ ಮುಖ್ಯಮಂತ್ರಿಯ ಸ್ಥಾನಕ್ಕಾಗಿ ಪಟ್ಟನ್ನು ಮುಂದುವರೆಸಿದೆ. ಸತತ ಒಂದು ಗಂಟೆಗಳ ಸಭೆಯ ನಂತರ ಶಿವಸೇನೆ ಶಾಸಕರು ತಮ್ಮ ಪಕ್ಷಕ್ಕೆ ಸಿಎಂ ಸ್ಥಾನ ಸಿಗಬೇಕೆಂದು ಒತ್ತಾಯಿಸಿದ್ದು ಸರ್ಕಾರ ರಚನೆಗೆ ಸಂಬಂಧಿಸಿದ ಮಾತುಕತೆಯ ಸಂಪೂರ್ಣ ಅಧಿಕಾರವನ್ನು ಪಕ್ಷದ ಅಧ್ಯಕ್ಷ ಉದ್ಧವ್ ಠಾಕ್ರೆಗೆ ವಹಿಸಿದ್ದಾರೆ. 

ಮುಂಬೈ: ಶಿವಸೇನೆ ಮುಖ್ಯಮಂತ್ರಿಯ ಸ್ಥಾನಕ್ಕಾಗಿ ಪಟ್ಟನ್ನು ಮುಂದುವರೆಸಿದೆ. ಸತತ ಒಂದು ಗಂಟೆಗಳ ಸಭೆಯ ನಂತರ ಶಿವಸೇನೆ ಶಾಸಕರು ತಮ್ಮ ಪಕ್ಷಕ್ಕೆ ಸಿಎಂ ಸ್ಥಾನ ಸಿಗಬೇಕೆಂದು ಒತ್ತಾಯಿಸಿದ್ದು ಸರ್ಕಾರ ರಚನೆಗೆ ಸಂಬಂಧಿಸಿದ ಮಾತುಕತೆಯ ಸಂಪೂರ್ಣ ಅಧಿಕಾರವನ್ನು ಪಕ್ಷದ ಅಧ್ಯಕ್ಷ ಉದ್ಧವ್ ಠಾಕ್ರೆಗೆ ವಹಿಸಿದ್ದಾರೆ. 

ಅಧಿಕಾರ ಸಮನಾಗಿ ಹಂಚಿಕೆಯಾಗಬೇಕು, 50:50 ಸೂತ್ರದ ಅಡಿಯಲ್ಲಿ ಸಿಎಂ ಸ್ಥಾನವನ್ನು ಎರಡುವರೆ ವರ್ಷ ಶಿವಸೇನೆಗೆ ಬಿಟ್ಟುಕೊಡಬೇಕೆಂಬುದು ಶಿವಸೇನೆಯ ಬೇಡಿಕೆಯಾಗಿದ್ದು, ಈ ಸೂತ್ರವನ್ನು ಜಾರಿಗೊಳಿಸುವ ಬಗ್ಗೆ ಬಿಜೆಪಿಯಿಂದ ಲಿಖಿತ ಭರವಸೆ ಪಡೆದುಕೊಳ್ಳಬೇಕೆಂದು ಶಾಸಕರ ಸಭೆಯಲ್ಲಿ ತೀರ್ಮಾನಿಸಲಾಗಿದೆ. 

ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್ ಶಾ ಹಾಗೂ ದೇವೇಂದ್ರ ಫಡ್ನವೀಸ್ ಅವರೊಂದಿಗೆ 50:50 ಸೂತ್ರದ ಬಗ್ಗೆ ಈ ಹಿಂದೆ ಚರ್ಚಿಸಲಾಗಿತ್ತು. 2.5 ವರ್ಷ ಸಿಎಂ ಸ್ಥಾನ ನಮಗೆ ಬಿಟ್ಟುಕೊಡಬೇಕೆಂಬುದು ನಮ್ಮ ಯೋಜನೆಯ ಭಾಗವಾಗಿತ್ತು. ಅಧಿಕಾರದ ಸಮ ಹಂಚಿಕೆ ಹಾಗೂ ಸಿಎಂ ಸ್ಥಾನ ಎರಡೂ ನಮಗೆ ಮುಖ್ಯವಾಗಿದೆ. ಉಪಮುಖ್ಯಮಂತ್ರಿಯ ಸ್ಥಾನ ನಂತರದ ವಿಷಯ, ಬಿಜೆಪಿ 50:50 ಸೂತ್ರದ ಬಗ್ಗೆ ಲಿಖಿತ ಭರವಸೆ ನೀಡಿದರೆ ನಾವು ನಿರ್ಧಾರ ಕೈಗೊಳ್ಳುತ್ತೇನೆ ಎಂದು ಶಿವಸೇನೆ ನಾಯಕ ಪ್ರತಾಪ್ ಸರ್ನಾಯ್ಕ್ ಹೇಳಿದ್ದಾರೆ. 

ಸರ್ಕಾರ ರಚನೆಗಾಗಿ ಮಾತುಕತೆ ನಡೆಸುವ ಸಂಪೂರ್ಣ ಜವಾಬ್ದಾರಿಯನ್ನು ಉದ್ಧವ್ ಠಾಕ್ರೆಗೆ ನೀಡಲಾಗಿದೆ, ಠಾಕ್ರೆ ಯಾವುದನ್ನು ನಿರ್ಧರಿಸುತ್ತಾರೆಯೋ ಅದಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ಪ್ರತಾಪ್ ಸರ್ನಾಯ್ಕ್ ಹೇಳಿದ್ದಾರೆ. 

ಶಿವಸೇನೆಯಿಂದ ಯಾರು ಮುಖ್ಯಮಂತ್ರಿ ಅಭ್ಯರ್ಥಿಯಾಗುತ್ತಾರೆ ಎಂಬುದು ಇನ್ನೂ ಅಂತಿಮವಾಗಿಲ್ಲ. ಹೊಸದಾಗಿ ಮುಂದಿನ ಸರ್ಕಾರದಲ್ಲಿ ಆದಿತ್ಯ ಠಾಕ್ರೆ ಸಿಎಂ ಆಗಬೇಕೆಂಬುದು ಆಯ್ಕೆಯಾಗಿರುವ ಶಿವಸೇನೆ ಶಾಸಕರ ಬೇಡಿಕೆಯಾಗಿದೆ. ಒಂದು ವೇಳೆ ಬಿಜೆಪಿ ನಮ್ಮ ಬೇಡಿಕೆಗಳಿಗೆ ಒಪ್ಪದೇ ಇದ್ದಲ್ಲಿ ಬೇರೆ ಆಯ್ಕೆಗಳಿಗೆ ನಾವು ಮುಕ್ತರಾಗಿದ್ದೇವೆ ಎಂದು ಸರ್ನಾಯ್ಕ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT