ದೇಶ

ಜಮ್ಮು ಕಾಶ್ಮೀರ: ಉಗ್ರರಿಂದ ಗ್ರೆನೇಡ್ ದಾಳಿ, 6 ಸಿಆರ್‌ಪಿಎಫ್ ಯೋಧರಿಗೆ ಗಾಯ

Raghavendra Adiga

ಶ್ರೀನಗರ್:  ಸಿಆರ್‌ಪಿಎಫ್ ತಂಡದ ಮೇಲೆ ಉಗ್ರರು ಗ್ರೆನೇಡ್ ಎಸೆದ ಪರಿಣಾಮ ಆರು ಮಂದಿ ಯೋಧರು ಗಾಯಗೊಂಡಿರುವ ಘಟನೆ ಶ್ರೀನಗರದ ಕರಣ್ ನಗರ ಪ್ರದೇಶದಲ್ಲಿ ಶನಿವಾರ ನಡೆದಿದೆ.

ಗ್ರೆನೇಡ್ ದಾಳಿ ನಡೆದಾಗ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ತಂಡವು ತಪಾಸಣಾ ಕೇಂದ್ರವನ್ನು ನಿರ್ವಹಿಸುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರೆನೇಡ್ ಸ್ಫೋಟದ ಕಾರಣ ಸುತ್ತಲಿನ ಪ್ರದೇಶದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಇದೇ ವೇಳೆ ಉಗ್ರ ದಾಳಿಯ ಬಳಿಕ ಪ್ರತಿಯಾಗಿ ಭದ್ರತಾ ಪಡೆಗಳು ಸಹ ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

SCROLL FOR NEXT