50:50 ಸೂತ್ರ ಜಾರಿ ಬಗ್ಗೆ ಲಿಖಿತ ಭರವಸೆ ಕೊಡಿ: ಬಿಜೆಪಿಗೆ ಶಿವಸೇನೆ! 
ದೇಶ

ಅಧಿಕಾರ ಹಂಚಿಕೆಗಾಗಿ 50:50 ಸೂತ್ರ: ಬಿಜೆಪಿಯಿಂದ ಲಿಖಿತ ಭರವಸೆಗೆ ಶಿವಸೇನೆ ಪಟ್ಟು! 

ಶಿವಸೇನೆ ಮುಖ್ಯಮಂತ್ರಿಯ ಸ್ಥಾನಕ್ಕಾಗಿ ಪಟ್ಟನ್ನು ಮುಂದುವರೆಸಿದೆ. ಸತತ ಒಂದು ಗಂಟೆಗಳ ಸಭೆಯ ನಂತರ ಶಿವಸೇನೆ ಶಾಸಕರು ತಮ್ಮ ಪಕ್ಷಕ್ಕೆ ಸಿಎಂ ಸ್ಥಾನ ಸಿಗಬೇಕೆಂದು ಒತ್ತಾಯಿಸಿದ್ದು ಸರ್ಕಾರ ರಚನೆಗೆ ಸಂಬಂಧಿಸಿದ ಮಾತುಕತೆಯ ಸಂಪೂರ್ಣ ಅಧಿಕಾರವನ್ನು ಪಕ್ಷದ ಅಧ್ಯಕ್ಷ ಉದ್ಧವ್ ಠಾಕ್ರೆಗೆ ವಹಿಸಿದ್ದಾರೆ. 

ಮುಂಬೈ: ಶಿವಸೇನೆ ಮುಖ್ಯಮಂತ್ರಿಯ ಸ್ಥಾನಕ್ಕಾಗಿ ಪಟ್ಟನ್ನು ಮುಂದುವರೆಸಿದೆ. ಸತತ ಒಂದು ಗಂಟೆಗಳ ಸಭೆಯ ನಂತರ ಶಿವಸೇನೆ ಶಾಸಕರು ತಮ್ಮ ಪಕ್ಷಕ್ಕೆ ಸಿಎಂ ಸ್ಥಾನ ಸಿಗಬೇಕೆಂದು ಒತ್ತಾಯಿಸಿದ್ದು ಸರ್ಕಾರ ರಚನೆಗೆ ಸಂಬಂಧಿಸಿದ ಮಾತುಕತೆಯ ಸಂಪೂರ್ಣ ಅಧಿಕಾರವನ್ನು ಪಕ್ಷದ ಅಧ್ಯಕ್ಷ ಉದ್ಧವ್ ಠಾಕ್ರೆಗೆ ವಹಿಸಿದ್ದಾರೆ. 

ಅಧಿಕಾರ ಸಮನಾಗಿ ಹಂಚಿಕೆಯಾಗಬೇಕು, 50:50 ಸೂತ್ರದ ಅಡಿಯಲ್ಲಿ ಸಿಎಂ ಸ್ಥಾನವನ್ನು ಎರಡುವರೆ ವರ್ಷ ಶಿವಸೇನೆಗೆ ಬಿಟ್ಟುಕೊಡಬೇಕೆಂಬುದು ಶಿವಸೇನೆಯ ಬೇಡಿಕೆಯಾಗಿದ್ದು, ಈ ಸೂತ್ರವನ್ನು ಜಾರಿಗೊಳಿಸುವ ಬಗ್ಗೆ ಬಿಜೆಪಿಯಿಂದ ಲಿಖಿತ ಭರವಸೆ ಪಡೆದುಕೊಳ್ಳಬೇಕೆಂದು ಶಾಸಕರ ಸಭೆಯಲ್ಲಿ ತೀರ್ಮಾನಿಸಲಾಗಿದೆ. 

ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್ ಶಾ ಹಾಗೂ ದೇವೇಂದ್ರ ಫಡ್ನವೀಸ್ ಅವರೊಂದಿಗೆ 50:50 ಸೂತ್ರದ ಬಗ್ಗೆ ಈ ಹಿಂದೆ ಚರ್ಚಿಸಲಾಗಿತ್ತು. 2.5 ವರ್ಷ ಸಿಎಂ ಸ್ಥಾನ ನಮಗೆ ಬಿಟ್ಟುಕೊಡಬೇಕೆಂಬುದು ನಮ್ಮ ಯೋಜನೆಯ ಭಾಗವಾಗಿತ್ತು. ಅಧಿಕಾರದ ಸಮ ಹಂಚಿಕೆ ಹಾಗೂ ಸಿಎಂ ಸ್ಥಾನ ಎರಡೂ ನಮಗೆ ಮುಖ್ಯವಾಗಿದೆ. ಉಪಮುಖ್ಯಮಂತ್ರಿಯ ಸ್ಥಾನ ನಂತರದ ವಿಷಯ, ಬಿಜೆಪಿ 50:50 ಸೂತ್ರದ ಬಗ್ಗೆ ಲಿಖಿತ ಭರವಸೆ ನೀಡಿದರೆ ನಾವು ನಿರ್ಧಾರ ಕೈಗೊಳ್ಳುತ್ತೇನೆ ಎಂದು ಶಿವಸೇನೆ ನಾಯಕ ಪ್ರತಾಪ್ ಸರ್ನಾಯ್ಕ್ ಹೇಳಿದ್ದಾರೆ. 

ಸರ್ಕಾರ ರಚನೆಗಾಗಿ ಮಾತುಕತೆ ನಡೆಸುವ ಸಂಪೂರ್ಣ ಜವಾಬ್ದಾರಿಯನ್ನು ಉದ್ಧವ್ ಠಾಕ್ರೆಗೆ ನೀಡಲಾಗಿದೆ, ಠಾಕ್ರೆ ಯಾವುದನ್ನು ನಿರ್ಧರಿಸುತ್ತಾರೆಯೋ ಅದಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ಪ್ರತಾಪ್ ಸರ್ನಾಯ್ಕ್ ಹೇಳಿದ್ದಾರೆ. 

ಶಿವಸೇನೆಯಿಂದ ಯಾರು ಮುಖ್ಯಮಂತ್ರಿ ಅಭ್ಯರ್ಥಿಯಾಗುತ್ತಾರೆ ಎಂಬುದು ಇನ್ನೂ ಅಂತಿಮವಾಗಿಲ್ಲ. ಹೊಸದಾಗಿ ಮುಂದಿನ ಸರ್ಕಾರದಲ್ಲಿ ಆದಿತ್ಯ ಠಾಕ್ರೆ ಸಿಎಂ ಆಗಬೇಕೆಂಬುದು ಆಯ್ಕೆಯಾಗಿರುವ ಶಿವಸೇನೆ ಶಾಸಕರ ಬೇಡಿಕೆಯಾಗಿದೆ. ಒಂದು ವೇಳೆ ಬಿಜೆಪಿ ನಮ್ಮ ಬೇಡಿಕೆಗಳಿಗೆ ಒಪ್ಪದೇ ಇದ್ದಲ್ಲಿ ಬೇರೆ ಆಯ್ಕೆಗಳಿಗೆ ನಾವು ಮುಕ್ತರಾಗಿದ್ದೇವೆ ಎಂದು ಸರ್ನಾಯ್ಕ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT